Waqf Bill Tabled: ಲೋಕಸಭೆಯಲ್ಲಿ ವಕ್ಫ್​ ಮಂಡಳಿ ಕಾನೂನು ತಿದ್ದುಪಡಿ ಮಸೂದೆ ಮಂಡನೆ, ವಿಪಕ್ಷಗಳು ಗರಂ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ವಕ್ಫ್​ ಮಂಡಳಿ ಕಾನೂನು ತಿದ್ದುಪಡಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು. ಇದಕ್ಕೆ ಕಾಂಗ್ರೆಸ್​ ಸೇರಿದಂತೆ ಹಲವು ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

Waqf Bill Tabled: ಲೋಕಸಭೆಯಲ್ಲಿ ವಕ್ಫ್​ ಮಂಡಳಿ ಕಾನೂನು ತಿದ್ದುಪಡಿ ಮಸೂದೆ ಮಂಡನೆ, ವಿಪಕ್ಷಗಳು ಗರಂ
ಕಿರಣ್​ ರಿಜಿಜು
Follow us
|

Updated on:Aug 08, 2024 | 2:39 PM

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಹು ನಿರೀಕ್ಷಿತ ವಕ್ಫ್​ ಮಂಡಳಿ ಕಾನೂನು ತಿದ್ದುಪಡಿ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು. ಇದಕ್ಕೆ ಕಾಂಗ್ರೆಸ್​ ಸೇರಿದಂತೆ ಹಲವು ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ನಾವು ಈ ಮಸೂದೆಯನ್ನು ವಿರೋಧಿಸುತ್ತೇವೆ, ಜನರು ವಕ್ಫ್​ ಮಂಡಳಿಗೆ ಸ್ವಿಚ್ಛೆಯಿಂದ ದಾನವಾಗಿ ನೀಡುತ್ತಿದ್ದಾರೆ. ಧಾರ್ಮಿಕ ಸಂಸ್ಥೆಗಳಿಗೆ ಸ್ಥಿರ ಹಾಗೂ ಚರಾಸ್ಥಿ ನೀಡುವ ಅಧಿಕಾರ ಇದೆ.

ಮುಸ್ಲಿಂಮೇತರರು ಈ ಸಂಸ್ಥೆಯ ಭಾಗವಾಗಿರಲು ಹೇಗೆ ಸಾಧ್ಯ, ಸುಪ್ರೀಂಕೋರ್ಟ್​ ಅಯೋಧ್ಯಾ ಕಮಿಟಿ ರಚನೆ ಮಾಡಿತ್ತು ಬೇರೆ ಧರ್ಮದವರು ಈ ಕಮಿಟಿಯಲ್ಲಿ ಇರಲು ಸಾಧ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ವಕ್ಫ್​ ಬೋರ್ಡ್​ನಲ್ಲೂ ಬೇರೆ ಧರ್ಮದವರು ಸದಸ್ಯರಾಗಲು ಆಗುತ್ತದೆಯೇ, ಇದು ಮುಸ್ಲಿಂ ವಿರುದ್ಧವಾಗಿದೆ, ನಾಳೆ ಕ್ರಿಶ್ಚಿಯನ್ ಬಗ್ಗೆ ಮಸೂದೆ ನಾಡಿದ್ದು ಪಾರ್ಸಿ, ಜೈನ ಬಗ್ಗೆ ಮಸೂದೆಯನ್ನು ತರುತ್ತೀರಾ? ಭಾರತ ಸರ್ವಧರ್ಮ ಮತ್ತು ಸಂಸ್ಕೃತಿಗಳ ಭೂಮಿಯಾಗಿದೆ. ಈಗಾಗಲೇ ಜನರು ನಿಮಗೆ ಚುನಾವಣೆಯಲ್ಲಿ ಉತ್ತರ ನೀಡಿದ್ದಾರೆ ಎಂದು ಹೇಳಿದ್ದಾರೆ.

ಈ ಮಸೂದೆಯಿಂದ ಸಂವಿಧಾನದ ಉಲ್ಲಂಘನೆಯಾಗುತ್ತಿಲ್ಲ ಎಂದು ವಕ್ಫ್ ತಿದ್ದುಪಡಿ ಮಸೂದೆ ಕುರಿತು ಕಿರಣ್ ರಿಜಿಜು ಹೇಳಿದ್ದಾರೆ. ಹಕ್ಕು ಸಿಗದವರಿಗೆ ಹಕ್ಕುಪತ್ರ ನೀಡಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ಧರ್ಮದಲ್ಲಿ ಹಸ್ತಕ್ಷೇಪ ಇಲ್ಲ. ವಿರೋಧ ಪಕ್ಷಗಳ ಎಲ್ಲ ಆತಂಕಗಳು ದೂರವಾಗುತ್ತವೆ. ಈ ಮಸೂದೆಯನ್ನು ಬೆಂಬಲಿಸಿ, ನಿಮಗೆ ಕೋಟಿ ಕೋಟಿ ಜನರ ಆಶೀರ್ವಾದ ಸಿಗುತ್ತದೆ.

ಮತ್ತಷ್ಟು ಓದಿ: ವಕ್ಫ್​ ಕಾಯ್ದೆ ಎಂದರೇನು? ವಕ್ಫ್​ ಮಂಡಳಿ ಯಾರದ್ದೇ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದೇ? ಇಲ್ಲಿದೆ ಮಾಹಿತಿ 

ಸರ್ಕಾರವು ಲೋಕಸಭೆಯ ಸ್ಪೀಕರ್ ಅಧಿಕಾರವನ್ನು ಮೊಟಕುಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ಅಖಿಲೇಶ್​ ಯಾದವ್ ಹೇಳಿದರು. ನಾವು ಮತ್ತು ಇಡೀ ಪ್ರತಿಪಕ್ಷಗಳು ನಿಮ್ಮ ಪರವಾಗಿ ಹೋರಾಡಬೇಕಾಗುತ್ತದೆ. ಈ ಬಗ್ಗೆ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮಸೂದೆಯು ಸಂವಿಧಾನದ 14, 15 ಮತ್ತು 25 ನೇ ವಿಧಿಯ ತತ್ವಗಳನ್ನು ಉಲ್ಲಂಘಿಸುತ್ತದೆ. ಈ ಮಸೂದೆ ತಾರತಮ್ಯ ಮತ್ತು ಅನಿಯಂತ್ರಿತವಾಗಿದೆ. ಈ ಮಸೂದೆಯನ್ನು ತರುವ ಮೂಲಕ ನೀವು (ಕೇಂದ್ರ ಸರ್ಕಾರ) ರಾಷ್ಟ್ರವನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿಲ್ಲ ವಿಭಜಿಸುತ್ತಿದ್ದೀರಿ. ನೀವು ಮುಸ್ಲಿಮರ ಶತ್ರು ಎಂಬುದಕ್ಕೆ ಈ ಮಸೂದೆಯೇ ಸಾಕ್ಷಿ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

Published On - 2:25 pm, Thu, 8 August 24

ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ