Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಭಾರತೀಯ ಕಿಸಾನ್ ಯೂನಿಯನ್​ನ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ; ದಾಖಲೆ ಸಲ್ಲಿಸಲು ಸೂಚನೆ

ದೆಹಲಿ ಚಲೋ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಭಾರತೀಯ ಕಿಸಾನ್ ಯೂನಿಯನ್​ನ (ಏಕ್ತಾ ಉಗ್ರಹಣ್)  ಬ್ಯಾಂಕ್ ಖಾತೆಗೆ ವಿದೇಶದಿಂದ ಕಳೆದ ಎರಡು ತಿಂಗಳಲ್ಲಿ‌ 8ರಿಂದ 9 ಲಕ್ಷ ಹಣ ವರ್ಗಾವಣೆಯಾಗಿದೆ. ಕೇಂದ್ರ ಹಣಕಾಸು ಇಲಾಖೆಯ ತನಿಖಾ ವಿಭಾಗ ಭಾರತೀಯ ಕಿಸಾನ್ ಯೂನಿಯನ್​ನ ನೋಂದಣಿ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ.

Delhi Chalo: ಭಾರತೀಯ ಕಿಸಾನ್ ಯೂನಿಯನ್​ನ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ; ದಾಖಲೆ ಸಲ್ಲಿಸಲು ಸೂಚನೆ
ರೈತ ಪ್ರತಿಭಟನೆ
Follow us
guruganesh bhat
| Updated By: Lakshmi Hegde

Updated on: Dec 21, 2020 | 1:09 PM

ಅಮೃತಸರ: ದೆಹಲಿ ಚಲೋ ಹೋರಾಟದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಭಾರತೀಯ ಕಿಸಾನ್ ಯೂನಿಯನ್​ನ (ಏಕ್ತಾ ಉಗ್ರಹಣ್)  ಬ್ಯಾಂಕ್ ಖಾತೆಗೆ ವಿದೇಶದಿಂದ ಕಳೆದ ಎರಡು ತಿಂಗಳಲ್ಲಿ‌ 8ರಿಂದ 9 ಲಕ್ಷ ಹಣ ವರ್ಗಾವಣೆಯಾಗಿದೆ. ಹೀಗಾಗಿ, ಮೋಗಾ ಜಿಲ್ಲೆಯ ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕಿನ ಶಾಖೆಗೆ ಬಿಕೆಎಸ್​ನ ಮುಖಂಡ ಸುಖ್ ದೇವ್ ಸಿಂಗ್ ರನ್ನು ಕರೆದು ವಿಚಾರಣೆ ನಡೆಸಲಾಗಿದೆ.ಅಲ್ಲದೇ, ಕೇಂದ್ರ ಹಣಕಾಸು ಇಲಾಖೆಯ ತನಿಖಾ ವಿಭಾಗ ಭಾರತೀಯ ಕಿಸಾನ್ ಯೂನಿಯನ್​ನ ನೋಂದಣಿ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ.

ವಿದೇಶಗಳಲ್ಲಿರುವ ಪಂಜಾಬಿಗರು ಸಾಮಾಜಿಕ ಕೆಲಸಗಳಿಗಾಗಿ ನಮ್ಮ ಸಂಘಟನೆಗಾಗಿ ಹಣ ವರ್ಗಾಯಿಸುತ್ತಾರೆ. ತಾಯ್ನಾಡಿನಲ್ಲಿ ಅಗತ್ಯವುಳ್ಳವರ ಸೇವೆಗಾಗಿ ಆರ್ಥಿಕ ನೆರವು ನೀಡುತ್ತಾರೆ. ಅದನ್ನು ಸಂಶಯಾಸ್ಪದವಾಗಿ  ನೋಡುವ ಅಗತ್ಯವಿಲ್ಲ. ಬ್ಯಾಂಕ್ ನಿಂದ ಲಿಖಿತ ರೂಪದ ಪತ್ರ ಬಂದ ನಂತರ ಈ ಕುರಿತು ಪ್ರತಿಕ್ರಿಯಿಸುವುದಾಗಿ ಸುಖ್ ದೇವ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ತನಿಖೆ ಶುರುವಾಗುವ ಸಾಧ್ಯತೆ ಭಾರತೀಯ ಕಿಸಾನ್ ಯೂನಿಯನ್​ ಪಂಜಾಬಿನ ಅತ್ಯಂತ  ಪ್ರಮುಖ ಹಾಗೂ ದೊಡ್ಡ ರೈತ ಸಂಘಟನೆಯಾಗಿದೆ. ಕೇಂದ್ರದ ಮೂರು ಕೃಷಿಕಾಯ್ದೆಗಳ ವಿರುದ್ಧ ಹೋರಾಟಕ್ಕೆ ರೈತರನ್ನು ಸಂಘಟಿಸಿ,  ಬೃಹತ್ ಪ್ರಮಾಣದಲ್ಲಿ ದೆಹಲಿ ಚಲೋ ಆಯೋಜಿಸುವಲ್ಲಿ ಈ ಸಂಘಟನೆಯ ಪಾತ್ರ ದೊಡ್ಡದು. ಹೀಗಾಗಿ, ಬಿಕೆಎಸ್​ನ ಆರ್ಥಿಕ ಮೂಲದ ಕುರಿತು ತನಿಖೆ ನಡೆಸುವ ಸಂಭಾವ್ಯತೆಗಳು ದಟ್ಟವಾಗಿವೆ.

ದೆಹಲಿ ಚಲೋಗೆ ಬೆಂಬಲ ನೀಡಿದ ಪಂಜಾಬ್ APMC ದಲ್ಲಾಳಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು. ದೆಹಲಿ ಚಲೋವಿನ ಆರ್ಥಿಕ ಮೂಲಗಳ ಬಗ್ಗೆಯೂ ವದಂತಿಗಳು ಹರಿದಾಡುತ್ತಿದ್ದವು. ಹೀಗಾಗಿ ಹಣಕಾಸು ಇಲಾಖೆಯ ತನಿಖಾ ವಿಭಾಗ ಭಾರತೀಯ ಕಿಸಾನ್ ಯೂನಿಯನ್​ಗೆ ವರ್ಗಾವಣೆಯಾದ ಹಣದ ಬೆನ್ನುಬೀಳುವ ಸಾಧ್ಯತೆಗಳಿವೆ. ವಿದೇಶಿ ಮೂಲದ ಸರ್ಕಾರೇತರ ಸಂಸ್ಥೆಗಳು ಭಾರತೀಯರ ಖಾತೆಗಳಿಗೆ ಹಣ ವರ್ಗಾಯಿಸುವುದರ ಮೇಲೆ ಕೇಂದ್ರ ಸರ್ಕಾರ ಹದ್ದಿನ ಕಣ್ಣಿಟ್ಟಿದೆ. ಅಲ್ಲದೇ, ಎನ್​ಜಿ‌ಒಗಳ ಅನಿರ್ಬಂಧಿತ  ಹಣಕಾಸಿನ ವ್ಯವಹಾರಕ್ಕೂ ಕಡಿವಾಣ ಹಾಕಿದೆ.

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ