AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Waqf Bill: ಭಾರತದಲ್ಲಿ ಹೊಸ ವಕ್ಫ್​ ಕಾನೂನು ಜಾರಿಗೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಕ್ಫ್​ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿದ್ದಾರೆ. ಈ ಮಸೂದೆಯನ್ನು ಇತ್ತೀಚೆಗೆ ಲೋಕಸಭೆ ಮತ್ತು ರಾಜ್ಯಸಭೆ ಅಂಗೀಕರಿಸಿವೆ. ಶನಿವಾರ ರಾಷ್ಟ್ರಪತಿ ಅಂಕಿತದ ನಂತರ ವಕ್ಫ್​ ತಿದ್ದುಪಡಿ ಮಸೂದೆ ಅಧಿಕೃತವಾಗಿ ಕಾನೂನಾನಿ ಮಾರ್ಪಟ್ಟಿದೆ. ಈ ಹೊಸ ಕಾನೂನನ್ನು ವಕ್ಫ್​ ತಿದ್ದುಪಡಿ ಕಾಯ್ದೆ 2025 ಎಂದು ಕರೆಯಲಾಗುತ್ತದೆ. ಇದು ವಕ್ಫ್​ ಆಸ್ತಿಗಳ ನಿರ್ವಹಣೆ, ನೋಂದಣಿ ಮತ್ತು ಸರ್ಕಾರಿ ಭೂಮಿಯ ಮೇಲಿನ ಹಕ್ಕುಗಳ ಬಗ್ಗೆ ಕಠಿಣ ನಿಯಮಗಳನ್ನು ವಿಧಿಸುತ್ತದೆ.

Waqf Bill: ಭಾರತದಲ್ಲಿ ಹೊಸ ವಕ್ಫ್​ ಕಾನೂನು ಜಾರಿಗೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
ದ್ರೌಪದಿ ಮುರ್ಮುImage Credit source: Business Standard
Follow us
ನಯನಾ ರಾಜೀವ್
|

Updated on:Apr 06, 2025 | 8:28 AM

ನವದೆಹಲಿ, ಏಪ್ರಿಲ್ 06: ವಕ್ಫ್ ತಿದ್ದುಪಡಿ ಮಸೂದೆ(Waqf Amendment Bill) 2025 ಈಗ ಕಾನೂನಾಗಿ ಮಾರ್ಪಟ್ಟಿದೆ. ಈ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದಿಸಿದ್ದಾರೆ. ರಾಷ್ಟ್ರಪತಿಗಳ ಅನುಮೋದನೆ ಪಡೆಯುವ ಮೊದಲು ವಕ್ಫ್ ಮಸೂದೆಯನ್ನು ಎರಡೂ ಸದನಗಳು ಅಂಗೀಕರಿಸಿದ್ದವು. ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಕಾಯ್ದೆಗೆ ಏಪ್ರಿಲ್ 5, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆ ದೊರೆತಿದೆ. ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಬಿಸಿ ವಾಗ್ವಾದ ನಡೆದ ಸುದೀರ್ಘ ಚರ್ಚೆಯ ನಂತರ ಶುಕ್ರವಾರ ಬೆಳಗ್ಗೆ ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಯಿತು.

ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ಈ ಮಸೂದೆಯ ಬಗ್ಗೆ ಚರ್ಚೆ ನಡೆದು, ಪರವಾಗಿ 128 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾಗಿ, ನಂತರ ಅದನ್ನು ಅಂಗೀಕರಿಸಲಾಯಿತು. ಇದಕ್ಕೂ ಮೊದಲು, ಲೋಕಸಭೆಯು ಸುಮಾರು 12 ಗಂಟೆಗಳ ಚರ್ಚೆಯ ನಂತರ ಅದನ್ನು ಅಂಗೀಕರಿಸಿತ್ತು, ಇದರಲ್ಲಿ 288 ಮತಗಳು ಪರವಾಗಿ ಮತ್ತು 232 ಮತಗಳು ವಿರುದ್ಧವಾಗಿ ಚಲಾವಣೆಯಾಗಿದ್ದವು.

ಉಭಯ ಸದನಗಳಲ್ಲಿ ಮಸೂದೆಯ ಮೇಲಿನ ಚರ್ಚೆಯ ಸಮಯದಲ್ಲಿ, ವಿರೋಧ ಪಕ್ಷಗಳು ಬಲವಾದ ಆಕ್ಷೇಪಣೆಗಳನ್ನು ಎತ್ತಿದ್ದವು, ಅವು ಮಸೂದೆಯನ್ನು ಮುಸ್ಲಿಂ ವಿರೋಧಿ ಮತ್ತು ಸಂವಿಧಾನಬಾಹಿರ ಎಂದು ಕರೆದವು, ಆದರೆ ಸರ್ಕಾರವು ಐತಿಹಾಸಿಕ ಸುಧಾರಣೆಯು ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರತಿಕ್ರಿಯಿಸಿತು.

ಮತ್ತಷ್ಟು ಓದಿ: ಇದು ಐತಿಹಾಸಿಕ ಕ್ಷಣ, ಸಂಸತ್ತಿನಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಅಂಗೀಕಾರದ ಕುರಿತು ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

ಸುಪ್ರೀಂಕೋರ್ಟ್​ನಲ್ಲಿ ನಾಲ್ಕು ಅರ್ಜಿ ಸಲ್ಲಿಕೆ ಈ ಕಾನೂನಿನ ನಿಬಂಧನೆಗಳ ಅನುಷ್ಠಾನ ಅಥವಾ ಜಾರಿಗೊಳಿಸುವಿಕೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ಎರಡು ಅರ್ಜಿಗಳನ್ನು ಸಲ್ಲಿಸಲಾಯಿತು. ಒಂದು ಅರ್ಜಿಯನ್ನು ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಸಲ್ಲಿಸಿದ್ದಾರೆ ಮತ್ತು ವಕ್ಫ್‌ನಲ್ಲಿ ಹಗರಣ ಮತ್ತು ದುರುಪಯೋಗದ ಆರೋಪ ಹೊತ್ತಿದ್ದಾರೆ, ಆದರೆ ಇನ್ನೊಂದು ಅರ್ಜಿಯನ್ನು ಅಸೋಸಿಯೇಷನ್ ​​ಫಾರ್ ದಿ ಪ್ರೊಟೆಕ್ಷನ್ ಇನ್ ದಿ ಮ್ಯಾಟರ್ಸ್ ಆಫ್ ಸಿವಿಲ್ ರೈಟ್ಸ್ ಎಂಬ ಸಂಘಟನೆ ಸಲ್ಲಿಸಿದೆ.

ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಸಿಂಧುತ್ವವನ್ನು ಪ್ರಶ್ನಿಸಿ, ಇದು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದರು.

ವಕ್ಫ್​ ಕಾಯ್ದೆಯಲ್ಲಿ ಏನು ಬದಲಾಗಲಿದೆ? ಹೊಸ ಕಾನೂನಿನಡಿಯಲ್ಲಿ, ಲಿಖಿತ ದಾಖಲೆ ಇಲ್ಲದೆ ಯಾವುದೇ ವಕ್ಫ್​ ಆಸ್ತಿಯನ್ನು ನೊಂದಾಯಿಸಲಾಗುವುದಿಲ್ಲ, ಅಲ್ಲದೆ ಸರ್ಕಾರಿ, ಭೂಮಿಯನ್ನು ವಕ್ಫ್​ ಆಸ್ತಿ ಎಂದು ಹೇಳಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಯಾವುದೇ ಭೂಮಿ ವಿವಾದಿತ ಅಥವಾ ಸರ್ಕಾರಿ ಭೂಮಿ ಕಂಡುಬಂದರೆ ಅದನ್ನು ವಕ್ಫ್​ನಲ್ಲಿ ನೋಂದಾಯಿಸಿಕೊಳ್ಳಲಾಗುವುದಿಲ್ಲ. ಇದಕ್ಕಾಗಿ ಜಿಲ್ಲಾಧಿಕಾರಿಗೆ ತನಿಖೆ ನಡೆಸುವ ಹಕ್ಕನ್ನು ನೀಡಲಾಗಿದೆ. ವಕ್ಫ್​ ಆಸ್ತಿಗಳ ಸಂಪೂರ್ಣ ವಿವರಗಳನ್ನು ಆನ್​ಲೈನ್ ಪೋರ್ಟಲ್​ನಲ್ಲಿ ನೋಂದಾಯಿಸುವುದು ಈಗ ಕಡ್ಡಾಯವಾಗಿದ್ದು, ಇದನ್ನು 6 ತಿಂಗಳೊಳಗೆ ಜಾರಿಗೆ ತರಲಾಗುತ್ತದೆ.

ಬೊಹ್ರಾ ಮತ್ತು ಅಘಾಖಾನಿ ಸಮುದಾಯಗಳಿಗೆ ಪ್ರತ್ಯೇಕ ವಕ್ಫ್​ ಮಂಡಳಿಗಳನ್ನು ರಚಿಸಲು ಕಾನೂನು ಅವಕಾಶ ನೀಡುತ್ತದೆ. ಅಲ್ಲದೆ, ವಕ್ಫ್​ ಮಂಡಳಿಯಲ್ಲಿ ಇಬ್ಬರು ಮುಸ್ಲಿಮೇತರ ಸದಸ್ಯರು ಮತ್ತು ಮಹಿಳೆಯರ ನೇಮಕಾತಿಯನ್ನು ಖಚಿತಪಡಿಸಲಾಗಿದೆ. ವಕ್ಫ್​ ಆಸ್ತಿಗಳ ಸಮೀಕ್ಷೆಯ ಜವಾಬ್ದಾರಿಯನ್ನು ಈಗ ಸರ್ವೇ ಆಯುಕ್ತರ ಬದಲಿಗೆ ಜಿಲ್ಲಾಧಿಕಾರಿಗೆ ನೀಡಲಾಗಿದೆ.

ಈ ಬದಲಾವಣೆಯು ವಕ್ಫ್​ ಆಸ್ತಿಗಳಿಗೆ ಸಂಬಂಧಿಸಿದಂತೆ ಪಾರದರ್ಶಕತೆಯನ್ನು ಹೆಚ್ಚಿಸುವ ನಿರೀಕ್ಷೆ ಇದೆ. ಆದರೆ ವಿರೋಧ ಪಕ್ಷಗಳು ಇದನ್ನು ಧಾರ್ಮಿಕ ವಿಷಯದಲ್ಲಿ ಹಸ್ತಕ್ಷೇಪ ಎಂದು ಕರೆಯುತ್ತಿದೆ. ಈ ಕಾನೂನು ರಾಷ್ಟ್ರೀಯ ಹಿತಾಸಕ್ತಿಯಿಮದ ಕೂಡಿದ್ದು, ವಕ್ಫ್​ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂದು ಸರ್ಕಾರ ಹೇಳುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:24 am, Sun, 6 April 25

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ