AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಲು ಹುಡುಗಿ ಬೇಕೆಂದು ಅಂಗಡಿ ಮುಂದೆ ಬೋರ್ಡ್ ಹಾಕಿದ ಹಳ್ಳಿ ಹೈದ; ಆಸ್ಟ್ರೇಲಿಯ, ಇಂಗ್ಲೆಂಡ್​ನಿಂದಲೂ ಬಂತು ಆಫರ್!

Viral News: ಕೇರಳದ ಹಳ್ಳಿಯಲ್ಲಿ 33 ವರ್ಷದ ವ್ಯಕ್ತಿಯೊಬ್ಬರು ತಮಗೆ ಬೇಕಾದ ಹುಡುಗಿಯನ್ನು ಹುಡುಕಿಕೊಳ್ಳಲು ಅಂಗಡಿಯೆದುರು ಬೋರ್ಡ್​ ಹಾಕಿದ್ದಾರೆ. ಆ ಬೋರ್ಡ್​ನ ಫೋಟೋ ವೈರಲ್ ಆಗುತ್ತಿದ್ದಂತೆ ವಿದೇಶಗಳಿಂದಲೂ ಅವರಿಗೆ ಫೋನ್ ಬರೆತೊಡಗಿವೆ.

ಮದುವೆಯಾಗಲು ಹುಡುಗಿ ಬೇಕೆಂದು ಅಂಗಡಿ ಮುಂದೆ ಬೋರ್ಡ್ ಹಾಕಿದ ಹಳ್ಳಿ ಹೈದ; ಆಸ್ಟ್ರೇಲಿಯ, ಇಂಗ್ಲೆಂಡ್​ನಿಂದಲೂ ಬಂತು ಆಫರ್!
ಅಂಗಡಿಯ ಎದುರು ಉನ್ನಿಕೃಷ್ಣನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 01, 2021 | 3:13 PM

ತ್ರಿಶೂರ್: ಮದುವೆಗೆ ಹುಡುಗಿಯನ್ನು ಹುಡುಕಲು ಬ್ರೋಕರ್ ಬಳಿ ಹೋಗಬೇಕು, ನೆಂಟರಿಷ್ಟರ ಬಳಿ ವಿಚಾರಣೆ ಮಾಡಬೇಕೆಂಬ ಕಾಲವೆಲ್ಲ ಹಳೆಯದಾಯ್ತು. ಈಗೇನಿದ್ದರೂ ತಮಗೆ ಬೇಕಾದ ಹುಡುಗಿಯನ್ನು ಹುಡುಕಿಕೊಳ್ಳಲು ಬೇಕಾದಷ್ಟು ಹೊಸ ಹೊಸ ಆಯ್ಕೆಗಳಿವೆ, ತಂತ್ರಜ್ಞಾನವಿದೆ. ಶಾದಿ ಡಾಟ್ ಕಾಂನಂತಹ ಆನ್​ಲೈನ್ ವೇದಿಕೆಗಳು ನಿಮಗೆ ಬೇಕಾದ ಸಂಗಾತಿಯನ್ನು ಹುಡುಕಿಕೊಡುವ ಬ್ಯುಸಿನೆಸ್ ಅನ್ನು ಸಹ ಶುರು ಮಾಡಿವೆ. ಆನ್​ಲೈನ್​ನಲ್ಲಿ ನಿಮ್ಮ ಮಾಹಿತಿ, ಯಾವ ರೀತಿಯ ಹುಡುಗಿ ಬೇಕೆಂಬ ವಿವರ ನೀಡಿದರೆ ರಾಶಿ ರಾಶಿ ಪ್ರೊಫೈಲ್​ಗಳು ಸಿಗುತ್ತವೆ. ಆದರೆ, ಹಳ್ಳಿಗಳಲ್ಲಿ ಇರುವವರಿಗೆ ನೆಟ್​ವರ್ಕ್ ಸಮಸ್ಯೆಯಿಂದ ಈ ಸೌಲಭ್ಯವನ್ನು ಬಳಸುವುದು ಕಷ್ಟ. ಕೇರಳದಲ್ಲಿ 33 ವರ್ಷದ ವ್ಯಕ್ತಿಯೊಬ್ಬರು ತಮಗೆ ಬೇಕಾದ ಹುಡುಗಿಯನ್ನು ಹುಡುಕಿಕೊಳ್ಳಲು ಹೊಸ ಉಪಾಯ ಕಂಡುಕೊಂಡಿದ್ದಾರೆ. ಏನದು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಕೇರಳದ ವಲ್ಲಾಚಿರ ಎಂಬ ಊರಿನವರಾದ 33 ವರ್ಷದ ಎನ್​.ಎನ್​. ಉನ್ನಿಕೃಷ್ಣನ್ ಮದುವೆಯಾಗಲು ಹುಡುಗಿಗಾಗಿ ಹಲವು ವರ್ಷಗಳಿಂದ ಹುಡುಕಾಟ ನಡೆಸಿದ್ದರು. ಆದರೆ, ಯಾವ ಹುಡುಗಿಯೂ ಹೊಂದಿಕೆಯಾಗಿರಲಿಲ್ಲ. ವಲ್ಲಾಚಿರದಲ್ಲಿ ತನ್ನದೇ ಆದ ಅಂಗಡಿಯನ್ನು ಇಟ್ಟುಕೊಂಡಿರುವ ಉನ್ನಿಕೃಷ್ಣನ್ ಯಾವುದೇ ಮಧ್ಯವರ್ತಿಯ ಸಹಾಯವಿಲ್ಲದೆ ತಾನೇ ಹುಡುಗಿಯನ್ನು ಹುಡುಕಿಕೊಳ್ಳಲು ನಿರ್ಧರಿಸಿದರು. ಅದಕ್ಕಾಗಿ ತಮ್ಮ ಅಂಗಡಿಯ ಮುಂದೆ ವಧು ಬೇಕಾಗಿದ್ದಾಳೆ ಎಂದು ಬೋರ್ಡ್​ ಒಂದನ್ನು ಹಾಕಿ, ಅದರ ಕೆಳಗೆ ತಮ್ಮ ನಂಬರನ್ನು ನಮೂದಿಸಿದ್ದಾರೆ.

ನಾನು ಮದುವೆಯಾಗಲು ಹುಡುಗಿಯನ್ನು ಹುಡುಕುತ್ತಿದ್ದೇನೆ. ಜಾತಿ, ಧರ್ಮ ಯಾವುದಾದರೂ ತೊಂದರೆಯಿಲ್ಲ ಎಂದು ಉನ್ನಿಕೃಷ್ಣನ್ ಫಲಕದಲ್ಲಿ ಬರೆದು, ಅಂಗಡಿ ಎದುರು ನೇತು ಹಾಕಿದ್ದಾರೆ. ಇತ್ತೀಚೆಗೆ ಈ ಅಂಗಡಿಗೆ ಬಂದಿದ್ದ ಅವರ ಗೆಳೆಯರೊಬ್ಬರು ಈ ಫಲಕವನ್ನು ನೋಡಿ ಅದರ ಫೋಟೋ ತೆಗೆದುಕೊಂಡು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಪ್​ಲೋಡ್ ಮಾಡಿದ್ದರು. ಅದುವರೆಗೂ ಸುತ್ತಮುತ್ತಲಿನ ಊರುಗಳಲ್ಲಿ ಹುಡುಗಿಗಾಗಿ ಹುಡುಕಾಡುತ್ತಿದ್ದ ಉನ್ನಿಕೃಷ್ಣನ್​ಗೆ ಈ ಒಂದು ಪೋಸ್ಟ್​ನಿಂದ ಈಗ ಆಸ್ಟ್ರೇಲಿಯ, ಇಂಗ್ಲೆಂಡ್​ನಿಂದಲೂ ಫೋನ್ ಕಾಲ್​ಗಳು ಬಂದಿವೆಯಂತೆ!

ನನ್ನ ತಲೆಬುರುಡೆಯನ್ನು ಗೆಡ್ಡೆ ಬೆಳೆದಿದ್ದರಿಂದ ಈಗಾಗಲೇ ಆಪರೇಷನ್ ಆಗಿದೆ. ಈಗ ನಾನು ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ. ಇನ್ನಾದರೂ ಜೀವನದಲ್ಲಿ ಸೆಟಲ್ ಆಗಬೇಕೆಂದು ಮದುವೆಯಾಗಲು ನಿರ್ಧರಿಸಿದೆ. ಆದರೆ, ಯಾರೂ ನನ್ನನ್ನು ಮದುವೆಯಾಗಲು ಮುಂದೆ ಬರಲಿಲ್ಲ. ನನಗೆ ನನ್ನದೇ ಸ್ವಂತದ್ದೊಂದು ಅಂಗಡಿಯಿದೆ. ನಮ್ಮ ಮನೆ ಬಳಿಯೇ ಲಾಟರಿ ಅಂಗಡಿಯೊಂದನ್ನು ತೆರೆದಿದ್ದೇನೆ. ಅಲ್ಲಿಯೇ ಟೀಯನ್ನು ಕೂಡ ಮಾರುತ್ತೇನೆ. ಬ್ರೋಕರ್ ಮೂಲಕ ಹುಡುಗಿಯನ್ನು ಹುಡುಕುವುದು ಇಷ್ಟವಿಲ್ಲದ ಕಾರಣಕ್ಕೆ ಈ ರೀತಿ ಅಂಗಡಿಯೆದುರು ನನಗೆ ನಾನೇ ಜಾಹೀರಾತು ಕೊಟ್ಟುಕೊಂಡಿದ್ದೇನೆ. ನಮ್ಮ ಮನೆಯವರು ಕೂಡ ಹುಡುಗಿಯನ್ನು ಹುಡುಕುತ್ತಿದ್ದಾರೆ. ಆದರೆ, ಇನ್ನೂ ನನಗೆ ಸರಿಯೆನಿಸುವ ಹುಡುಗಿ ಸಿಕ್ಕಿಲ್ಲ ಎಂದು ಉನ್ನಿಕೃಷ್ಣನ್ ಹೇಳಿದ್ದಾರೆ.

ಈ ಬೋರ್ಡ್​ನ ಫೋಟೋ ತೆಗೆದು ಉನ್ನಿಕೃಷ್ಣನ್​ ಅವರ ಸ್ನೇಹಿತ ಸಾಜಿ ಎಡಪಿಲ್ಲಿ ತಮ್ಮ ಫೇಸ್​ಬುಕ್ ಪೇಜಿನಲ್ಲಿ ಹಾಕಿಕೊಂಡಿದ್ದರು. ಮಲಯಾಳಂನಲ್ಲಿ ಬರೆದಿದ್ದ ಆ ಬೋರ್ಡ್​ನ ಅರ್ಥವನ್ನು ಇಂಗ್ಲಿಷ್​ನಲ್ಲಿ ಅನುವಾದಿಸಿ ಪೋಸ್ಟ್ ಮಾಡಿದ್ದರು. ನನ್ನನ್ನು ಮದುವೆಯಾಗಲು ಇಚ್ಛಿಸುವ ಯಾವುದೇ ಧರ್ಮ, ಜಾತಿಯ ಹುಡುಗಿ ಈ ನಂಬರ್​ಗೆ ಸಂಪರ್ಕಿಸಿ ಎಂದು ಬರೆದಿದ್ದ ಆ ಬೋರ್ಡ್​ ಅನ್ನು ನೋಡಿ ಅನೇಕರು ಇಂಪ್ರೆಸ್ ಆಗಿದ್ದಾರೆ. ಇದೀಗ ಆ ಪೋಸ್ಟ್ ನೋಡಿದ ಆಸ್ಟ್ರೇಲಿಯ, ಇಂಗ್ಲೆಂಡ್​ ಮುಂತಾದ ದೇಶಗಳಲ್ಲಿ ವಾಸವಾಗಿರುವ ಮಲೆಯಾಳಿಗಳು ಕೂಡ ಫೋನ್ ಮಾಡಿ ತಮ್ಮ ಕುಟುಂಬದಲ್ಲಿ ಹುಡುಗಿ ಇರುವುದಾಗಿ ತಿಳಿಸುತ್ತಿದ್ದಾರೆ. ಹಲವರು ಫೋನ್ ಮಾಡಿ ಜಾತಿ, ಧರ್ಮವನ್ನು ಲೆಕ್ಕಿಸದೆ ಮದುವೆಯಾಗಲು ಬಯಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Viral News: ಮನೆ ಖರೀದಿಸಲು ಯೋಚಿಸುತ್ತಿದ್ದೀರಾ?; ಈ ಊರಿನಲ್ಲಿ 87 ರೂ.ಗೆ ಮನೆ ಮಾರಾಟಕ್ಕಿದೆ!

Viral News: 40 ವರ್ಷ ಹಿಂದಿನ ಕೇಕ್ ತುಂಡು​ 19 ಲಕ್ಷ ರೂ.ಗೆ ಹರಾಜು; ಇದು ಅಂತಿಂಥಾ ಕೇಕ್ ಅಲ್ಲ!

(Wanting life partner, Kerala man puts signboard outside his Lottery shop gets Marriage Proposals from Australia, England)

Published On - 3:08 pm, Wed, 1 September 21

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ