AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಸ್ಟ್ ಬೆಂಚ್ ಮೋದಿ; ಬಿಜೆಪಿ ಕಾರ್ಯಾಗಾರದಲ್ಲಿ ಸಾಮಾನ್ಯ ಕಾರ್ಯಕರ್ತನಂತೆ ಕೊನೆ ಸಾಲಿನಲ್ಲಿ ಕುಳಿತ ಪ್ರಧಾನಿ

Narendra Modi sits in last bench during a party workshop: ಮಂಗಳವಾರ (ಸೆ. 9) ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಸಂಸದರನ್ನು ಸಿದ್ಧಗೊಳಿಸಲು ಕಾರ್ಯಾಗಾರ ನಡೆಸಲಾಯಿತು. ಇದರಲ್ಲಿ ಪಾಲ್ಗೊಂಡಿದ್ದ ನರೇಂದ್ರ ಮೋದಿ ಸಾಮಾನ್ಯ ಸಂಸದರ ಜೊತೆ ಕೊನೆಯ ಸಾಲಿನಲ್ಲಿ ಕೂತಿದ್ದರು. ಬಿಜೆಪಿ ಸಂಸದ ರವಿ ಕಿಶನ್ ಈ ಫೋಟೋ ಹಂಚಿಕೊಂಡು, ಬಿಜೆಪಿಯ ಶಕ್ತಿ ಎಂದು ಬಣ್ಣಿಸಿದ್ದಾರೆ.

ಲಾಸ್ಟ್ ಬೆಂಚ್ ಮೋದಿ; ಬಿಜೆಪಿ ಕಾರ್ಯಾಗಾರದಲ್ಲಿ ಸಾಮಾನ್ಯ ಕಾರ್ಯಕರ್ತನಂತೆ ಕೊನೆ ಸಾಲಿನಲ್ಲಿ ಕುಳಿತ ಪ್ರಧಾನಿ
ಕೊನೆ ಸಾಲಿನಲ್ಲಿ ಕುಳಿತ ಪ್ರಧಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 07, 2025 | 7:26 PM

Share

ನವದೆಹಲಿ, ಸೆಪ್ಟೆಂಬರ್ 7: ಉಪರಾಷ್ಟ್ರಪತಿ ಚುನಾವಣೆಗೆ ಸಜ್ಜಾಗಲು ಎನ್​ಡಿಎ ಸಂಸದರಿಗೆ ನಡೆಸಲಾದ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ಭಾಗವಹಿಸಿದ್ದರು. ಸಂಸತ್ ಸಂಕೀರ್ಣದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಸಾಮಾನ್ಯ ಬಿಜೆಪಿ ಸಂಸದರಂತೆ ನರೇಂದ್ರ ಮೋದಿ ಕೊನೆಯ ಸಾಲಿನಲ್ಲಿ ಕುಳಿತಿದ್ದರು.

ವರ್ಕ್​ಶಾಪ್​ನಲ್ಲಿ ಇತರ ಸಂಸದರ ಜೊತೆ ಪ್ರಧಾನಿ ಮೋದಿ ಕೊನೆಯ ಸಾಲಿನಲ್ಲಿ ಕುಳಿತಿದ್ದ ದೃಶ್ಯದ ಫೋಟೋವೊಂದನ್ನು ಬಿಜೆಪಿ ಸಂಸದ ರವಿ ಕಿಶನ್ ಅವರು ಎಕ್ಸ್ ಪೋಸ್ಟ್​ನಲ್ಲಿ ಹಂಚಿಕೊಂಡಿದ್ದಾರೆ. ಬಿಜೆಪಿಯ ಶಕ್ತಿಗೆ ಇದು ದ್ಯೋತಕವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಎನ್​ಡಿಎ ಸಂಸದರ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊನೆಯ ಸಾಲಿನಲ್ಲಿ ಕುಳಿತಿದ್ದರು. ಅವರು ಬಿಜೆಪಿಯ ಶಕ್ತಿಯ ದ್ಯೋತಕವಾಗಿದ್ದಾರೆ. ಈ ಸಂಘಟನೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ಒಂದು ಭಾಗವಾಗಿದ್ದಾರೆ’ ಎಂದು ರವಿ ಕಿಶನ್ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರಿಟಿಷ್ ಅಧಿಕಾರಿಗಳಿಂದ ತಿಹಾರ್ ಜೈಲು ಪರಿಸ್ಥಿತಿ ಪರಿಶೀಲನೆ; ಮಲ್ಯ, ಮೋದಿ ಮತ್ತಿತರರನ್ನು ಭಾರತಕ್ಕೆ ಹಸ್ತಾಂತರಿಸುವ ಕಾಲ ಹತ್ತಿರ ಬಂತಾ?

ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿಗಳ ಆಯ್ಕೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎನ್​ಡಿಎ ಸಂಸದರಿಗೆ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿಯ ಸಂಬಿತ್ ಪಾತ್ರಾ ಅವರ ಎಕ್ಸ್ ಪೋಸ್ಟ್

ಸೆ. 9ರಂದು ನಡೆಯುವ ವೈಸ್ ಪ್ರೆಸಿಡೆಂಟ್ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಸ್ಪರ್ಧಿಸಿದ್ದಾರೆ. ವಿಪಕ್ಷಗಳು ಸೇರಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಅವರನ್ನು ಕಣಕ್ಕಿಳಿಸಿವೆ.

ಪಕ್ಷಗಳ ಬಲಾಬಲ ಪರಿಗಣಿಸಿದರೆ ಎನ್​ಡಿಎ ಅಭ್ಯರ್ಥಿ ರಾಧಾಕೃಷ್ಣವ್ ಅವರಿಗೆ 439 ಸಂಸದರ ಬೆಂಬಲ ಇದೆ. ವಿಪಕ್ಷಗಳ ಅಭ್ಯರ್ಥಿಗೆ ಕೇವಲ 324 ಸದಸ್ಯರ ಬೆಂಬಲ ಇದೆ. ಬಿಜೆಡಿ, ಬಿಆರ್​ಎಸ್ ಪಕ್ಷಗಳ ಸಂಸದರ ಬೆಂಬಲ ಯಾರಿಗೆ ಇದೆ ಎನ್ನುವ ಸುಳಿವು ಇನ್ನೂ ಸಿಕ್ಕಿಲ್ಲ. ಆದಾಗ್ಯೂ ರಾಧಾಕೃಷ್ಣನ್ ಅವರು ಮುಂದಿನ ಉಪರಾಷ್ಟ್ರಪತಿಯಾಗುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕನ ಬಾಯಿಗೆ ಆ್ಯಸಿಡ್ ಸುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಟಿಎಂಸಿ ಶಾಸಕ

ಮಾಜಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನು ಕಣಕ್ಕಿಳಿಸಿ, ಎನ್​ಡಿಎ ಬೆಂಬಲಿಗರಲ್ಲಿ ಹಲವರನ್ನು ತಮ್ಮೆಡೆಗೆ ಸೆಳೆದು ಗೆಲ್ಲುವ ದೂರದ ಆಸೆಯಲ್ಲಿ ವಿಪಕ್ಷಗಳು ಇವೆ. ಸೆ. 9ರಂದ ರಹಸ್ಯ ಮತದಾನ ನಡೆಯುವುದರಿಂದ ವಿಪಕ್ಷಗಳಿಗೆ ಕ್ರಾಸ್ ವೋಟಿಂಗ್ ಸಾಧ್ಯತೆಯು ಎಲ್ಲೋ ಒಂದು ಸಣ್ಣ ಭರವಸೆ ಮೂಡಿಸಿರಬಹುದು. ಇಂಡಿಯಾ ಬ್ಲಾಕ್​ನಿಂದ ಹೊರಗಿರುವ ಎಎಪಿಯ 10 ಸಂಸದರು ಹಾಗೂ ವೈಎಸ್ಸಾರ್ ಕಾಂಗ್ರೆಸ್​ನ 11 ಸಂಸದರು ರಾಧಾಕೃಷ್ಣವ್ ಅವರಿಗೆ ಬೆಂಬಲ ನೀಡಿರುವುದು ಗಮನಾರ್ಹ ಸಂಗತಿ ಎನಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!