AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಜೈಲಿನಲ್ಲಿರುವ ಜಯಲಲಿತಾ ದತ್ತು ಮಗ ಸುಧಾಕರನ್​ ಅವಧಿಗೂ ಮೊದಲೇ ರಿಲೀಸ್?

ಸುಧಾಕರನ್​, ಶಶಿಕಲಾ ಮತ್ತು ಇಳವರಸಿಯನ್ನು ಬೆಂಗಳೂರಿನ ಕೇಂದ್ರ ಕಾರಾಗ್ರಹದಲ್ಲಿ ಇಡಲಾಗಿದೆ. ಈ ಮೂವರ ಶಿಕ್ಷೆ ಅವಧಿ ಜನವರಿ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆದರೆ, ಸುಧಾಕರನ್​ ಈಗ ಒಂದುವರೆ ತಿಂಗಳು ಮೊದಲೇ ಜೈಲಿನಿಂದ ಹೊರ ಬರುತ್ತಿದ್ದಾರೆ.

ಬೆಂಗಳೂರು ಜೈಲಿನಲ್ಲಿರುವ ಜಯಲಲಿತಾ ದತ್ತು ಮಗ ಸುಧಾಕರನ್​ ಅವಧಿಗೂ ಮೊದಲೇ ರಿಲೀಸ್?
ಪರಪ್ಪನ ಅಗ್ರಹಾರ ಜೈಲು
ರಾಜೇಶ್ ದುಗ್ಗುಮನೆ
| Edited By: |

Updated on: Dec 18, 2020 | 9:10 PM

Share

ಬೆಂಗಳೂರು: ನಗರದ ಪರಪ್ಪನ ಅಗ್ರಹಾರದಲ್ಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ದತ್ತು ಪುತ್ರ ವಿಎನ್​ ಸುಧಾಕರನ್​ ಅವಧಿಗೂ ಮೊದಲೇ ಜೈಲಿನಿಂದ ಬಿಡುಗಡೆ ಹೊಂದುತ್ತಿದ್ದಾರೆ ಎಂದು ಅವರ ಪರ ವಕೀಲರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಜಯಲಲಿತಾ ದತ್ತು ಪುತ್ರ ಸುಧಾಕರನ್, ಜಯಲಲಿತಾ ಆಪ್ತೆ ವಿಕೆ ಶಶಿಕಲಾ ಹಾಗೂ ಅವರ ಅತ್ತಿಗೆ ಇಲವರಸಿಯನ್ನು ಅಪರಾಧಿಗಳು ಎಂದು ಕೋರ್ಟ್​ ತೀರ್ಪು ನೀಡಿ, ನಾಲ್ಕು ವರ್ಷ ಜೈಲು ಶಿಕ್ಷೆ ನೀಡಿತ್ತು.

ಸುಧಾಕರನ್​, ಶಶಿಕಲಾ ಮತ್ತು ಇಲವರಸಿಯನ್ನು ಬೆಂಗಳೂರಿನ ಕೇಂದ್ರ ಕಾರಾಗ್ರಹದಲ್ಲಿ ಇಡಲಾಗಿದೆ. ಈ ಮೂವರ ಶಿಕ್ಷೆ ಅವಧಿ ಜನವರಿ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆದರೆ, ಸುಧಾಕರನ್​ ಈಗ ಒಂದುವರೆ ತಿಂಗಳು ಮೊದಲೇ ಜೈಲಿನಿಂದ ಹೊರ ಬರುತ್ತಿದ್ದಾರೆ.

ವಿಚಾರಣೆ ವೇಳೆ ಸುಧಾಕರನ್​ 92 ದಿನ ಜೈಲಿನಲ್ಲಿ ಕಳೆದಿದ್ದರು. ಹೀಗಾಗಿ ನಾನು ಸ್ಥಳೀಯ ನ್ಯಾಯಾಲಯಕ್ಕೆ ಅವರನ್ನು ಬೇಗ ಬಿಡುಗಡೆ ಮಾಡುವಂತೆ ಕೋರಿದ್ದೆ. ನಾವು ಇಂದು ಅಥವಾ ಸೋಮವಾರ ದಂಡದ ಮೊತ್ತ 10 ಕೋಟಿ ರೂಪಾಯಿ ಕಟ್ಟುತ್ತೇವೆ. ನಂತರ ಸುಧಾಕರನ್​ ರಿಲೀಸ್​ ಆಗಲಿದ್ದಾರೆ. ಸೋಮವಾರದ ಸಂಜೆ ವೇಳೆ ಅವರು ಜೈಲಿನಿಂದ ಹೊರ ಬರುವ ನಿರೀಕ್ಷೆ ಇದೆ ಎಂದು ಸುಧಾಕರನ್​ ಪರ ವಕೀಲರು ಹೇಳಿದ್ದಾರೆ.

ಶಶಿಕಲಾ ಶಿಕ್ಷೆ ಅವಧಿ 2021ರ ಜನವರಿ 27ಕ್ಕೆ ಅಂತ್ಯವಾಗಲಿದೆ. ಶಶಿಕಲಾ ಪರ ವಕೀಲರು ಕೂಡ ಬೇಗ ಬಿಡುಗಡೆ ಮಾಡುವಂತೆ ಗೃಹ ಇಲಾಖೆಗೆ ಮನವಿ ಮಾಡಿದೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳಿರುವಾಗ ಶಶಕಿಲಾ ಜೈಲಿನಿಂದ ಬಿಡುಗಡೆ ಆಗುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಕಾನೂನಿನ ಪ್ರಕಾರ ಶಶಿಕಲಾ ಮುಂದಿನ 6 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಆದರೆ, ಅವರ ಪ್ರಭಾವ ತಮಿಳುನಾಡಿನಲ್ಲಿ ಇನ್ನೂ ಇದೆ ಎಂಬುದು ರಾಜಕೀಯ ತಜ್ಞರ ಅಭಿಪ್ರಾಯ. ಹೀಗಾಗಿ, ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವಿ ನಾಯಕಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಲಾಗುತ್ತಿದೆ.

‘ಈ ಬಾರಿ ಚುನಾವಣಾ ಫೈಟ್​ ರಜನಿ, ಶಶಿಕಲಾ ನಡುವೆ ಇರಲಿದೆ.. ಇದ್ರಿಂದ BJP ಭಾರಿ ಗೊಂದಲಕ್ಕೀಡಾಗಿದೆ’

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ