ಪ್ರಿಯಕರನಿಂದ ವಿಧವೆ ಹತ್ಯೆ; ಪೊಲೀಸ್ ತನಿಖೆಯಲ್ಲಿ ಆಘಾತಕಾರಿ ಸಂಗತಿ ಬಯಲು

ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ವಿಧವೆಯೊಬ್ಬರನ್ನು ಆಕೆಯ ಪ್ರಿಯಕರ ಅತ್ಯಂತ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧದ ಶಂಕೆಯೇ ಈ ಕೊಲೆಗೆ ಪ್ರಮುಖ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗಂಡನನ್ನು ಕಳೆದುಕೊಂಡಿದ್ದ ಆ ಮಹಿಳೆಯ ಮನೆಗೆ ಈತ ದೀರ್ಘಕಾಲದಿಂದ ನಿಯಮಿತವಾಗಿ ಬಂದು ಹೋಗುತ್ತಿದ್ದನು. ಇತ್ತೀಚೆಗೆ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಪ್ರಿಯಕರನಿಂದ ವಿಧವೆ ಹತ್ಯೆ; ಪೊಲೀಸ್ ತನಿಖೆಯಲ್ಲಿ ಆಘಾತಕಾರಿ ಸಂಗತಿ ಬಯಲು
Crime
Image Credit source: iStock

Updated on: May 26, 2026 | 8:19 PM

ವಾರಂಗಲ್, ಮೇ 26: ವಾರಂಗಲ್ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ವಿಧವೆ ಮಹಿಳೆಯ ಕೊಲೆಯ ರಹಸ್ಯ (Crime News) ಕೊನೆಗೂ ಬಯಲಾಗಿದೆ. ವಿವಾಹೇತರ ಸಂಬಂಧದಿಂದಾಗಿ ಆಕೆಯ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಆಕೆಯ ಜೊತೆ ವಾಸಿಸುತ್ತಿದ್ದ ಆಕೆಯ ಪ್ರಿಯಕರ ಆಕೆ ತನ್ನನ್ನು ಬಿಟ್ಟು ಬೇರೆ ಪುರುಷನೊಂದಿಗೆ ಸಂಬಂಧ ಹೊಂದಿದ್ದಳು ಎಂಬ ಕಾರಣಕ್ಕೆ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಪತ್ತೆಹಚ್ಚಿದ್ದಾರೆ. ಆತನನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಲಾಗಿದೆ.

ಗ್ರಾಮದ ಹೊರವಲಯದಲ್ಲಿರುವ ಎಸ್‌ಆರ್‌ಎಸ್‌ಪಿ ಕಾಲುವೆಯಲ್ಲಿ ಆಕೆಯ ಕತ್ತನ್ನು ಚಾಕುವಿನಿಂದ ಸೀಳಿ ಕೊಲೆ ಮಾಡಲಾಗಿದೆ. ಮೃತಳನ್ನು ವಾರಂಗಲ್ ಜಿಲ್ಲೆಯ ದುಗ್ಗೊಂಡಿ ಮಂಡಲದ ಲಕ್ಷ್ಮಿಪುರಂ ಗ್ರಾಮದ ವಿಧವೆ ಸುಮಲತಾ ಎಂದು ಗುರುತಿಸಲಾಗಿದೆ. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಅವರ ಪತಿ 5 ವರ್ಷಗಳ ಹಿಂದೆ ನಿಧನರಾಗಿದ್ದರು. ಆದರೆ, ಅವರ ಪತಿಯ ಮರಣದ ನಂತರ ಆಕೆ ಸುರೇಶ್ ಎಂಬ ವ್ಯಕ್ತಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು.

ಇದನ್ನೂ ಓದಿ: ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ

ಪೊಲೀಸ್ ತನಿಖೆಯಲ್ಲಿ ಅವರಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಲತಾ ತನ್ನನ್ನು ಹೊರತುಪಡಿಸಿ ಬೇರೆಯವರೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ಪ್ರಿಯಕರನಿಗೆ ಅನುಮಾನವಿತ್ತು. ಇದೇ ವಿಷಯಕ್ಕೆ ಸುರೇಶ್ ಆಕೆಯ ಜೊತೆ ಆಗಾಗ ಜಗಳವಾಡುತ್ತಿದ್ದ.

ಇದನ್ನೂ ಓದಿ: ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್​​ ಮ್ಯಾನೇಜರ್​​ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ

ಕಳೆದ ಕೆಲವು ವರ್ಷಗಳಿಂದ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಮತ್ತೆ ಇದೇ ಕಾರಣಕ್ಕೆ ಸುಮಲತಾ ಮೇಲೆ ಕೋಪಗೊಂಡ ಸುರೇಶ್, ಆಕೆಯನ್ನು ಕೊಲೆ ಮಾಡಲು ನಿರ್ಧರಿಸಿದ್ದ. ಪ್ಲಾನ್ ಮಾಡಿದಂತೆ ಆಕೆಯನ್ನು ಗ್ರಾಮದ ಹೊರವಲಯದಲ್ಲಿರುವ ಎಸ್‌ಆರ್‌ಎಸ್‌ಪಿ ಕಾಲುವೆಗೆ ಕರೆದೊಯ್ದು ಚಾಕುವಿನಿಂದ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಪೊಲೀಸರು ಘಟನೆ ನಡೆದ 5 ದಿನಗಳಲ್ಲಿಯೇ ಕೊಲೆ ರಹಸ್ಯವನ್ನು ಭೇದಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us