Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾ ಮನಸಿಗೆ ಬಂದಂತೆ ಮನೆ ಬದಲಿಸಿದ್ದಾರೆ, ವಸ್ತುಗಳೂ ನಾಪತ್ತೆಯಾಗಿವೆ; ಜಯಲಲಿತಾ ಮನೆಯ ವಾರಸ್ದಾರರ ಆರೋಪ

ಪೋಯಸ್ ಗಾರ್ಡನ್ ಪ್ರದೇಶದಲ್ಲಿರುವ ಈ ಮನೆಯು ಜಯಲಲಿತಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಎರಡು ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿತ್ತು.

ಶಶಿಕಲಾ ಮನಸಿಗೆ ಬಂದಂತೆ ಮನೆ ಬದಲಿಸಿದ್ದಾರೆ, ವಸ್ತುಗಳೂ ನಾಪತ್ತೆಯಾಗಿವೆ; ಜಯಲಲಿತಾ ಮನೆಯ ವಾರಸ್ದಾರರ ಆರೋಪ
ವಿಕೆ ಶಶಿಕಲಾ ಮನೆಯ ವಾರಸ್ದಾರರು
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 11, 2021 | 1:27 PM

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ‘ವೇದ ನಿಲಯಂ’ ನಿವಾಸವನ್ನು ನಿನ್ನೆ ಅವರ ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಸ್ವಾಧೀನಪಡಿಸಿಕೊಂಡಿದ್ದಾರೆ. ಮದ್ರಾಸ್ ಹೈಕೋರ್ಟ್ ಆದೇಶದಂತೆ ಚೆನ್ನೈ ಜಿಲ್ಲಾಧಿಕಾರಿ ಜೆ. ವಿಜಯಾ ರಾಣಿ ಅವರು ಜಯಲಲಿತಾ ಅವರ ಮನೆಯ ಬೀಗದ ಕೀಯನ್ನು ದೀಪಾ ಜಯಕುಮಾರ್ ಮತ್ತು ಜೆ. ದೀಪಕ್ ಅವರಿಗೆ ಹಸ್ತಾಂತರಿಸಿದ್ದಾರೆ. ಪೋಯಸ್ ಗಾರ್ಡನ್ ಪ್ರದೇಶದಲ್ಲಿರುವ ಈ ಮನೆಯು ಜಯಲಲಿತಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಎರಡು ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿತ್ತು. 2017ರ ಫೆಬ್ರವರಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಯಾಗುವವರೆಗೂ ಶಶಿಕಲಾ ಅವರೇ ಈ ಮನೆಯಲ್ಲಿ ವಾಸವಾಗಿದ್ದರು.

ಹಿಂದಿನ ಎಐಎಡಿಎಂಕೆ ಸರ್ಕಾರವು 2020ರಲ್ಲಿ ದಿವಂಗತ ಜಯಲಲಿತಾ ಅವರ ಸ್ಮಾರಕವನ್ನು ರಚಿಸಲು ಈ ಮನೆಯನ್ನು ಸ್ವಾಧೀನಪಡಿಸಿಕೊಂಡಿದ್ದರೂ ಈ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿತ್ತು. ನವೆಂಬರ್ 24ರಂದು ರಾಜ್ಯ ಸರ್ಕಾರವು ಮೂರು ವಾರಗಳ ಅವಧಿಯಲ್ಲಿ ಅವರ ಕಾನೂನುಬದ್ಧ ವಾರಸ್ದಾರರಾದ ಜಯಲಲಿತಾ ಅವರ ಸಹೋದರ ಜಯಕುಮಾರ್ ಅವರ ಮಕ್ಕಳಾದ ದೀಪಾ ಮತ್ತು ದೀಪಕ್ ಅವರಿಗೆ ಆಸ್ತಿಯನ್ನು ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು.

ನಾನು ಈ ಮನೆಗೆ ಮೊದಲೆಲ್ಲ ಬರುತ್ತಿದ್ದೆ. ಜಯಲಲಿತಾ ಅವರು ಬದುಕಿದ್ದಾಗ ಈ ಮನೆ ಬಹಳ ಸುಂದರವಾಗಿತ್ತು. ಆದರೆ, ಈಗ ಮನೆಯ ಅಂದವೇ ಹಾಳಾಗಿದೆ. ಆ ಮನೆಯ ರೂಮ್​ಗಳು ಈಗ ಸಣ್ಣದಾಗಿವೆ. ಅಲ್ಲದೆ, ಮನೆಯಲ್ಲಿದ್ದ ಹಲವಾರು ವಸ್ತುಗಳು ಕಾಣೆಯಾಗಿದ್ದು, ಮನೆ ಖಾಲಿ ಬಿದ್ದಿದೆ ಎಂದು ದೀಪಾ ತಿಳಿಸಿದ್ದಾರೆ. ಅಲ್ಲದೆ, ಜಯಲಲಿತಾ ಅವರಿಗೆ ಆಪ್ತೆಯಾಗಿದ್ದ ಶಶಿಕಲಾ ವಿರುದ್ಧವೂ ವಾಗ್ದಾಳಿ ನಡೆಸಿರುವ ದೀಪಾ, ಜಯಲಲಿತಾ ಅವರ ಮನೆಯನ್ನು ಅವರ ಮನಸಿಗೆ ಬಂದಂತೆ ಬದಲಾಯಿಸಿರುವುದು ಸರಿಯಲ್ಲ ಎಂದಿದ್ದಾರೆ.

ಜಯಲಲಿತಾ ಅವರ ಮನೆಯ ಸ್ಥಿತಿಗತಿ ಕುರಿತು ಮಾತನಾಡಿದ ಜಯಲಲಿತಾ ಅವರ ಸೊಸೆ ದೀಪಾ, ಇಂದು ನಾವು ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಕಲೆಕ್ಟರ್‌ನಿಂದ ಕೀಗಳನ್ನು ಸಂಗ್ರಹಿಸಿ ನಂತರ ನಾವು ಇಲ್ಲಿಗೆ ಬಂದಿದ್ದೇವೆ. ಸರ್ಕಾರಿ ಅಧಿಕಾರಿಗಳು ಮನೆಯ ಬಾಗಿಲನ್ನು ಎರೆದು ಕೊಟ್ಟರು. ಆದರೆ ನಾವು ಬಂದಾಗ ವಿದ್ಯುತ್ ಇರಲಿಲ್ಲ. ನಾವಿಬ್ಬರೂ (ದೀಪಕ್ ಮತ್ತು ನಾನು) ಕುಳಿತುಕೊಂಡು ಮನೆಯನ್ನು ನವೀಕರಿಸುವುದನ್ನು ಮತ್ತು ಇಲ್ಲಿ ಉಳಿದಿರುವ ವಸ್ತುಗಳನ್ನು ಏನು ಮಾಡಬೇಕೆಂದು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ನಾವು ಮನೆಯನ್ನು ಬಳಸಬೇಕಾದರೆ, ನಾವು ಮಾಡಬೇಕು ಬಹಳಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಜಯಲಲಿತಾ ನಿವಾಸ ಸ್ಮಾರಕ ಮಾಡುವ ನಿರ್ಧಾರಕ್ಕೆ ಮದ್ರಾಸ್ ಹೈಕೋರ್ಟ್ ತಡೆ

ಜಯಲಲಿತಾ ಸ್ಮಾರಕಕ್ಕೆ ವಿ.ಕೆ.ಶಶಿಕಲಾ ಭೇಟಿ; ಕಣ್ಣೀರಿಡುತ್ತಲೇ ಪುಷ್ಪ ನಮನ ಸಲ್ಲಿಸಿದ ಅಮ್ಮನ ಆಪ್ತೆ

Published On - 1:26 pm, Sat, 11 December 21

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ