Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜೈಲಿನಲ್ಲಿರುವ ಜಯಲಲಿತಾ ದತ್ತು ಮಗ ಸುಧಾಕರನ್​ ಅವಧಿಗೂ ಮೊದಲೇ ರಿಲೀಸ್?

ಸುಧಾಕರನ್​, ಶಶಿಕಲಾ ಮತ್ತು ಇಳವರಸಿಯನ್ನು ಬೆಂಗಳೂರಿನ ಕೇಂದ್ರ ಕಾರಾಗ್ರಹದಲ್ಲಿ ಇಡಲಾಗಿದೆ. ಈ ಮೂವರ ಶಿಕ್ಷೆ ಅವಧಿ ಜನವರಿ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆದರೆ, ಸುಧಾಕರನ್​ ಈಗ ಒಂದುವರೆ ತಿಂಗಳು ಮೊದಲೇ ಜೈಲಿನಿಂದ ಹೊರ ಬರುತ್ತಿದ್ದಾರೆ.

ಬೆಂಗಳೂರು ಜೈಲಿನಲ್ಲಿರುವ ಜಯಲಲಿತಾ ದತ್ತು ಮಗ ಸುಧಾಕರನ್​ ಅವಧಿಗೂ ಮೊದಲೇ ರಿಲೀಸ್?
ಪರಪ್ಪನ ಅಗ್ರಹಾರ ಜೈಲು
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 18, 2020 | 9:10 PM

ಬೆಂಗಳೂರು: ನಗರದ ಪರಪ್ಪನ ಅಗ್ರಹಾರದಲ್ಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ದತ್ತು ಪುತ್ರ ವಿಎನ್​ ಸುಧಾಕರನ್​ ಅವಧಿಗೂ ಮೊದಲೇ ಜೈಲಿನಿಂದ ಬಿಡುಗಡೆ ಹೊಂದುತ್ತಿದ್ದಾರೆ ಎಂದು ಅವರ ಪರ ವಕೀಲರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಜಯಲಲಿತಾ ದತ್ತು ಪುತ್ರ ಸುಧಾಕರನ್, ಜಯಲಲಿತಾ ಆಪ್ತೆ ವಿಕೆ ಶಶಿಕಲಾ ಹಾಗೂ ಅವರ ಅತ್ತಿಗೆ ಇಲವರಸಿಯನ್ನು ಅಪರಾಧಿಗಳು ಎಂದು ಕೋರ್ಟ್​ ತೀರ್ಪು ನೀಡಿ, ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿತ್ತು.

ಸುಧಾಕರನ್​, ಶಶಿಕಲಾ ಮತ್ತು ಇಲವರಸಿಯನ್ನು ಬೆಂಗಳೂರಿನ ಕೇಂದ್ರ ಕಾರಾಗ್ರಹದಲ್ಲಿ ಇಡಲಾಗಿದೆ. ಈ ಮೂವರ ಶಿಕ್ಷೆ ಅವಧಿ ಜನವರಿ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆದರೆ, ಸುಧಾಕರನ್​ ಈಗ ಒಂದುವರೆ ತಿಂಗಳು ಮೊದಲೇ ಜೈಲಿನಿಂದ ಹೊರ ಬರುತ್ತಿದ್ದಾರೆ.

ವಿಚಾರಣೆ ವೇಳೆ ಸುಧಾಕರನ್​ 92 ದಿನ ಜೈಲಿನಲ್ಲಿ ಕಳೆದಿದ್ದರು. ಹೀಗಾಗಿ ನಾನು ಸ್ಥಳೀಯ ನ್ಯಾಯಾಲಯಕ್ಕೆ ಅವರನ್ನು ಬೇಗ ಬಿಡುಗಡೆ ಮಾಡುವಂತೆ ಕೋರಿದ್ದೆ. ನಾವು ಇಂದು ಅಥವಾ ಸೋಮವಾರ ದಂಡದ ಮೊತ್ತ 10 ಕೋಟಿ ರೂಪಾಯಿ ಕಟ್ಟುತ್ತೇವೆ. ನಂತರ ಸುಧಾಕರನ್​ ರಿಲೀಸ್​ ಆಗಲಿದ್ದಾರೆ. ಸೋಮವಾರದ ಸಂಜೆ ವೇಳೆ ಅವರು ಜೈಲಿನಿಂದ ಹೊರ ಬರುವ ನಿರೀಕ್ಷೆ ಇದೆ ಎಂದು ಸುಧಾಕರನ್​ ಪರ ವಕೀಲರು ಹೇಳಿದ್ದಾರೆ.

ಶಶಿಕಲಾ ಶಿಕ್ಷೆ ಅವಧಿ 2021ರ ಜನವರಿ 27ಕ್ಕೆ ಅಂತ್ಯವಾಗಲಿದೆ. ಶಶಿಕಲಾ ಪರ ವಕೀಲರು ಕೂಡ ಬೇಗ ಬಿಡುಗಡೆ ಮಾಡುವಂತೆ ಗೃಹ ಇಲಾಖೆಗೆ ಮನವಿ ಮಾಡಿದೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳಿರುವಾಗ ಶಶಕಿಲಾ ಜೈಲಿನಿಂದ ಬಿಡುಗಡೆ ಆಗುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಕಾನೂನಿನ ಪ್ರಕಾರ ಶಶಿಕಲಾ ಮುಂದಿನ 6 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಆದರೆ, ಅವರ ಪ್ರಭಾವ ತಮಿಳುನಾಡಿನಲ್ಲಿ ಇನ್ನೂ ಇದೆ ಎಂಬುದು ರಾಜಕೀಯ ತಜ್ಞರ ಅಭಿಪ್ರಾಯ. ಹೀಗಾಗಿ, ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವಿ ನಾಯಕಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಲಾಗುತ್ತಿದೆ.

‘ಈ ಬಾರಿ ಚುನಾವಣಾ ಫೈಟ್​ ರಜನಿ, ಶಶಿಕಲಾ ನಡುವೆ ಇರಲಿದೆ.. ಇದ್ರಿಂದ BJP ಭಾರಿ ಗೊಂದಲಕ್ಕೀಡಾಗಿದೆ’

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...