AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಪೊಲೀಸರ ಎನ್​ಕೌಂಟರ್​, ಬಿಹಾರದ ವಾಂಟೆಡ್ ಗ್ಯಾಂಗ್​ಸ್ಟರ್​ ಹತ್ಯೆ

ಪೊಲೀಸರು ಉತ್ತರ ಪ್ರದೇಶದಲ್ಲಿ ನಡೆಸಿದ ಎನ್​ಕೌಂಟರ್​ನಲ್ಲಿ ಬಿಹಾರ ಮೂಲದ ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್ ನೀಲೇಶ್​ ರೈ ಎಂಬಾತನನ್ನು ಹತ್ಯೆ ಮಾಡಲಾಗಿದೆ.

ಉತ್ತರ ಪ್ರದೇಶದಲ್ಲಿ ಪೊಲೀಸರ ಎನ್​ಕೌಂಟರ್​, ಬಿಹಾರದ ವಾಂಟೆಡ್ ಗ್ಯಾಂಗ್​ಸ್ಟರ್​ ಹತ್ಯೆ
ನಯನಾ ರಾಜೀವ್
|

Updated on: Jun 06, 2024 | 7:57 AM

Share

ಉತ್ತರ ಪ್ರದೇಶದಲ್ಲಿ ಪೊಲೀಸರು ನಡೆಸಿದ ಎನ್​ಕೌಂಟರ್​ನಲ್ಲಿ ಬಿಹಾರದ ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್(Gangster)​ ನೀಲೇಶ್​ ರೈ ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನನ್ನು ಹಿಡಿದುಕೊಟ್ಟವರಿಗೆ 2.5 ಲಕ್ಷ ಬಹುಮಾನವನ್ನು ಕೂಡ ಘೋಷಿಸಲಾಗಿತ್ತು. ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಗಳ (ಎಸ್‌ಟಿಎಫ್) ಜಂಟಿ ತಂಡ ಬುಧವಾರ ರಾತ್ರಿ ಎನ್‌ಕೌಂಟರ್ ನಡೆಸಿದೆ.

ಬಿಹಾರದ ಬೇಗುಸರಾಯ್ ಜಿಲ್ಲೆಗೆ ಸೇರಿದ ನೀಲೇಶ್ ರೈ ವಿರುದ್ಧ ಕೊಲೆ, ಲೂಟಿ ಮತ್ತು ಸುಲಿಗೆ ಸೇರಿದಂತೆ 16 ಪ್ರಕರಣಗಳು ದಾಖಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ (ಯುಪಿ ಎಸ್‌ಟಿಎಫ್ ಮತ್ತು ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಬ್ ಯಶ್ ಹೇಳಿದ್ದಾರೆ.

ಯುಪಿ ಎಸ್‌ಟಿಎಫ್‌ನ ನೋಯ್ಡಾ ಘಟಕ ಮತ್ತು ಬಿಹಾರ ಎಸ್‌ಟಿಎಫ್ ಜಂಟಿ ಕಾರ್ಯಾಚರಣೆಯಲ್ಲಿ, ಮುಜಾಫರ್‌ನಗರದ ರತನ್‌ಪುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಯಶ್ ಹೇಳಿದರು.

ಫೆಬ್ರವರಿ 24 ರಂದು, ಪೊಲೀಸ್ ತಂಡವು ಬೇಗುಸರಾಯ್‌ನಲ್ಲಿರುವ ರೈ ಅವರ ಅಡಗುತಾಣದ ಮೇಲೆ ದಾಳಿ ನಡೆಸಿತ್ತು, ಆಗ ಆತ ಸಹಚರರೊಂದಿಗೆ ಪೊಲೀಸರ ಮೇಲೆ ಮನಬಂದಂತೆ ಗುಂಡು ಹಾರಿಸಿ ಪರಾರಿಯಾಗಿದ್ದ.

ಮತ್ತೊಂದು ಘಟನೆ

ಗ್ಯಾಂಗ್ ಸ್ಟರ್ ಅತೀಕ್ ಗೆ 9 ಬಾರಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು ಗ್ಯಾಂಗ್​ಸ್ಟರ್​ ರಾಜಕಾರಣಿ ಅತೀಕ್ ಅಹ್ಮದ್ ಅವರಿಗೆ 9 ಬಾರಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಪ್ರಯಾಗರಾಜ್‌ನ ಶಾಹಗಂಜ್ ಪ್ರದೇಶದ ಆಸ್ಪತ್ರೆಯೊಂದರ ಹೊರಗೆ ಅತೀಕ್ ಮತ್ತು ಅವರ ಸಹೋದರ ಅಶ್ರಫ್ ನನ್ನು ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ದರೋಡೆಕೋರನ ದೇಹದಲ್ಲಿ ಒಂಬತ್ತು ಗುಂಡೇಟುಗಳು ಕಂಡುಬಂದಿವೆ. ಅವರ ಸಹೋದರ ಅಶ್ರಫ್ ಅಹ್ಮದ್ ಅವರ ದೇಹದಿಂದ ಐದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ