AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಎಸ್​ಐಆರ್ ಪ್ರಕ್ರಿಯೆ​ಯಲ್ಲಿ ಲೋಪ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ ಮೈತ್ರಿ ನಾಯಕರಿಂದ ದೂರು

Voter List Revision: ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ (SIR) ವ್ಯಾಪಕ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ ನೇತೃತ್ವದ ಮೈತ್ರಿ ನಿಯೋಗವು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಬಳಿಕ ದೆಹಲಿಯಲ್ಲಿಯೇ ಮೈತ್ರಿ ನಾಯಕರು ಸುದ್ದಿಗೋಷ್ಠಿಯನ್ನೂ ನಡೆಸಿದ್ದು, ರಾಜ್ಯ ಕಾಂಗ್ರೆಸ್​​ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ.

ಕರ್ನಾಟಕದಲ್ಲಿ ಎಸ್​ಐಆರ್ ಪ್ರಕ್ರಿಯೆ​ಯಲ್ಲಿ ಲೋಪ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ ಮೈತ್ರಿ ನಾಯಕರಿಂದ ದೂರು
ಚುನಾವಣಾ ಆಯೋಗದ ಕೇಂದ್ರ ಕಚೇರಿImage Credit source: Getty Images
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on:Jul 07, 2026 | 4:41 PM

Share

ಮುಖ್ಯಾಂಶಗಳು

  • ಎಸ್​ಐಆರ್ ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ
  • ಬಿಜೆಪಿ-ಜೆಡಿಎಸ್​​ ನಾಯಕರಿಂದ ಮುಖ್ಯ ಚುನಾವಣಾ ಆಯುಕ್ತರ ಭೇಟಿ
  • ಮೈತ್ರಿ ನಾಯಕರಿಂದ ಜ್ಞಾನೇಶ್ ಕುಮಾರ್​ಗೆ ದೂರು ಸಲ್ಲಿಕೆ

ನವದೆಹಲಿ, ಜುಲೈ 07: ಕರ್ನಾಟಕದಲ್ಲಿ ಎಸ್​ಐಆರ್ ಪ್ರಕ್ರಿಯೆ​ಯಲ್ಲಿ ಲೋಪ ಆರೋಪ ಸಂಬಂಧ ದಾಖಲೆ ಸಮೇತ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​ಗೆ ಬಿಜೆಪಿ, ಜೆಡಿಎಸ್ ನಿಯೋಗ ದೂರು ಸಲ್ಲಿಕೆ ಮಾಡಿದೆ. ಕೇಂದ್ರ ಸಚಿವರಾದ ಹೆಚ್​. ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಉಪ ನಾಯಕ ಅರವಿಂದ್​​ ಬೆಲ್ಲದ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಲ್​ಪಿ ನಾಯಕ ಸುರೇಶ್ ​ಬಾಬು, ನಿಖಿಲ್ ಕುಮಾರಸ್ವಾಮಿ ಈ ವೇಳೆ ಉಪಸ್ಥಿತರಿದ್ದರು.

ದೂರು ಸಲ್ಲಿಕೆ ಬೆನ್ನಲ್ಲೇ ಮೈತ್ರಿ ನಾಯಕ ಸುದ್ದಿಗೋಷ್ಠಿ

ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಕೆ ಬಳಿಕ ದೆಹಲಿಯಲ್ಲಿಯೇ ಮೈತ್ರಿ ನಾಯಕರು ಸುದ್ದಿಗೋಷ್ಠಿಯನ್ನೂ ನಡೆಸಿದ್ದಾರೆ. ಎಸ್​ಐಆರ್​​ ಬಗ್ಗೆ ಕರ್ನಾಟಕದಲ್ಲಿ ಕಾಂಗ್ರೆಸ್​​ ಸರ್ಕಾರ ಮೊದಲು ವಿರೋಧ ಮಾಡಿತ್ತು. ಈಗ ಅವರೇ ಅದನ್ನು ಬುಡಮೇಲು ಮಾಡಲು ಹೊರಟಿದ್ದಾರೆ. ಮನೆ ಮನೆಗೆ ಹೋಗಿ ಮತಪಟ್ಟಿ ಪರಿಷ್ಕರಣೆ ಮಾಡಬೇಕೆಂಬ ಬಗ್ಗೆ ಸ್ಪಷ್ಟವಾಗಿ ಚುನಾವಣಾ ಆಯೋಗದ ನಿಮಯವಿದೆ. ಆದರೆ ಕರ್ನಾಟಕದಲ್ಲಿ ಮಸೀದಿ, ದರ್ಗಾ, ಸಮುದಾಯ ಭವನಗಳಲ್ಲಿ ಕುಳಿತು ಎಸ್​ಐಆರ್​​ ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ದೂರಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಕರ್ನಾಟಕದಲ್ಲಿ ಅಕ್ರಮವಾಗಿ ಎಸ್​ಐಆರ್; ಪ್ರಲ್ಹಾದ್ ಜೋಶಿ ಆರೋಪ

‘ಜನರನ್ನು ಅನಗತ್ಯ ಗಾಬರಿಪಡಿಸಲಾಗುತ್ತಿದೆ’

ರಾಜ್ಯ ಸರ್ಕಾರದ ಕೈಕೆಳಗಿರುವ ಅಧಿಕಾರಿಗಳ ಬಳಸಿಕೊಂಡು ಅಕ್ರಮ ಮಾಡಲಾಗ್ತಿದ್ದು, ನಕಲಿ ಮತಗಳನ್ನು ಸೃಷ್ಟಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಗ್ಯಾರಂಟಿ ಕಡಿತಗೊಳ್ಳುವ ಭಯ ಹುಟ್ಟಿಸಿ ಜನರನ್ನು ಅನಗತ್ಯ ಗಾಬರಿಪಡಿಸಲಾಗುತ್ತಿದೆ. ಈ ಬಗ್ಗೆ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ, ಎರಡೂ ಪಕ್ಷಗಳಿಂದ ಮನವಿ ಪತ್ರ ನೀಡಿದ್ದೇವೆ. ಕೂಲಂಕಷವಾಗಿ ಪರಿಶೀಲನೆ ಮಾಡುವ ಬಗ್ಗೆ ಅವರು ಭರವಸೆ ನೀಡಿದ್ದಾರೆ ಎಂದವರು ಹೇಳಿದ್ದಾರೆ.

‘ಬೇರೆ ರಾಜ್ಯದ ಅಧಿಕಾರಿಗಳಿಂದ ಪರಿಷ್ಕರಣೆ ನಡೆಸಿ’

ಎಸ್ಐಆರ್​ನಲ್ಲಿ ಬಾಂಗ್ಲಾದವರ ಹೆಸರು ಸೇರಿಸುವ ಕೆಲಸ ಆಗುತ್ತಿದ್ದು, ಕಾಂಗ್ರೆಸ್​ನವರು ಹಾದಿಬೀದಿಯಲ್ಲಿ ಫಾರಂ ಹಂಚುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಕರ್ನಾಟಕ ಸರ್ಕಾರದಿಂದ ದೇಶವನ್ನು ಅಪಾಯಕ್ಕೆ ಸಿಲುಕಿಸುವ ಕೆಲಸವಾಗ್ತಿದೆ. ನಾವು ಅಕ್ರಮಗಳನ್ನು ಆಯೋಗದ ಗಮನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ ಎಂದವರು ಕಿಡಿ ಕಾರಿದ್ದಾರೆ. ಚುನಾವಣಾ ಆಯೋಗ ಕತ್ತೆ ಕಾಯುತ್ತಿದೆಯಾ ಎಂಬ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕ್ರಮ ಆಗಬೇಕು ಎಂದೂ ಒತ್ತಾಯಿಸಿರುವ ಅಶೋಕ್​​, ಬೇರೆ ರಾಜ್ಯದ ಅಧಿಕಾರಿಗಳನ್ನು ಹಾಕಿ ಮತಪಟ್ಟಿ ಪರಿಷ್ಕರಣೆ ಮಾಡ್ಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:37 pm, Tue, 7 July 26

Follow Us
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ