AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vrindavan Temple Corridor: ವೃಂದಾವನ ದೇವಸ್ಥಾನ ಕಾರಿಡಾರ್​​ ವಿರೋಧಿಸಿ ಪ್ರತಿಭಟನೆ; ರಕ್ತದಲ್ಲಿ 108 ಪತ್ರ ಬರೆದು ಮೋದಿಗೆ ರವಾನೆ

ವೃಂದಾವನ್ ಕಾರಿಡಾರ್ ಯೋಜನೆಯನ್ನು ಕೈಬಿಡುವಂತೆ ಮತ್ತು ವೃಂದಾವನದ ಪರಂಪರೆಯನ್ನು ಉಳಿಸುವಂತೆ ಸ್ಥಳೀಯರು ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ.

Vrindavan Temple Corridor: ವೃಂದಾವನ ದೇವಸ್ಥಾನ ಕಾರಿಡಾರ್​​ ವಿರೋಧಿಸಿ ಪ್ರತಿಭಟನೆ; ರಕ್ತದಲ್ಲಿ 108 ಪತ್ರ ಬರೆದು ಮೋದಿಗೆ ರವಾನೆ
ವೃಂದಾವನ ದೇವಸ್ಥಾನ ಕಾರಿಡಾರ್
TV9 Web
| Updated By: ಸುಷ್ಮಾ ಚಕ್ರೆ|

Updated on: Jan 18, 2023 | 1:11 PM

Share

ನವದೆಹಲಿ: ವೃಂದಾವನದ ಬಂಕೆ ಬಿಹಾರಿ ದೇವಸ್ಥಾನದ (Banke Bihari temple) ಸುತ್ತಲೂ ನಿರ್ಮಿಸಲು ಉದ್ದೇಶಿಸಿರುವ ಕಾರಿಡಾರ್ ವಿರುದ್ಧ ಮಂಗಳವಾರ ಪ್ರತಿಭಟನೆ ತೀವ್ರಗೊಂಡಿದೆ. ಈ ವೇಳೆ ಅರ್ಚಕರು, ವ್ಯಾಪಾರಿಗಳು ಮತ್ತು ಸ್ಥಳೀಯ ನಿವಾಸಿಗಳು ಈ ಕಾರಿಡಾರ್ ಯೋಜನೆಯ (Vrindavan Temple Corridor) ವಿನ್ಯಾಸಗಳ ಪ್ರತಿಗಳನ್ನು ಸುಟ್ಟುಹಾಕಿದ್ದಾರೆ. ಅಲ್ಲದೆ, ಪ್ರತಿಭಟನಾಕಾರರು ರಕ್ತದಿಂದ 108 ಪತ್ರಗಳನ್ನು ಬರೆದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath) ಅವರಿಗೆ ಕಳುಹಿಸಿದ್ದಾರೆ.

ವೃಂದಾವನ್ ಕಾರಿಡಾರ್ ಯೋಜನೆಯನ್ನು ಕೈಬಿಡುವಂತೆ ಮತ್ತು ವೃಂದಾವನದ ಪರಂಪರೆಯನ್ನು ಉಳಿಸುವಂತೆ ಸ್ಥಳೀಯರು ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ. ಪ್ರತಿಭಟನಾಕಾರರು ನಡೆಸಿದ ಧರಣಿಯಿಂದಾಗಿ ಬಂಕೆ ಬಿಹಾರಿ ದೇವಸ್ಥಾನದ ಬಳಿಯ ಮಾರುಕಟ್ಟೆಗಳನ್ನು ಮಂಗಳವಾರದ ಮಧ್ಯಾಹ್ನದ ಬಳಿಕ ಮುಚ್ಚಲಾಯಿತು.

ಇದನ್ನೂ ಓದಿ: ಕರ್ತವ್ಯಕ್ಕೆ ಹಾಜರಾಗದಿದ್ದರೆ ಅಮಾನತು; ಪ್ರತಿಭಟನೆಯಲ್ಲಿ ನಿರತ ಪಂಜಾಬ್ ನಾಗರಿಕ ಸೇವಾ ಅಧಿಕಾರಿಗಳಿಗೆ ಭಗವಂತ್ ಮಾನ್ ಖಡಕ್ ಎಚ್ಚರಿಕೆ

ಬಂಕೆ ಬಿಹಾರಿ ವ್ಯಾಪಾರಿ ಸಂಘದ ಅಧ್ಯಕ್ಷ ಅಮಿತ್ ಗೌತಮ್ ಮಾತನಾಡಿ, ವೃಂದಾವನದ ಪರಂಪರೆಯನ್ನು ಉಳಿಸಲು ರಕ್ತದಿಂದ ಬರೆದ 108 ಪತ್ರಗಳನ್ನು ಪ್ರಧಾನಿ ಮತ್ತು ಸಿಎಂಗೆ ಕಳುಹಿಸಲಾಗಿದೆ ಎಂದಿದ್ದಾರೆ. “ಒಂದೆಡೆ, ನಾವು ಸುಪ್ರೀಂ ಕೋರ್ಟ್‌ನಿಂದ ಪರಿಹಾರವನ್ನು ಕೋರುತ್ತೇವೆ. ಇನ್ನೊಂದೆಡೆ, ಈ ಯೋಜನೆ ವಿರುದ್ಧ ನಮ್ಮ ಆಂದೋಲನವನ್ನು ತೀವ್ರಗೊಳಿಸಲಾಗುತ್ತಿದೆ” ಎಂದು ಅಮಿತ್ ಗೌತಮ್ ಹೇಳಿದ್ದಾರೆ.

ಇದನ್ನೂ ಓದಿ: ಅರಣ್ಯಾಧಿಕಾರಿ ಶಿಲ್ಪಾ ಅಮಾನತು ಆದೇಶ ರದ್ದತಿಗೆ ಒತ್ತಾಯಿಸಿ ಎಸ್​ಸಿ ಎಸ್​ಟಿ ಒಕ್ಕೂಟದಿಂದ ಪ್ರತಿಭಟನೆ

85 ವರ್ಷ ವಯಸ್ಸಿನ ಪ್ರತಿಭಟನಾಕಾರರಾದ ಶಕುಂತಲಾ ದೇವಿ ಗೋಸ್ವಾಮಿ, ಕಾರಿಡಾರ್ ನಿರ್ಮಾಣವು ವೃಂದಾವನದ ಪರಂಪರೆಯನ್ನು ಹಾಳುಮಾಡುತ್ತದೆ. ಹಾಗೂ ನಾವು ನಿರಾಶ್ರಿತರಾಗುತ್ತೇವೆ ಎಂದು ಬೇಸರ ಹೊರಹಾಕಿದ್ದಾರೆ.

ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಕಾರಿಡಾರ್ ಯೋಜನೆಯ ಮಾದರಿಯಲ್ಲಿ ನಿರ್ಮಿಸಲಾಗುತ್ತಿರುವ ಈ ಕಾರಿಡಾರ್ ವಿರುದ್ಧ ಜನವರಿ 12ರಂದು ಪ್ರತಿಭಟನೆ ಆರಂಭವಾಗಿದೆ. ಜನವರಿ 23ರಂದು ಈ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ