AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜೈಲಿನಲ್ಲಿರುವ ಜಯಲಲಿತಾ ದತ್ತು ಮಗ ಸುಧಾಕರನ್​ ಅವಧಿಗೂ ಮೊದಲೇ ರಿಲೀಸ್?

ಸುಧಾಕರನ್​, ಶಶಿಕಲಾ ಮತ್ತು ಇಳವರಸಿಯನ್ನು ಬೆಂಗಳೂರಿನ ಕೇಂದ್ರ ಕಾರಾಗ್ರಹದಲ್ಲಿ ಇಡಲಾಗಿದೆ. ಈ ಮೂವರ ಶಿಕ್ಷೆ ಅವಧಿ ಜನವರಿ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆದರೆ, ಸುಧಾಕರನ್​ ಈಗ ಒಂದುವರೆ ತಿಂಗಳು ಮೊದಲೇ ಜೈಲಿನಿಂದ ಹೊರ ಬರುತ್ತಿದ್ದಾರೆ.

ಬೆಂಗಳೂರು ಜೈಲಿನಲ್ಲಿರುವ ಜಯಲಲಿತಾ ದತ್ತು ಮಗ ಸುಧಾಕರನ್​ ಅವಧಿಗೂ ಮೊದಲೇ ರಿಲೀಸ್?
ಪರಪ್ಪನ ಅಗ್ರಹಾರ ಜೈಲು
ರಾಜೇಶ್ ದುಗ್ಗುಮನೆ
| Edited By: |

Updated on: Dec 18, 2020 | 9:10 PM

Share

ಬೆಂಗಳೂರು: ನಗರದ ಪರಪ್ಪನ ಅಗ್ರಹಾರದಲ್ಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ದತ್ತು ಪುತ್ರ ವಿಎನ್​ ಸುಧಾಕರನ್​ ಅವಧಿಗೂ ಮೊದಲೇ ಜೈಲಿನಿಂದ ಬಿಡುಗಡೆ ಹೊಂದುತ್ತಿದ್ದಾರೆ ಎಂದು ಅವರ ಪರ ವಕೀಲರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಜಯಲಲಿತಾ ದತ್ತು ಪುತ್ರ ಸುಧಾಕರನ್, ಜಯಲಲಿತಾ ಆಪ್ತೆ ವಿಕೆ ಶಶಿಕಲಾ ಹಾಗೂ ಅವರ ಅತ್ತಿಗೆ ಇಲವರಸಿಯನ್ನು ಅಪರಾಧಿಗಳು ಎಂದು ಕೋರ್ಟ್​ ತೀರ್ಪು ನೀಡಿ, ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿತ್ತು.

ಸುಧಾಕರನ್​, ಶಶಿಕಲಾ ಮತ್ತು ಇಲವರಸಿಯನ್ನು ಬೆಂಗಳೂರಿನ ಕೇಂದ್ರ ಕಾರಾಗ್ರಹದಲ್ಲಿ ಇಡಲಾಗಿದೆ. ಈ ಮೂವರ ಶಿಕ್ಷೆ ಅವಧಿ ಜನವರಿ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆದರೆ, ಸುಧಾಕರನ್​ ಈಗ ಒಂದುವರೆ ತಿಂಗಳು ಮೊದಲೇ ಜೈಲಿನಿಂದ ಹೊರ ಬರುತ್ತಿದ್ದಾರೆ.

ವಿಚಾರಣೆ ವೇಳೆ ಸುಧಾಕರನ್​ 92 ದಿನ ಜೈಲಿನಲ್ಲಿ ಕಳೆದಿದ್ದರು. ಹೀಗಾಗಿ ನಾನು ಸ್ಥಳೀಯ ನ್ಯಾಯಾಲಯಕ್ಕೆ ಅವರನ್ನು ಬೇಗ ಬಿಡುಗಡೆ ಮಾಡುವಂತೆ ಕೋರಿದ್ದೆ. ನಾವು ಇಂದು ಅಥವಾ ಸೋಮವಾರ ದಂಡದ ಮೊತ್ತ 10 ಕೋಟಿ ರೂಪಾಯಿ ಕಟ್ಟುತ್ತೇವೆ. ನಂತರ ಸುಧಾಕರನ್​ ರಿಲೀಸ್​ ಆಗಲಿದ್ದಾರೆ. ಸೋಮವಾರದ ಸಂಜೆ ವೇಳೆ ಅವರು ಜೈಲಿನಿಂದ ಹೊರ ಬರುವ ನಿರೀಕ್ಷೆ ಇದೆ ಎಂದು ಸುಧಾಕರನ್​ ಪರ ವಕೀಲರು ಹೇಳಿದ್ದಾರೆ.

ಶಶಿಕಲಾ ಶಿಕ್ಷೆ ಅವಧಿ 2021ರ ಜನವರಿ 27ಕ್ಕೆ ಅಂತ್ಯವಾಗಲಿದೆ. ಶಶಿಕಲಾ ಪರ ವಕೀಲರು ಕೂಡ ಬೇಗ ಬಿಡುಗಡೆ ಮಾಡುವಂತೆ ಗೃಹ ಇಲಾಖೆಗೆ ಮನವಿ ಮಾಡಿದೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳಿರುವಾಗ ಶಶಕಿಲಾ ಜೈಲಿನಿಂದ ಬಿಡುಗಡೆ ಆಗುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಕಾನೂನಿನ ಪ್ರಕಾರ ಶಶಿಕಲಾ ಮುಂದಿನ 6 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಆದರೆ, ಅವರ ಪ್ರಭಾವ ತಮಿಳುನಾಡಿನಲ್ಲಿ ಇನ್ನೂ ಇದೆ ಎಂಬುದು ರಾಜಕೀಯ ತಜ್ಞರ ಅಭಿಪ್ರಾಯ. ಹೀಗಾಗಿ, ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವಿ ನಾಯಕಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಲಾಗುತ್ತಿದೆ.

‘ಈ ಬಾರಿ ಚುನಾವಣಾ ಫೈಟ್​ ರಜನಿ, ಶಶಿಕಲಾ ನಡುವೆ ಇರಲಿದೆ.. ಇದ್ರಿಂದ BJP ಭಾರಿ ಗೊಂದಲಕ್ಕೀಡಾಗಿದೆ’

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!