AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ಆಡಿದ ಮಾತಿನಂತೆ ನಡೆದುಕೊಳ್ಳುವ ನಾಯಕನ ಅಗತ್ಯವಿದೆ: ವಿಕೆ ಶಶಿಕಲಾ

ತಮಿಳುನಾಡಿಗೆ ಆಡಿದ ಮಾತಿನಂತೆ ನಡೆದುಕೊಳ್ಳುವ ನಾಯಕನ ಅಗತ್ಯವಿದೆ ಎಂದು ಎಐಎಡಿಎಂಕೆ ಮಾಜಿ ನಾಯಕಿ ವಿಕೆ ಶಶಿಕಲಾ ಹೇಳಿದ್ದಾರೆ. ಎಂಜಿಆರ್, ಜಯಲಲಿತಾರಂತೆ ಎಐಎಡಿಎಂಕೆಯನ್ನು ಮುಂದೆ ಕೊಂಡೊಯ್ಯಲು ನಾನು ಬಯಸುತ್ತೇನೆ.

ತಮಿಳುನಾಡಿಗೆ ಆಡಿದ ಮಾತಿನಂತೆ ನಡೆದುಕೊಳ್ಳುವ ನಾಯಕನ ಅಗತ್ಯವಿದೆ: ವಿಕೆ ಶಶಿಕಲಾ
VK Sasikala
TV9 Web
| Edited By: |

Updated on:Jul 06, 2022 | 10:52 AM

Share

ಚೆನ್ನೈ: ತಮಿಳುನಾಡಿಗೆ ಆಡಿದ ಮಾತಿನಂತೆ ನಡೆದುಕೊಳ್ಳುವ ನಾಯಕನ ಅಗತ್ಯವಿದೆ ಎಂದು ಎಐಎಡಿಎಂಕೆ ಮಾಜಿ ನಾಯಕಿ ವಿಕೆ ಶಶಿಕಲಾ ಹೇಳಿದ್ದಾರೆ.

ಎಂಜಿಆರ್, ಜಯಲಲಿತಾರಂತೆ ಎಐಎಡಿಎಂಕೆಯನ್ನು ಮುಂದೆ ಕೊಂಡೊಯ್ಯಲು ನಾನು ಬಯಸುತ್ತೇನೆ. ಎಂಜಿಆರ್ ಮತ್ತು ಜಯಲಲಿತಾ ಅವರು ಮಾಡಿದ ರೀತಿಯಲ್ಲಿ ಪಕ್ಷವನ್ನು ಮುನ್ನಡೆಸುವುದು ತಮ್ಮ ಆಶಯವಾಗಿದೆ. ನಮ್ಮ ಕಾರ್ಯಕರ್ತರಿಗೆ ಅದು ಚೆನ್ನಾಗಿ ತಿಳಿದಿದೆ.

ಅಷ್ಟೇ ಅಲ್ಲ, ಸತ್ಯವಂತನಾಗಿರುವ ನಾಯಕನಿರಬೇಕು ಮತ್ತು ಅವನು/ಅವಳು ಹಿಂದೆ ಎಂದೂ ಒಮ್ಮೆಯೂ ಪಕ್ಷದ ಬಗ್ಗೆ ಕೆಟ್ಟದಾಗಿ ಮಾತನಾಡಿರಬಾರದು, ಅಂಥವರು ತಮಿಳುನಾಡಿಗೆ ಖಂಡಿತವಾಗಿಯೂ ಒಳ್ಳೆಯದನ್ನು ಮಾಡುತ್ತಾರೆ.

ಎಂಐಎಡಿಎಂಕೆಗೆ ಮತ್ತೆ ಯಾವಾಗ ಸೇರುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಕ್ಕೆ ಒಬ್ಬ ನಾಯಕ ಬೇಕೇ ಬೇಕು ಆದರೆ ಅದನ್ನು ಪಕ್ಷದ ಕಾರ್ಯಕರ್ತರು ನಿರ್ಧರಿಸುತ್ತಾರೆ ಎಂದು ಹೇಳಿದರು.

ಪಳನಿಸ್ವಾಮಿ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲು ಜುಲೈ 11 ರಂದು ಎಡಪ್ಪಾಡಿ ಕೆ ಪಳನಿಸ್ವಾಮಿ ಬೆಂಬಲಿಗರು ಕರೆದಿದ್ದ ಸಾಮಾನ್ಯ ಮಂಡಳಿ ಸಭೆಯ ಕುರಿತು ಶಶಿಕಲಾ ಮಾತನಾಡಿ, ಕಾರ್ಯಕರ್ತರ ಆಶಯವೇ ಅಂತಿಮವಾದದ್ದು ಎಂದು ನಾನು ಪದೇ ಪದೇ ಹೇಳಿದ್ದೇನೆ ಎಂದರು.

ಶಶಿಕಲಾ ಅವರು ಎಐಎಡಿಎಂಕೆಯ ಸ್ವಯಂ ಘೋಷಿತ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಇದು, ಅವರು ಸಕ್ರಿಯ ರಾಜಕಾರಣಕ್ಕೆ ಮರುಪ್ರವೇಶಿಸುತ್ತಿರುವ ಬಗ್ಗೆ ಖಚಿತ ಸಂದೇಶವನ್ನು ರವಾನಿಸಿದೆ. ಜೊತೆಗೆ, ಪಕ್ಷವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿರುವ ಮಾಜಿ ಸಿಎಂ ಪಳನಿಸ್ವಾಮಿ, ಪನೀರ್‌ ಸೆಲ್ವಂ ಅವರಿಗೆ ಒಗ್ಗಟ್ಟಿನಲ್ಲಿ ಬಲವಿದೆ ಎಂಬುದನ್ನು ನೆನಪು ಮಾಡಿಕೊಡಲು ಪ್ರಯತ್ನ ನಡೆಸುತ್ತಿದ್ದಾರೆ.

Published On - 10:48 am, Wed, 6 July 22

Follow Us
TV9 Web
TV9 Web

TV9 Kannada

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ