AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿ.ಕೆ.ಶಶಿಕಲಾಗೆ ಮತ್ತೆ ಐಟಿ ಸಂಕಷ್ಟ; 100 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ

ಈ 11 ಆಸ್ತಿಗಳ ಬೆಲೆ 1990ರ ದಶಕದಲ್ಲಿ ಖರೀದಿ ಮಾಡುವಾಗ ಕೇವಲ 20 ಲಕ್ಷ ರೂಪಾಯಿ ಆಗಿತ್ತು. ಆದರೀಗ ಸುಮಾರು 100 ಕೋಟಿ ರೂಪಾಯಿ ಬೆಲೆಬಾಳುತ್ತವೆ.

ವಿ.ಕೆ.ಶಶಿಕಲಾಗೆ ಮತ್ತೆ ಐಟಿ ಸಂಕಷ್ಟ; 100 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ
ವಿ.ಕೆ.ಶಶಿಕಲಾ
TV9 Web
| Edited By: |

Updated on:Sep 08, 2021 | 5:13 PM

Share

ಚೆನ್ನೈ: ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ.ಶಶಿಕಲಾ ಅವರಿಗೆ ಸಂಬಂಧಪಟ್ಟ ಸುಮಾರು 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ (Incom Tax Department) ಜಪ್ತಿ ಮಾಡಿದೆ. ಮಾಜಿ ಸಿಎಂ ಜಯಲಲಿತಾರ ಆಪ್ತೆಯಾಗಿದ್ದ ಶಶಿಕಲಾ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದು, ರಾಜಕಾರಣವನ್ನು ತೊರೆದಿದ್ದಾರೆ. ಇದೀಗ ಚೆನ್ನೈನ ಹೊರವಲಯದಲ್ಲಿರುವ ಪಯನೂರ್​ ಗ್ರಾಮದಲ್ಲಿ, ಸುಮಾರು 24 ಎಕರೆ ಪ್ರದೇಶಗಳಷ್ಟು ವಿಸ್ತೀರ್ಣದಲ್ಲಿದ್ದ 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ, ಬೇನಾಮಿ ನಿಷೇಧ ಕಾಯ್ದೆಯಡಿ ಮುಟ್ಟುಗೋಲು ಹಾಕಿದೆ. ಇವೆಲ್ಲವೂ ಜಯಲಲಿತಾ ಮುಖ್ಯಮಂತ್ರಿಯಾಗಿದ್ದ 1991-1996ರ ಅವಧಿಯಲ್ಲಿ ಖರೀದಿ ಮಾಡಿದ್ದಾಗಿತ್ತು ಎಂದು ಹೇಳಲಾಗಿದೆ.  

ಈ 11 ಆಸ್ತಿಗಳ ಬೆಲೆ 1990ರ ದಶಕದಲ್ಲಿ ಖರೀದಿ ಮಾಡುವಾಗ ಕೇವಲ 20 ಲಕ್ಷ ರೂಪಾಯಿ ಆಗಿತ್ತು. ಆದರೀಗ ಸುಮಾರು 100 ಕೋಟಿ ರೂಪಾಯಿ ಬೆಲೆಬಾಳುತ್ತವೆ. 2014ರಲ್ಲಿ ಕರ್ನಾಟಕ ವಿಶೇಷ ಕೋರ್ಟ್​ನ ಅಂದಿನ ನ್ಯಾಯಾಧೀಶರಾಗಿದ್ದ ಜಾನ್​ ಮೈಕೆಲ್ , ಈ 11 ಆಸ್ತಿಗಳ ಸಂಬಂಧ ತೀರ್ಪು ನೀಡುವಾಗ ಇವಿಷ್ಟೂ ಕೂಡ ನ್ಯಾಯಸಮ್ಮತವಾಗಿ ಮಾಡಿದ ಆಸ್ತಿಗಳಲ್ಲ ಎಂದು ಹೇಳಿದ್ದರು.  ಆ ತೀರ್ಪನ್ನು ಆಧರಿಸಿಯೇ ಇದೀಗ ಐಟಿ ಇಲಾಖೆ ಜಪ್ತಿ ಮಾಡಿದೆ. ಅದರ ಅನ್ವಯ, ವಿ.ಕೆ.ಶಶಿಕಲಾ ಈ ಆಸ್ತಿಗಳನ್ನು ಬಳಕೆ ಮಾಡಬಹುದು. ಆದರೆ ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ವ್ಯವಹಾರಗಳನ್ನೂ ಮಾಡುವಂತಿಲ್ಲ. 66ವರ್ಷದ ಶಶಿಕಲಾ 2017ರಿಂದಲೈ ಜೈಲಿನಲ್ಲಿಯೇ ಇದ್ದರು. 2019ರಲ್ಲಿ ಶಶಿಕಲಾ ಅವರ ಸುಮಾರು 1600 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಐಟಿ ಇಲಾಖೆ ಮುಟ್ಟುಗೋಲು ಹಾಕಿದೆ.

ಇದನ್ನೂ ಓದಿ: ಆ್ಯಂಕರ್​ ಅನುಶ್ರೀಗೆ ಮತ್ತೆ ಸಂಕಷ್ಟ; ಪ್ರಕರಣ ರೀ ಓಪನ್​ ಮಾಡಲು ಅರ್ಜಿ

ಟೋಯಿಂಗ್ ಸಿಬ್ಬಂದಿ ಜೊತೆ ಕಾರು ಮಾಲಕಿ ಮಾತಿನ ಚಕಮಕಿ; ಟೋಯಿಂಗ್ ವಾಹನ ಹತ್ತಿ ಪ್ರತಿಭಟನೆ

Published On - 5:12 pm, Wed, 8 September 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!