ದೆಹಲಿ: ದೆಹಲಿಯ (Delhi) ಅಲಿಪುರ್ನಲ್ಲಿ (Alipur) ನಿರ್ಮಾಣ ಹಂತದಲ್ಲಿರುವ ವೇರ್ಹೌಸ್ನ ಗೋಡೆ ಕುಸಿದು (wall collapses) 5 ಮಂದಿ ಸಾವಿಗೀಡಾಗಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ 14 ಮಂದಿಯನ್ನು ಅವಶೇಷಗಳ ಅಡಿಯಿಂದ ತೆಗೆಯಲಾಗಿದೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದರಲ್ಲಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಅಲಿಪುರದ ಚೌಹಾನ್ ಧರಂಕಥಾ ಬಳಿ ಬಾಕೌಲಿ ಗ್ರಾಮದಲ್ಲಿ ನಡೆದಿದೆ. ಅವಶೇಷಗಳನ್ನು ಅಲ್ಲಿಂದ ತೆರವು ಮಾಡಲಾಗಿದೆ. ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅತೀವ ದುಃಖ ವ್ಯಕ್ತಪಡಿಸಿದ್ದಾರೆ. ದೆಹಲಿಯ ಅಲಿಪುರದಲ್ಲಿ ನಡೆದ ದುರಂತ ಅತೀವ ನೋವುಂಟು ಮಾಡಿದೆ. ಈ ದುರಂತದಲ್ಲಿ ಸಾವಿಗೀಡಾದವರಿಗೆ ಸಂತಾಪಗಳು, ಗಾಯಗೊಂಡವರು ಶೀಘ್ರದಲ್ಲೇ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Anguished by the mishap in Alipur, Delhi. My thoughts are with those who have lost their loved ones. I pray that those who are injured recover at the earliest: PM @narendramodi
— PMO India (@PMOIndia) July 15, 2022
अलीपुर में दुखद हादसा हुआ। ज़िला प्रशासन राहत और बचाव के काम में जुटा हुआ है। मैं स्वयं राहत कार्य पर नज़र रखे हुए हूँ।
दिवंगत आत्माओं की शांति के लिए ईश्वर से प्रार्थना करता हूँ। https://t.co/ShLAJSOneX
— Arvind Kejriwal (@ArvindKejriwal) July 15, 2022
ಇದಕ್ಕಿಂತ ಮೊದಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಾವಿಗೀಡಾದವರಿಗೆ ಸಂತಾಪ ಸೂಚಿಸಿದ್ದು ಜಿಲ್ಲಾಡಳಿ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ ಎಂದು ಹೇಳಿದ್ದಾರೆ.ವರದಿಗಳ ಪ್ರಕಾರ ರಕ್ಷಣಾ ಕಾರ್ಯ ಮುಂದುವರಿದಿದ್ದು, ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.
Published On - 6:37 pm, Fri, 15 July 22