Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಾಹ್ಮಣರಿಗೆ ಪಾದಪೂಜೆ ಮಾಡುವುದನ್ನ ಕೈಬಿಡಿ: ಪುರಾತನ ಆಚರಣೆಗಳು ಕೇರಳಕ್ಕೆ ಅವಮಾನಕರ -ದೇವಸ್ವಂ ಸಚಿವ ಆದೇಶ

ದೇವಸ್ವಂ ಸಚಿವ ಆರ್​ ರಾಧಾಕೃಷ್ಣನ್ ಸಹ ಕೊಚ್ಚಿನ್ ದೇವಸ್ವಂ ಮಂಡಳಿಯಿಂದ (CDB) ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. CDB ಅಧ್ಯಕ್ಷ ವಿ ನಂದಕುಮಾರ್ ಅವರನ್ನು ಸಂಪರ್ಕಿಸಿದ ​ಸಚಿವ ರಾಧಾಕೃಷ್ಣನ್, ಪುರಾತನ ಸಂಪ್ರದಾಯಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.

ಬ್ರಾಹ್ಮಣರಿಗೆ ಪಾದಪೂಜೆ ಮಾಡುವುದನ್ನ ಕೈಬಿಡಿ: ಪುರಾತನ ಆಚರಣೆಗಳು ಕೇರಳಕ್ಕೆ ಅವಮಾನಕರ -ದೇವಸ್ವಂ ಸಚಿವ ಆದೇಶ
ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ: ಪತ್ರಿಕಾ ವರದಿ ಆಧರಿಸಿ ಪ್ರಕರಣ ಕೈಗೆತ್ತಿಕೊಂಡ ಕೇರಳ ಹೈಕೋರ್ಟ್​
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 09, 2022 | 12:26 PM

ತಿರುವನಂತಪುರ: ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ ಮಾಡಿದ ಕುರಿತಾದ ಪತ್ರಿಕಾ ವರದಿಯನ್ನು ಆಧರಿಸಿ ಕೇರಳ ಹೈಕೋರ್ಟ್ (Kerala High Court)​ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ. ತ್ರಿಪುನಿತುರಾದಲ್ಲಿ (Tripunithura) ಶ್ರೀ ಪೂರ್ಣತ್ರಯೀಸಾ ದೇವಸ್ಥಾನದಲ್ಲಿ (Sree Poornathrayeesa Temple) 12 ಮಂದಿ ಬ್ರಾಹ್ಮಣರಿಗೆ ಭಕ್ತರು ತಮ್ಮ ಪಾಪಗಳನ್ನು ಕಳೆಯಲು ಕಾಲುತೊಳೆದು ಪಾದಪೂಜೆ ಮಾಡಿದ್ದರು. ಈ ಸಂಬಂಧ ಸ್ಥಳೀಯ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು.

ಆದರೆ ಶ್ರೀ ಪೂರ್ಣತ್ರಯೀಸಾ ದೇವಸ್ಥಾನದ ಅಡಳಿತ ಮಂಡಳಿ ಪರ ವಕೀಲರು ಈ ವರದಿಯನ್ನು ಅಲ್ಲಗಳೆದಿದ್ದು, ಹೀಗೆ ಬ್ರಾಹ್ಮಣರ ಪಾದಪೂಜೆ ಮಾಡಿರುವುದು ದೇವಾಲಯದ ಪ್ರಧಾನ ಅರ್ಚಕರೇ ವಿನಃ ಭಕ್ತರು ಅಲ್ಲ ಎಂದು ಹೇಳಿದ್ದಾರೆ. ಕೊಚ್ಚಿನ್ ದೇವಸ್ವಂ ಮಂಡಳಿ ಈ ಸಂಬಂಧ ಅಫಿಡವಿಟ್​ ಸಲ್ಲಿಸುವಂತೆ ಹೈಕೋರ್ಟ್​ ಸೂಚಿಸಿದೆ. ಫೆಬ್ರವರಿ 25 ಕ್ಕೆ ವಿಚಾರಣೆ ಮುಂದೂಡಲಾಗಿದೆ.

ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ: ಪತ್ರಿಕಾ ವರದಿ ಆಧರಿಸಿ ಪ್ರಕರಣ ಕೈಗೆತ್ತಿಕೊಂಡ ಕೇರಳ ಹೈಕೋರ್ಟ್​

ಪಂತ್ರಂಡು ನಮಸ್ಕಾರಂ (Panthrandu Namaskaram) ಸಂಪ್ರದಾಯದ ಭಾಗವಾಗಿ ಶ್ರೀ ಪೂರ್ಣತ್ರಯೀಸಾ ದೇವಸ್ಥಾನದಲ್ಲಿ ಬ್ರಾಹ್ಮಣರ ಕಾಲುತೊಳೆದು ಪಾದಪೂಜೆ ಮಾಡುವಂತೆ ಭಕ್ತರಿಗೆ ಸೂಚಿಸಲಾಗಿತ್ತು ಎಂದು ಪತ್ರಿಕೆಯಲ್ಲಿ ವರದಿಯಾಗಿತ್ತು. ಅದರ ಮಾಹಿತಿ ಆಧಾರದ ಮೇರೆಗೆ ಜಸ್ಟೀಸ್ ಅನಿಲ್​ ನರೇಂದ್ರ ಮತ್ತು ಪಿಜಿ ಅಜಿತ್​​ಕುಮಾರ್​ ಅವರಿದ್ದ ಹೈಕೋರ್ಟ್ ನ್ಯಾಯಪೀಠ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಆದರೆ ದೇವಸ್ಥಾನದ ಪ್ರಧಾನ ಅರ್ಚಕರು (ತಂತಿ) ಬ್ರಾಹ್ಮಣರ ಪಾದಪೂಜೆ ಮಾಡಿರುವುದು, ಭಕ್ತರು ಅಲ್ಲ ಎಂದು ಕೊಚ್ಚಿನ್ ದೇವಸ್ವಂ ಮಂಡಳಿ ಹೇಳಿದೆ. ಈ ಸಂಬಂಧ ಅಫಿಡವಿತ್​ ಸಲ್ಲಿಸಲು 2 ವಾರಗಳ ಕಾಲಾವಕಾಶ ಕೇಳಿದೆ.

ಈ ಮಧ್ಯೆ, ಪ್ರಕರಣದಲ್ಲಿ ರಾಜ್ಯ ಸರ್ಕಾರವೂ ಮಧ್ಯ ಪ್ರವೇಶಿಸಿದೆ. ದೇವಸ್ವಂ ಸಚಿವ ಆರ್​ ರಾಧಾಕೃಷ್ಣನ್ ಸಹ ಕೊಚ್ಚಿನ್ ದೇವಸ್ವಂ ಮಂಡಳಿಯಿಂದ (CDB) ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. CDB ಅಧ್ಯಕ್ಷ ವಿ ನಂದಕುಮಾರ್ ಅವರನ್ನು ಸಂಪರ್ಕಿಸಿದ ​ಸಚಿವ ರಾಧಾಕೃಷ್ಣನ್, ಪುರಾತನ ಸಂಪ್ರದಾಯಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಕೇರಳದಂತಹ ಪ್ರಗತಿಪರ ರಾಜ್ಯಕ್ಕೆ ಇದು ಅವಮಾನಕರ. ಇತರೆ ದೇವಾಲಯಗಳಲ್ಲಿಯೂ ಇಂತಹ ಪುರಾತನ ಆಚರಣೆಗಳನ್ನು ನಿಷೇಧಿಸಲಾಗುವುದು ಎಂದು ಅವರು ಹೇಳಿದ್ದಾರೆ. (ವರದಿ ಮೂಲ: www.barandbench.com)

ಇದನ್ನೂ ಓದಿ: ಬಿಕನಿಯನ್ನಾದರೂ ಧರಿಸಲಿ, ಹಿಜಾಬನ್ನಾದರೂ ಹಾಕಲಿ ಅದು ಹೆಣ್ಣುಮಕ್ಕಳ ಹಕ್ಕು, ಕಿರುಕುಳ ನಿಲ್ಲಿಸಿ: ಪ್ರಿಯಾಂಕಾ ಗಾಂಧಿ ಟ್ವೀಟ್

ಇದನ್ನೂ ಓದಿ: Healthy food: ಸಂಸತ್ತಿಗೆ ಸೈಕಲ್ಲಿನಲ್ಲಿ ಬರುವ ಆರೋಗ್ಯ ಸಚಿವ ತಮ್ಮ ಕ್ಯಾಂಟೀನ್​​ನಲ್ಲಿ ಇನ್ನು ಆರೋಗ್ಯಕರ ಆಹಾರವಷ್ಟೇ ಲಭ್ಯ ಎಂದರು!

Published On - 11:30 am, Wed, 9 February 22

Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ