AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Assembly Elections 2021: 7ನೇ ಹಂತದ ಚುನಾವಣೆಯ ಮತದಾನ ಅಂತ್ಯ; ಶೇ 75.06 ಮತದಾನ ದಾಖಲು

West Bengal Voting: 11, 376 ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 5 ಗಂಟೆಯವರೆಗೆ ಶೇ 75.06 ಮತದಾನವಾಗಿದೆ. ಈ ಹಂತದ ಚುನಾವಣೆ ವೇೆಳೆ  ₹332.94 ಕೋಟಿ  ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

West Bengal Assembly Elections 2021: 7ನೇ ಹಂತದ ಚುನಾವಣೆಯ ಮತದಾನ ಅಂತ್ಯ; ಶೇ 75.06 ಮತದಾನ ದಾಖಲು
ಪಶ್ಚಿಮ ಬಂಗಾಳ ಚುನಾವಣೆ (ಕೃಪೆ: ಚುನಾವಣಾ ಆಯೋಗ)
ರಶ್ಮಿ ಕಲ್ಲಕಟ್ಟ
|

Updated on: Apr 26, 2021 | 8:20 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಏಳನೇ ಹಂತದ ಚುನಾವಣೆಗೆ ಮತದಾನ ಮುಕ್ತಾಯವಾಗಿದೆೆ. 11, 376 ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 5 ಗಂಟೆಯವರೆಗೆ ಶೇ 75.06 ಮತದಾನವಾಗಿದೆ. ಈ ಹಂತದ ಚುನಾವಣೆ ವೇೆಳೆ  ₹332.94 ಕೋಟಿ  ಮೌಲ್ಯದ ವಸ್ತುಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.  ಪಶ್ಚಿಮ ಬರ್ಧಮಾನ್, ದಕ್ಷಿಣ ದಿನಜ್​ಪುರ್, ಮಾಲ್ಡಾ ಮತ್ತು ಕೊಲ್ಕತ್ತಾ ಸೇರಿದಂತೆ 34 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆದಿದ್ದು, ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ7 ಗಂಟೆಗೆ ಮತದಾನ ಆರಂಭವಾಗಿದ್ದು 9.30ರ ಹೊತ್ತಿಗೆ ಶೇ17.47 ಮತದಾನವಾಗಿದೆ. ಬೆಳಗ್ಗೆ 11.30ರ ಹೊತ್ತಿಗೆ ಶೇ 37.72 ಮತದಾನ ದಾಖಲು ಆಗಿದೆ. ಮಧ್ಯಾಹ್ನ 1.30ರ ಹೊತ್ತಿಗೆ ಶೇ 55.12 ಮತದಾನ ದಾಖಲಾಗಿದ್ದು ಸಂಜೆ 3.31ರ  ಹೊತ್ತಿಗೆ ಶೇ 67. 27 ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗ ಟ್ವೀಟ್ ಮಾಡಿದೆ.

ಬಂಗಾಳದಿಂದ ಪೊಲೀಸ್ ಅಧಿಕಾರಿಗಳ ವರ್ಗ ಪಶ್ಚಿಮ ಬಂಗಾಳದಲ್ಲಿ ಏಳನೇ ಹಂತದ ಚುನಾವಣೆ ನಡೆಯುತ್ತಿದ್ದಂತೆ ಚುನಾವಣಾ ಆಯೋಗವು ಕೆಲವು ಪೊಲೀಸ್ ಅಧಿಕಾರಿಗಳನ್ನು ಬಂಗಾಳದಿಂದ ವರ್ಗಾವಣೆ ಮಾಡಿದೆ. ಆರ್ಥಿಕ ಅಪರಾಧಗಳ ಇಲಾಖೆಯ ನಿರ್ದೇಶನಾಲಯದ ಪೊಲೀಸ್ ಇನ್ಸ್ ಪೆಕ್ಟರ್ ಶಂತನು ಸಿನ್ಹಾ ಬಿಸ್ವಾಸ್ ಅವರನ್ನು ಕ್ರೈಂ ಇನ್ಸ್ ಪೆಕ್ಟರ್ ಆಗಿ ಡಿಐಡಿ ಜಲ್ಪೈಗುರಿ ವಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಅಂಚೆ ಮತಗಳಲ್ಲಿ ಅವ್ಯವಹಾರ ಮಾಡಿದ್ದಾರೆ ಎಂದು ಬಿಜೆಪಿ ಸಿನ್ಹಾ ಅವರ ಮೇಲೆ ಆರೋಪ ಹೊರಿಸಿತ್ತು.ಅ ಅಸಾನ್ಸಲ್- ದುರ್ಗಾಪುರ್ ಪೊಲೀಸ್ ಸಹಾಯಕ ಆಯುಕ್ತ ಶ್ರೀಮಂತ ಕುಮಾರ್ ಬಂದೋಪಾಧ್ಯಾಯ್ ಅವರನ್ನು ಬೊಲಾಪುರ್​ನ ಸಬ್ ಡಿವಿಷನಲ್ ಪೊಲೀಸ್ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಶುಬೇಂದ್ರ ಕುಮಾರ್ ಅವರು ಬೊಲಾಪುರ್​ನಲ್ಲಿ ಪ್ರಸ್ತುತ ಸಬ್ ಡಿವಿಷನಲ್ ಪೊಲೀಸ್ ಅಧಿಕಾರಿಯಾದ್ದು, ಕೊವಿಡ್ ರೋಗಕ್ಕೊಳಗಾಗಿದ್ದಾರೆ. ಕೃಷ್ಣನಗರ ಪೊಲೀಸ್ ಜಿಲ್ಲೆಯ ಕೃಷ್ಣಗಂಜ್‌ನ ಸರ್ಕಲ್ ಇನ್ಸ್‌ಪೆಕ್ಟರ್ ನಿಹಾರ್ ರಂಜನ್ ರಾಯ್ ಅವರನ್ನು ಮುರ್ಷಿದಾಬಾದ್ ಪೊಲೀಸ್ ಠಾಣೆಯ ಉಸ್ತುವಾರಿ ಹೊಸ ಇನ್ಸ್‌ಪೆಕ್ಟರ್ ಆಗಿ ನೇಮಕ ಮಾಡಲಾಗಿದೆ.

ಅಸನ್ಸೋಲ್ ಕ್ಷೇತ್ರದಲ್ಲಿ ಗಲಭೆ ಅಸನ್ಸೋಲ್ ಪ್ರದೇಶದಿಂದ ಕೆಲವು ಅಹಿತಕರ ಘಟನೆ ವರದಿಯಾಗಿವೆ. ಟಿಎಂಸಿ ಅಭ್ಯರ್ಥಿ ಸಯೋನಿ ಘೋಷ್ ಬಿಜೆಪಿ ಕಾರ್ಯಕರ್ತರು ತಮ್ಮ ಕ್ಷೇತ್ರದಲ್ಲಿ ಮತಗಟ್ಟೆಗಳ ನಿರ್ವಹಣೆಗೆ ತಡೆಯೊಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಬಿಜೆಪಿ ಅಭ್ಯರ್ಥಿ ಅಗ್ನಿಮಿತ್ರ ಪೌಲ್ ಆಧಾರರಹಿತ ಎಂದಿದ್ದಾರೆ. ಘೋಷ್ ಪರಾಭವಗೊಳ್ಳುವ  ಭಯದಿಂದ  ಈ ರೀತಿ ಮಾಡುತ್ತಿದ್ದಾರೆ ಎಂದು ಪೌಲ್ ಹೇಳಿದ್ದಾರೆ.

ಜಮುರಿಯಾ ಕ್ಷೇತ್ರದಲ್ಲಿ, ಎಡಪಕ್ಷದ ಅಭ್ಯರ್ಥಿ ಆಯಿಷೆ ಘೋಷ್, ತಮ್ಮ ಪಕ್ಷದ ಏಜೆಂಟರನ್ನು ಟಿಎಂಸಿ ಕಾರ್ಯಕರ್ತರು ಬೂತ್‌ಗೆ ಪ್ರವೇಶಿಸುವುದನ್ನು ತಡೆದಿದ್ದಾರೆ ಎಂದು ಆರೋಪಿಸಿದ್ದು ಇದನ್ನು ಟಿಎಂಸಿ ನಿರಾಕರಿಸಿದೆ.

ಬಿಜೆಪಿ ಅಭ್ಯರ್ಥಿಯ ಮತಗಟ್ಟೆ ಏಜೆಂಟ್ ಬಂಧನ ನಗರದ ನ್ಯೂ ಅಲಿಪೋರ್ ಪ್ರದೇಶದ ಮತದಾನ ಕೇಂದ್ರದೊಳಗೆ ಕೆಲವು ಮಹಿಳಾ ಮತದಾರರನ್ನು ಕಿರುಕುಳ ನೀಡಿದ ಆರೋಪದ ಮೇಲೆ ರಾಶ್‌ಬೆಹರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೆಫ್ಟಿನೆಂಟ್ ಜನರಲ್ ಸುಬ್ರತಾ ಸಾಹ ಅವರ ಏಜೆಂಟ್ ಮೋಹನ್ ರಾವ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಬಿದ್ಯಾ ಭಾರತಿ ಶಾಲೆಯೊಳಗೆ ತಮ್ಮ ಕೈಗಳನ್ನು ಹಿಡಿದು ಎಳೆಯಲು ಪ್ರಯತ್ನಿಸಿದರು ಎಂದು ಹಲವಾರು ಮಹಿಳಾ ಮತದಾರರು ದೂರು ನೀಡಿದ ಹಿನ್ನೆಲೆಯಲ್ಲಿ ಮೋಹನ್ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದಾಗ್ಯೂ, ರಾವ್ ಆರೋಪಗಳನ್ನು ನಿರಾಕರಿಸಿದ್ದು ಮತ್ತು ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ.

ಟಿಎಂಸಿ ಕಾರ್ಯಕರ್ತರು ಈ ಪ್ರದೇಶದಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಶಾಂತಿಯುತವಾಗಿ ನಡೆಯುತ್ತಿದ್ದ ಮತದಾನಕ್ಕೆ ಅಡ್ಡಿಪಡಿಸುವ ಉದ್ದೇಶ ಇದು ಎಂದು ಸಾಹಾ ಆರೋಪಿಸಿದ್ದಾರೆ.

ಇದನ್ನೂ ಓದಿ: West Bengal Assembly Elections 2021: 7ನೇ ಹಂತದ ಚುನಾವಣೆ; ರಾಶ್‌ಬೆಹರಿ ಕ್ಷೇತ್ರದಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ ಬಿಜೆಪಿಯ ಮತಗಟ್ಟೆ ಏಜೆಂಟ್ ಬಂಧನ

(Voting concluded for the seventh phase of the West Bengal Assembly elections 2021)

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!