AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Votevibe Survey: ತಮಿಳುನಾಡು ಚುನಾವಣೆ, ಜನರ ನಾಡಿ ಮಿಡಿತ ಅರಿಯಲು ‘ವೋಟ್ ವೈಬ್’ ಸಮೀಕ್ಷೆ

ಖಾಸಗಿ  ಸಂಸ್ಥೆ ‘ವೋಟ್ ವೈಬ್’ ನಡೆಸುವ 2026ರ  ವಿಧಾನಸಭಾ ಚುನಾವಣಾ ಪೂರ್ವ ಸಮೀಕ್ಷೆಯು ಕೇರಳದ ಬಳಿಕ ಇದೀಗ ತಮಿಳುನಾಡನ್ನು ತಲುಪಿದೆ. ಇದು ಸ್ಟೇಟ್​​ವೈಬ್ ಎಂಬ ಸಮೀಕ್ಷೆಯನ್ನು ಆರಂಭಿಸಿದೆ.  ಈ ಸಮೀಕ್ಷೆಯು ಕೇರಳದಲ್ಲಿ ಪಿಣರಾಯಿ ವಿಜಯನ್, ಎಲ್​ಡಿಎಫ್ ವಿರುದ್ಧ ಬಲವಾದ ಆಡಳಿತ ವಿರೋಧಿ ಅಲೆಯನ್ನು ಬಹಿರಂಗಪಡಿಸಿತ್ತು. ಇದೀಗ ತಮಿಳುನಾಡು ಚುನಾವಣೆಗೆ ಒಂದು ವರ್ಷವಿರುವಾಗಲೇ ಜನರ ನಾಡಿ ಮಿಡಿತವನ್ನು ಅರಿಯಲು ತಮಿಳುನಾಡಿಗೆ ತಲುಪಿದೆ.

Votevibe Survey: ತಮಿಳುನಾಡು ಚುನಾವಣೆ, ಜನರ ನಾಡಿ ಮಿಡಿತ ಅರಿಯಲು ‘ವೋಟ್ ವೈಬ್’ ಸಮೀಕ್ಷೆ
ಎಂಕೆ ಸ್ಟಾಲಿನ್
ನಯನಾ ರಾಜೀವ್
|

Updated on: Jul 14, 2025 | 10:48 AM

Share

ಚೆನ್ನೈ, ಜುಲೈ 14: ಖಾಸಗಿ  ಸಂಸ್ಥೆ ‘ವೋಟ್ ವೈಬ್’ ನಡೆಸುವ 2026ರ  ವಿಧಾನಸಭಾ ಚುನಾವಣಾ ಪೂರ್ವ ಸಮೀಕ್ಷೆಯು ಕೇರಳದ ಬಳಿಕ ಇದೀಗ ತಮಿಳುನಾಡನ್ನು ತಲುಪಿದೆ. ಇದು ಸ್ಟೇಟ್​​ವೈಬ್ ಎಂಬ ಸಮೀಕ್ಷೆಯನ್ನು ಆರಂಭಿಸಿದೆ.  ಈ ಸಮೀಕ್ಷೆಯು ಕೇರಳದಲ್ಲಿ ಪಿಣರಾಯಿ ವಿಜಯನ್, ಎಲ್​ಡಿಎಫ್ ವಿರುದ್ಧ ಬಲವಾದ ಆಡಳಿತ ವಿರೋಧಿ ಅಲೆಯನ್ನು ಬಹಿರಂಗಪಡಿಸಿತ್ತು. ಇದೀಗ ತಮಿಳುನಾಡು ಚುನಾವಣೆಗೆ ಒಂದು ವರ್ಷವಿರುವಾಗಲೇ ಜನರ ನಾಡಿ ಮಿಡಿತವನ್ನು ಅರಿಯಲು ತಮಿಳುನಾಡಿಗೆ ತಲುಪಿದೆ.

ಸ್ಟಾಲಿನ್ ವಿರೋಧಿ ಅಲೆ

ಸಮೀಕ್ಷೆಯ ಪ್ರಕಾರ ಪ್ರತಿಕ್ರಿಯಿಸಿದವರಲ್ಲಿ, ಶೇ.32ರಷ್ಟು ಜನರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರುದ್ಧ ಬಲವಾದ ಆಡಳಿತ ವಿರೋಧಿ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಶೇ. 29ರಷ್ಟು ಆಡಳಿತ ವಿರೋಧಿ ಭಾವನೆ ಹೊಂದಿದ್ದರೆ, ಪುರುಷರು ಶೇ.34ರಷ್ಟು ವಿರೋಧಿ ಭಾವನೆ ಹೊಂದಿದ್ದಾರೆ. ಆಡಳಿತದ ಪರವಾಗಿ ಶೇ.17.9ರಷ್ಟು ಮಂದಿ ಆಡಳಿತದ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ಶೇ. 15ರಷ್ಟ ಪುರುಷರು, ಹಾಗೂ ಶೇ.18ರಷ್ಟು ಮಹಿಳೆಯರು ಆಡಳಿತದ ವಿರೋಧವಾಗಿಯೂ ಅಥವಾ ಪರವಾಗಿಯೂ ಪ್ರತಿಕ್ರಿಯೆ ನೀಡದೆ ತಟಸ್ಥ ನಿಲುವು ವ್ಯಕ್ತಪಡಿಸಿದ್ದಾರೆ.

ಯುವಕರು ಏನಂತಾರೆ?

ಇನ್ನು ವಯಸ್ಸಿನ ವಿಚಾರಕ್ಕೆ ಬಂದರೆ 25ರಿಂದ 34 ವರ್ಷದೊಳಗಿನ ಶೇ.40ರಷ್ಟು ಯುವಕರು ಪ್ರಸ್ತುತ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. 18, 24 ವರ್ಷದೊಳಗಿನ ಶೇ.29ರಷ್ಟು ಜನರು ಆಡಳಿತ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. ಹಾಗೆಯೇ 45-54 ವರ್ಷ ವಯಸ್ಸಿನ ಶೇ.32ರಷ್ಟು ಮಂದಿ ಪ್ರಸ್ತುತ ಆಡಳಿತದ ವಿರುದ್ಧವಾಗಿದ್ದಾರೆ. ಹಾಗೆಯೇ 45-54 ವರ್ಷ ವಯಸ್ಸಿನ ಶೇ.22ರಷ್ಟು ಮಂದಿ ಆಡಳಿತ ಸರ್ಕಾರದ ಪರವಾಗಿ ಮಾತನಾಡಿದ್ದಾರೆ. 25-34 ವರ್ಷ ವಯಸ್ಸಿನ ಯುವಕರ ಪೈಕಿ ಶೇ.12ರಷ್ಟು ಮಂದಿ ಮಾತ್ರ ಸರ್ಕಾರದ ಪರವಾಗಿದ್ದಾರೆ.

ಮತ್ತಷ್ಟು ಓದಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಣ್ಣಾಮಲೈ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಆಯ್ಕೆ

ಶಾಸಕರ ಬಗ್ಗೆ ಜನರಿಗೆ ಏನಿದೆ, ಅಭಿಪ್ರಾಯ?

ಇನ್ನು ಆಡಳಿತ ಸರ್ಕಾರದ ಶಾಸಕರ ವಿಚಾರಕ್ಕೆ ಬಂದರೆ ಶೇ.38.9ರಷ್ಟು ಮಂದಿ ಶಾಸಕರ ಕಾರ್ಯ ವೈಖರಿ ಬಗ್ಗೆ ಅತೃಪ್ತರಾಗಿದ್ದಾರೆ. ಶೇ.42 ಪುರುಷರು ಹಾಗೂ ಶೇ.36ರಷ್ಟು ಮಹಿಳೆಯರು ಶಾಸಕರು ತಮ್ಮ ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡಿಲ್ಲವೆಂದೇ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ವಯಸ್ಸಿನ ವಿಚಾರಕ್ಕೆ ಬಂದರೆ 55ವರ್ಷ ಮೇಲ್ಪಟ್ಟವರೇ ಹೆಚ್ಚಾಗಿ ಶಾಸಕರ ಕೆಲಸವು ತೃಪ್ತಿ ತಂದಿಲ್ಲ ಎಂದಿದ್ದಾರೆ. ಶೇ.48ರಷ್ಟು ಮಂದಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 45-54 ವರ್ಷದೊಳಗಿನ ಶೇ.42ರಷ್ಟು ಮಂದಿ ಕೂಡ ಇದೇ ಅಭಿಪ್ರಾಯ ಹೊಂದಿದ್ದಾರೆ. ಕೇವಲ ಶೇ. 10-11ರಷ್ಟು ಮಂದಿ ಮಾತ್ರ ಶಾಸಕರ ಕಾರ್ಯವೈಖರಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಯಾವ ಯಾವ ಪಕ್ಷವು ಅಧಿಕಾರಕ್ಕೆ ಬರಬೇಕು? ತಮಿಳುನಾಡಿನಲ್ಲಿ ಡಿಎಂಕೆಯೇ ಅಧಿಕಾರಕ್ಕೆ ಬರಬೇಕು ಎಂದು ಶೇ41ರಷ್ಟು ಮಹಿಳೆಯರು, 33ರಷ್ಟು ಪುರುಷರು ಅಭಿಪ್ರಾಯಪಟ್ಟಿದ್ದಾರೆ. ಎಐಎಡಿಎಂಕೆ ಅಧಿಕಾರಕ್ಕೆ ಬರಬೇಕೆಂದು ಶೇ,28ರಷ್ಟು ಮಹಿಳೆಯರು, 36ರಷ್ಟು ಪುರುಷರು ಅಭಿಪ್ರಾಯಪಟ್ಟಿದ್ದಾರೆ. ಟಿವಿಕೆ ಬಗ್ಗೆ ಶೇ.13ರಷ್ಟು ಮಹಿಳೆಯರು, ಶೇ.11ರಷ್ಟು ಪುರುಷರು ಅಭಿಪ್ರಾಯಪಟ್ಟಿದ್ದಾರೆ.

ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿ ಹೇಗಿರುತ್ತೆ?

ಬಿಜೆಪಿ ಹಾಗೂ ಎಐಎಡಿಎಂಕೆ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಉತ್ತಮವೇ ಎಂದು ವೋಟ್ ವೈಬ್ ಕೇಳಿರುವ ಪ್ರಶ್ನೆಯಲ್ಲಿ ಉತ್ತಮ ಎಂದು ಶೇ.38ರಷ್ಟು ಮಹಿಳೆಯರು ಹಾಗೂ ಶೇ.45ರಷ್ಟು ಪುರುಷರು ಅಭಿಪ್ರಾಯಪಟ್ಟಿದ್ದಾರೆ.ಬೇಡವೇ ಬೇಡ ಎಂದು ಶೇ37ರಷ್ಟು ಮಹಿಳೆಯರು ಹಾಗೂ ಶೇ.32ರಷ್ಟು ಪುರುಷರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ