AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಚಿದಂಬರಂ ಮಾಡಿದ ಟೀಕೆ ಅಕ್ಷಮ್ಯ: ಜಗದೀಪ್ ಧನ್ಖರ್

ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಧನ್ಖರ್ ಬೆಳಿಗ್ಗೆ ನಾನು ಚಿದಂಬರಂ ಅವರು ಪ್ರಮುಖ ರಾಷ್ಟ್ರೀಯ ದೈನಿಕಕ್ಕೆ ನೀಡಿದ ಸಂದರ್ಶನವನ್ನು ಓದಿದೆ. ಅದರಲ್ಲಿ ಅವರು ಹೊಸ ಕಾನೂನುಗಳನ್ನು ಅರೆಕಾಲಿಕ ವ್ಯಕ್ತಿಗಳು ರಚಿಸಿದ್ದಾರೆ ಎಂದು ಹೇಳಿದ್ದು ನೋಡಿ ನನಗೆ ಅಚ್ಚರಿಯಾಯಿತು. ನಾವು ಸಂಸತ್ತಿನಲ್ಲಿ ಅರೆಕಾಲಿಕವೇ? ಇದು ಸಂಸತ್ತಿನ ಜ್ಞಾನಕ್ಕೆ ಅಕ್ಷಮ್ಯ ಅವಮಾನವಾಗಿದೆ ಎಂದಿದ್ದಾರೆ.

ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಚಿದಂಬರಂ ಮಾಡಿದ ಟೀಕೆ ಅಕ್ಷಮ್ಯ: ಜಗದೀಪ್ ಧನ್ಖರ್
ಜಗದೀಪ್ ಧನ್ಖರ್
ರಶ್ಮಿ ಕಲ್ಲಕಟ್ಟ
|

Updated on:Jul 06, 2024 | 6:08 PM

Share

ದೆಹಲಿ ಜುಲೈ 06: ಮೂರು ಹೊಸ ಕ್ರಿಮಿನಲ್ ಕಾನೂನುಗಳ (criminal laws)ಕುರಿತು ಪಿ ಚಿದಂಬರಂ (P Chidambaram) ಅವರ ಕುಟುಕು ಅವಲೋಕನಗಳ ಬಗ್ಗೆ ಪ್ರತಿಕ್ರಿಯಿಸಿದ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ (Jagdeep Dhankhar) ಮಾಜಿ ಕೇಂದ್ರ ಸಚಿವರ ಹೇಳಿಕೆ ‘ಅಕ್ಷಮ್ಯ’ ಎಂದಿದ್ದಾರೆ. ಚಿದಂಬರಂ ಅವರು ತಮ್ಮ ‘ಅವಹೇಳನಕಾರಿ, ಮಾನಹಾನಿಕರ ಮತ್ತು ಅವಮಾನಕರ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಧನ್ಖರ್ ಒತ್ತಾಯಿಸಿದ್ದಾರೆ.

ಬೆಳಿಗ್ಗೆ ನಾನು ಚಿದಂಬರಂ ಅವರು ಪ್ರಮುಖ ರಾಷ್ಟ್ರೀಯ ದೈನಿಕಕ್ಕೆ ನೀಡಿದ ಸಂದರ್ಶನವನ್ನು ಓದಿದೆ. ಅದರಲ್ಲಿ ಅವರು ಹೊಸ ಕಾನೂನುಗಳನ್ನು ಅರೆಕಾಲಿಕ ವ್ಯಕ್ತಿಗಳು ರಚಿಸಿದ್ದಾರೆ ಎಂದು ಹೇಳಿದ್ದು ನೋಡಿ ನನಗೆ ಅಚ್ಚರಿಯಾಯಿತು. ನಾವು ಸಂಸತ್ತಿನಲ್ಲಿ ಅರೆಕಾಲಿಕವೇ? ಇದು ಸಂಸತ್ತಿನ ಜ್ಞಾನಕ್ಕೆ ಅಕ್ಷಮ್ಯ ಅವಮಾನವಾಗಿದೆ ಎಂದು ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಧನ್ಖರ್ ಹೇಳಿದ್ದಾರೆ.

ಚಿದಂಬರಂ ಹಿರಿಯ ಕಾಂಗ್ರೆಸಿಗರು, ಕೇಂದ್ರದ ಮಾಜಿ ಹಣಕಾಸು ಸಚಿವ ಮತ್ತು ದೀರ್ಘ ಕಾಲ ಸಂಸದರಾಗಿದ್ದವರು ಹೀಗೆ ಹೇಳಿದ್ದು ಆಘಾತವುಂಟು ಮಾಡಿದೆ ಎಂದಿದ್ದಾರೆ ಧನ್ಖರ್.

ತಿಳುವಳಿಕೆಯುಳ್ಳ ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ನಿಮ್ಮನ್ನು ದಾರಿತಪ್ಪಿಸಿದಾಗ, ನಾವು ಎಚ್ಚರದಿಂದಿರಬೇಕು. ಹೊಸ ಶಾಸನಗಳು ಹೇಗೆ ‘ವಸಾಹತುಶಾಹಿ ಪರಂಪರೆಯಿಂದ ನಮ್ಮನ್ನು ಹೊರತಂದವು’ ಮತ್ತು ‘ಯುಗಮಾನದ ಆಯಾಮ’ ನೀಡಿದವು ಎಂಬುದನ್ನು ನಾವು ಗಮನಿಸಬೇಕು.

“ಇವುಗಳು ಸದನದಲ್ಲಿ ಚರ್ಚೆಯಾಗುತ್ತಿರುವಾಗ, ಹಣಕಾಸು ಸಚಿವರಾಗಿ ಉತ್ತಮ ಹಿನ್ನೆಲೆ ಹೊಂದಿರುವ ಈ ಮಹನೀಯರು (ಚಿದಂಬರಂ) ಸುಮ್ಮನಿದ್ದರು. ‘ಕರ್ತವ್ಯ ವೈಫಲ್ಯಕ್ಕೆ ಅವರು ಸ್ವತಃ ಜವಾಬ್ದಾರರಾಗಿರುತ್ತಾರೆ. ನಿಮ್ಮ ಕಡೆಯಿಂದ ಕಮಿಷನ್/ ಕರ್ತವ್ಯ ಲೋಪ ಇದನ್ನು ಎಂದಿಗೂ ವಿವರಿಸಲಾಗುವುದಿಲ್ಲ” ಎಂದು ಧನ್ಖರ್ ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರ ‘ಅಭಯ ಮುದ್ರೆ’ ಹೇಳಿಕೆಗೆ ಎಸ್‌ಜಿಪಿಸಿ ಖಂಡನೆ

ಭಾರತೀಯ ನ್ಯಾಯ ಸಂಹಿತಾ (BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಮತ್ತು ಭಾರತೀಯ ಸಾಕ್ಷಾ ಅಧಿನಿಯಮ್ (BAS) – ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳಾಗಿದ್ದು ಇದು ನಂತರ ಜುಲೈ 1 ರಂದು ಜಾರಿಗೆ ಬಂದಿತು. ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಇವುಗಳನ್ನು ಪರಿಚಯಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Sat, 6 July 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?