AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಚಿದಂಬರಂ ಮಾಡಿದ ಟೀಕೆ ಅಕ್ಷಮ್ಯ: ಜಗದೀಪ್ ಧನ್ಖರ್

ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಧನ್ಖರ್ ಬೆಳಿಗ್ಗೆ ನಾನು ಚಿದಂಬರಂ ಅವರು ಪ್ರಮುಖ ರಾಷ್ಟ್ರೀಯ ದೈನಿಕಕ್ಕೆ ನೀಡಿದ ಸಂದರ್ಶನವನ್ನು ಓದಿದೆ. ಅದರಲ್ಲಿ ಅವರು ಹೊಸ ಕಾನೂನುಗಳನ್ನು ಅರೆಕಾಲಿಕ ವ್ಯಕ್ತಿಗಳು ರಚಿಸಿದ್ದಾರೆ ಎಂದು ಹೇಳಿದ್ದು ನೋಡಿ ನನಗೆ ಅಚ್ಚರಿಯಾಯಿತು. ನಾವು ಸಂಸತ್ತಿನಲ್ಲಿ ಅರೆಕಾಲಿಕವೇ? ಇದು ಸಂಸತ್ತಿನ ಜ್ಞಾನಕ್ಕೆ ಅಕ್ಷಮ್ಯ ಅವಮಾನವಾಗಿದೆ ಎಂದಿದ್ದಾರೆ.

ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಚಿದಂಬರಂ ಮಾಡಿದ ಟೀಕೆ ಅಕ್ಷಮ್ಯ: ಜಗದೀಪ್ ಧನ್ಖರ್
ಜಗದೀಪ್ ಧನ್ಖರ್
ರಶ್ಮಿ ಕಲ್ಲಕಟ್ಟ
|

Updated on:Jul 06, 2024 | 6:08 PM

Share

ದೆಹಲಿ ಜುಲೈ 06: ಮೂರು ಹೊಸ ಕ್ರಿಮಿನಲ್ ಕಾನೂನುಗಳ (criminal laws)ಕುರಿತು ಪಿ ಚಿದಂಬರಂ (P Chidambaram) ಅವರ ಕುಟುಕು ಅವಲೋಕನಗಳ ಬಗ್ಗೆ ಪ್ರತಿಕ್ರಿಯಿಸಿದ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ (Jagdeep Dhankhar) ಮಾಜಿ ಕೇಂದ್ರ ಸಚಿವರ ಹೇಳಿಕೆ ‘ಅಕ್ಷಮ್ಯ’ ಎಂದಿದ್ದಾರೆ. ಚಿದಂಬರಂ ಅವರು ತಮ್ಮ ‘ಅವಹೇಳನಕಾರಿ, ಮಾನಹಾನಿಕರ ಮತ್ತು ಅವಮಾನಕರ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಧನ್ಖರ್ ಒತ್ತಾಯಿಸಿದ್ದಾರೆ.

ಬೆಳಿಗ್ಗೆ ನಾನು ಚಿದಂಬರಂ ಅವರು ಪ್ರಮುಖ ರಾಷ್ಟ್ರೀಯ ದೈನಿಕಕ್ಕೆ ನೀಡಿದ ಸಂದರ್ಶನವನ್ನು ಓದಿದೆ. ಅದರಲ್ಲಿ ಅವರು ಹೊಸ ಕಾನೂನುಗಳನ್ನು ಅರೆಕಾಲಿಕ ವ್ಯಕ್ತಿಗಳು ರಚಿಸಿದ್ದಾರೆ ಎಂದು ಹೇಳಿದ್ದು ನೋಡಿ ನನಗೆ ಅಚ್ಚರಿಯಾಯಿತು. ನಾವು ಸಂಸತ್ತಿನಲ್ಲಿ ಅರೆಕಾಲಿಕವೇ? ಇದು ಸಂಸತ್ತಿನ ಜ್ಞಾನಕ್ಕೆ ಅಕ್ಷಮ್ಯ ಅವಮಾನವಾಗಿದೆ ಎಂದು ಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಧನ್ಖರ್ ಹೇಳಿದ್ದಾರೆ.

ಚಿದಂಬರಂ ಹಿರಿಯ ಕಾಂಗ್ರೆಸಿಗರು, ಕೇಂದ್ರದ ಮಾಜಿ ಹಣಕಾಸು ಸಚಿವ ಮತ್ತು ದೀರ್ಘ ಕಾಲ ಸಂಸದರಾಗಿದ್ದವರು ಹೀಗೆ ಹೇಳಿದ್ದು ಆಘಾತವುಂಟು ಮಾಡಿದೆ ಎಂದಿದ್ದಾರೆ ಧನ್ಖರ್.

ತಿಳುವಳಿಕೆಯುಳ್ಳ ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ನಿಮ್ಮನ್ನು ದಾರಿತಪ್ಪಿಸಿದಾಗ, ನಾವು ಎಚ್ಚರದಿಂದಿರಬೇಕು. ಹೊಸ ಶಾಸನಗಳು ಹೇಗೆ ‘ವಸಾಹತುಶಾಹಿ ಪರಂಪರೆಯಿಂದ ನಮ್ಮನ್ನು ಹೊರತಂದವು’ ಮತ್ತು ‘ಯುಗಮಾನದ ಆಯಾಮ’ ನೀಡಿದವು ಎಂಬುದನ್ನು ನಾವು ಗಮನಿಸಬೇಕು.

“ಇವುಗಳು ಸದನದಲ್ಲಿ ಚರ್ಚೆಯಾಗುತ್ತಿರುವಾಗ, ಹಣಕಾಸು ಸಚಿವರಾಗಿ ಉತ್ತಮ ಹಿನ್ನೆಲೆ ಹೊಂದಿರುವ ಈ ಮಹನೀಯರು (ಚಿದಂಬರಂ) ಸುಮ್ಮನಿದ್ದರು. ‘ಕರ್ತವ್ಯ ವೈಫಲ್ಯಕ್ಕೆ ಅವರು ಸ್ವತಃ ಜವಾಬ್ದಾರರಾಗಿರುತ್ತಾರೆ. ನಿಮ್ಮ ಕಡೆಯಿಂದ ಕಮಿಷನ್/ ಕರ್ತವ್ಯ ಲೋಪ ಇದನ್ನು ಎಂದಿಗೂ ವಿವರಿಸಲಾಗುವುದಿಲ್ಲ” ಎಂದು ಧನ್ಖರ್ ಹೇಳಿದ್ದಾರೆ.

ಇದನ್ನೂ ಓದಿ: ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರ ‘ಅಭಯ ಮುದ್ರೆ’ ಹೇಳಿಕೆಗೆ ಎಸ್‌ಜಿಪಿಸಿ ಖಂಡನೆ

ಭಾರತೀಯ ನ್ಯಾಯ ಸಂಹಿತಾ (BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಮತ್ತು ಭಾರತೀಯ ಸಾಕ್ಷಾ ಅಧಿನಿಯಮ್ (BAS) – ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾನೂನುಗಳಾಗಿದ್ದು ಇದು ನಂತರ ಜುಲೈ 1 ರಂದು ಜಾರಿಗೆ ಬಂದಿತು. ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಇವುಗಳನ್ನು ಪರಿಚಯಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Sat, 6 July 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ