Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಲಲಿತಾ ಸ್ಮಾರಕಕ್ಕೆ ವಿ.ಕೆ.ಶಶಿಕಲಾ ಭೇಟಿ; ಕಣ್ಣೀರಿಡುತ್ತಲೇ ಪುಷ್ಪ ನಮನ ಸಲ್ಲಿಸಿದ ಅಮ್ಮನ ಆಪ್ತೆ

ಶಶಿಕಲಾ ಬೇನಾಮಿ ಆಸ್ತಿ ಪ್ರಕರಣದಲ್ಲಿ 2017ರಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದ್ದರು. ಜೈಲಿಗೆ ಹೋಗುವ ಮೊದಲು ಅಂದರೆ 2017ರ ಫೆಬ್ರವರಿ 14ರಂದು ಜಯಲಲಿತಾ ಸ್ಮಾರಕಕ್ಕೆ ಭೇಟಿಕೊಟ್ಟು ನಮನ ಸಲ್ಲಿಸಿದ್ದರು.

ಜಯಲಲಿತಾ ಸ್ಮಾರಕಕ್ಕೆ ವಿ.ಕೆ.ಶಶಿಕಲಾ ಭೇಟಿ; ಕಣ್ಣೀರಿಡುತ್ತಲೇ ಪುಷ್ಪ ನಮನ ಸಲ್ಲಿಸಿದ ಅಮ್ಮನ ಆಪ್ತೆ
ಜಯಲಲಿತಾ ಸ್ಮಾರಕಕ್ಕೆ ಭೇಟಿ ನೀಡಿದ ವಿಕೆ ಶಶಿಕಲಾ
Follow us
TV9 Web
| Updated By: Lakshmi Hegde

Updated on: Oct 16, 2021 | 3:10 PM

ಚೆನ್ನೈ: ವಿ.ಕೆ.ಶಶಿಕಲಾ ಜೈಲಿನಿಂದ ಬಿಡುಗಡೆಯಾದ ಮೇಲೆ ರಾಜಕೀಯ (Tamil Nadu Politics)ದಿಂದಲೂ ದೂರವೇ ಉಳಿದಿದ್ದರು. ಮಾಜಿ ಸಿಎಂ ಜಯಲಲಿತಾ ಆಪ್ತೆಯಾಗಿದ್ದ ಶಶಿಕಲಾ (VK Sasikala) ಇಂದು ಚೆನ್ನೈನ ಮರೀನಾ ಬೀಚ್​​ನಲ್ಲಿರುವ ಜಯಲಲಿತಾ ಸ್ಮಾರಕಕ್ಕೆ ಭೇಟಿ ನೀಡಿ, ಅಲ್ಲಿ ಪುಷ್ಪ ನಮನ ಸಲ್ಲಿಸಿದರು. ಜಯಲಲಿತಾ ಸ್ಮಾರಕ್ಕೆ ಶಶಿಕಲಾ ತೆರಳಿದ ವಾಹನದ ಮೇಲೆ ಎಐಎಡಿಎಂಕೆ ಧ್ವಜ ಇತ್ತು. ಹಾಗೇ, ಜಯಲಲಿತಾ ಸ್ಮಾರಕಕ್ಕೆ ಶಶಿಕಲಾ ಪುಷ್ಪನಮನ ಸಲ್ಲಿಸುವ ವೇಳೆ ಅವರು ತುಂಬ ಭಾವುಕರಾಗಿದ್ದಾರೆ. ಕಣ್ಣಲ್ಲಿ ಜಿನುಗುತ್ತಿದ್ದ ನೀರನ್ನು ಒರೆಸಿಕೊಳ್ಳುವ ದೃಶ್ಯ ಕಾಣುತ್ತಿತ್ತು.

ಶಶಿಕಲಾ ಬೇನಾಮಿ ಆಸ್ತಿ ಪ್ರಕರಣದಲ್ಲಿ 2017ರಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದ್ದರು. ಜೈಲಿಗೆ ಹೋಗುವ ಮೊದಲು ಅಂದರೆ 2017ರ ಫೆಬ್ರವರಿ 14ರಂದು ಜಯಲಲಿತಾ ಸ್ಮಾರಕಕ್ಕೆ ಭೇಟಿಕೊಟ್ಟು ನಮನ ಸಲ್ಲಿಸಿದ್ದರು. ಹಾಗೇ, ಕಳೆದ ವರ್ಷ ಫೆಬ್ರವರಿಯಲ್ಲಿ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆಗಿನಿಂದಲೂ ಜಯಲಲಿತಾ ಸ್ಮಾರಕಕ್ಕೆ ಬರಲು ಅವರು ತುಂಬ ಉತ್ಸುಕರಾಗಿದ್ದರು ಎಂದು ಹೇಳಲಾಗಿದೆ.  ಜೈಲಿನಿಂದ ಬಿಡುಗಡೆಯಾದ ಶಶಿಕಲಾ ಮೇಲೆ ಎಲ್ಲರ ಕಣ್ಣಿತ್ತು. ಮತ್ತೆ ರಾಜಕೀಯಕ್ಕೆ ಇಳಿಯುತ್ತಾರೆ ಎಂದೇ ಹೇಳಲಾಗಿತ್ತು. ಆದರೆ ಮಾರ್ಚ್​​ನಲ್ಲಿ ರಾಜಕೀಯದಿಂದ ದೂರವೇ ಇರುವುದಾಗಿ ಅವರು ಘೋಷಿಸಿದ್ದರು. ಹಾಗೇ ನಾನೀಗ ಒಮ್ಮೆಲೇ ರಾಜಕಾರಣಕ್ಕೆ ಬರುವುದರಿಂದ ಎಐಎಡಿಎಂಕೆ  ಪಕ್ಷಕ್ಕೆ ಹಾನಿಯಾಗಬಹುದು ಎಂದು ಹೇಳಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಸೋತು, ಇದೀಗ ತಮಿಳುನಾಡಿನಲ್ಲಿ ಸ್ಟಾಲಿನ್​ ನೇತೃತ್ವದ ಡಿಎಂಕೆ ಅಧಿಕಾರಕ್ಕೆ ಏರಿದೆ. ಜತೆಜತೆಗೆ, ಶಶಿಕಲಾ ಮತ್ತೊಮ್ಮೆ ರಾಜಕೀಯಕ್ಕೆ ಇಳಿಯುತ್ತಾರೆ ಎಂಬ ಸುದ್ದಿಯೂ ಬಲವಾಗಿದೆ.

ಎಐಎಡಿಎಂಕೆ ಕೇವಲ ವಿಧಾನಸಭೆ ಚುನಾವಣೆಯಲ್ಲಷ್ಟೇ ಅಲ್ಲದೆ, ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಸೋತಿದೆ. 153 ಜಿಲ್ಲಾ ಪಂಚಾಯಿತಿ ವಾರ್ಡ್​ಗಳಿಗೆ ನಡೆದ ಚುನಾವಣೆಯಲ್ಲಿ 139ರಲ್ಲಿ ಡಿಎಂಕೆ ಗೆದ್ದರೆ, ಎಐಎಡಿಎಂಕೆ 2 ರಲ್ಲಿ ಮಾತ್ರ ಗೆದ್ದಿದೆ. ಹಾಗೇ, 1421 ಪಂಚಾಯತ್​ ಯೂನಿಯನ್​ ವಾರ್ಡ್ಸ್​​​ಗಳಲ್ಲಿ ಡಿಎಂಕೆ ಮತ್ತು ಎಐಡಿಎಂಕೆಗಳು ಕ್ರಮವಾಗಿ 977 ಮತ್ತು 212 ಸೀಟ್​ ಗೆದ್ದಿವೆ.  ಈ ಹೊತ್ತಲ್ಲಿ ಶಶಿಕಲಾ ಮತ್ತೆ ಪಕ್ಷಕ್ಕೆ ಮರಳುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ಕುಮಾರಸ್ವಾಮಿಗೆ RSS​ ಗಂಧಗಾಳಿ ಗೊತ್ತಿಲ್ಲ; ಯಾವುದೋ ಒಂದು ಪುಸ್ತಕ ಓದಿ ಅದೇ ಸತ್ಯ ಅಂತಾರೆ: ಆರ್ ಅಶೋಕ್

ಪ್ರತಿಸ್ಪರ್ಧಿ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಷ್ಟ್ರೀಯತೆಯ ಬಗ್ಗೆ ತರಬೇತಿ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್