AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಾಹ್ಮಣರಿಗೆ ಪಾದಪೂಜೆ ಮಾಡುವುದನ್ನ ಕೈಬಿಡಿ: ಪುರಾತನ ಆಚರಣೆಗಳು ಕೇರಳಕ್ಕೆ ಅವಮಾನಕರ -ದೇವಸ್ವಂ ಸಚಿವ ಆದೇಶ

ದೇವಸ್ವಂ ಸಚಿವ ಆರ್​ ರಾಧಾಕೃಷ್ಣನ್ ಸಹ ಕೊಚ್ಚಿನ್ ದೇವಸ್ವಂ ಮಂಡಳಿಯಿಂದ (CDB) ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. CDB ಅಧ್ಯಕ್ಷ ವಿ ನಂದಕುಮಾರ್ ಅವರನ್ನು ಸಂಪರ್ಕಿಸಿದ ​ಸಚಿವ ರಾಧಾಕೃಷ್ಣನ್, ಪುರಾತನ ಸಂಪ್ರದಾಯಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.

ಬ್ರಾಹ್ಮಣರಿಗೆ ಪಾದಪೂಜೆ ಮಾಡುವುದನ್ನ ಕೈಬಿಡಿ: ಪುರಾತನ ಆಚರಣೆಗಳು ಕೇರಳಕ್ಕೆ ಅವಮಾನಕರ -ದೇವಸ್ವಂ ಸಚಿವ ಆದೇಶ
ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ: ಪತ್ರಿಕಾ ವರದಿ ಆಧರಿಸಿ ಪ್ರಕರಣ ಕೈಗೆತ್ತಿಕೊಂಡ ಕೇರಳ ಹೈಕೋರ್ಟ್​
TV9 Web
| Updated By: ಸಾಧು ಶ್ರೀನಾಥ್​|

Updated on:Feb 09, 2022 | 12:26 PM

Share

ತಿರುವನಂತಪುರ: ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ ಮಾಡಿದ ಕುರಿತಾದ ಪತ್ರಿಕಾ ವರದಿಯನ್ನು ಆಧರಿಸಿ ಕೇರಳ ಹೈಕೋರ್ಟ್ (Kerala High Court)​ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ. ತ್ರಿಪುನಿತುರಾದಲ್ಲಿ (Tripunithura) ಶ್ರೀ ಪೂರ್ಣತ್ರಯೀಸಾ ದೇವಸ್ಥಾನದಲ್ಲಿ (Sree Poornathrayeesa Temple) 12 ಮಂದಿ ಬ್ರಾಹ್ಮಣರಿಗೆ ಭಕ್ತರು ತಮ್ಮ ಪಾಪಗಳನ್ನು ಕಳೆಯಲು ಕಾಲುತೊಳೆದು ಪಾದಪೂಜೆ ಮಾಡಿದ್ದರು. ಈ ಸಂಬಂಧ ಸ್ಥಳೀಯ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು.

ಆದರೆ ಶ್ರೀ ಪೂರ್ಣತ್ರಯೀಸಾ ದೇವಸ್ಥಾನದ ಅಡಳಿತ ಮಂಡಳಿ ಪರ ವಕೀಲರು ಈ ವರದಿಯನ್ನು ಅಲ್ಲಗಳೆದಿದ್ದು, ಹೀಗೆ ಬ್ರಾಹ್ಮಣರ ಪಾದಪೂಜೆ ಮಾಡಿರುವುದು ದೇವಾಲಯದ ಪ್ರಧಾನ ಅರ್ಚಕರೇ ವಿನಃ ಭಕ್ತರು ಅಲ್ಲ ಎಂದು ಹೇಳಿದ್ದಾರೆ. ಕೊಚ್ಚಿನ್ ದೇವಸ್ವಂ ಮಂಡಳಿ ಈ ಸಂಬಂಧ ಅಫಿಡವಿಟ್​ ಸಲ್ಲಿಸುವಂತೆ ಹೈಕೋರ್ಟ್​ ಸೂಚಿಸಿದೆ. ಫೆಬ್ರವರಿ 25 ಕ್ಕೆ ವಿಚಾರಣೆ ಮುಂದೂಡಲಾಗಿದೆ.

ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ: ಪತ್ರಿಕಾ ವರದಿ ಆಧರಿಸಿ ಪ್ರಕರಣ ಕೈಗೆತ್ತಿಕೊಂಡ ಕೇರಳ ಹೈಕೋರ್ಟ್​

ಪಂತ್ರಂಡು ನಮಸ್ಕಾರಂ (Panthrandu Namaskaram) ಸಂಪ್ರದಾಯದ ಭಾಗವಾಗಿ ಶ್ರೀ ಪೂರ್ಣತ್ರಯೀಸಾ ದೇವಸ್ಥಾನದಲ್ಲಿ ಬ್ರಾಹ್ಮಣರ ಕಾಲುತೊಳೆದು ಪಾದಪೂಜೆ ಮಾಡುವಂತೆ ಭಕ್ತರಿಗೆ ಸೂಚಿಸಲಾಗಿತ್ತು ಎಂದು ಪತ್ರಿಕೆಯಲ್ಲಿ ವರದಿಯಾಗಿತ್ತು. ಅದರ ಮಾಹಿತಿ ಆಧಾರದ ಮೇರೆಗೆ ಜಸ್ಟೀಸ್ ಅನಿಲ್​ ನರೇಂದ್ರ ಮತ್ತು ಪಿಜಿ ಅಜಿತ್​​ಕುಮಾರ್​ ಅವರಿದ್ದ ಹೈಕೋರ್ಟ್ ನ್ಯಾಯಪೀಠ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಆದರೆ ದೇವಸ್ಥಾನದ ಪ್ರಧಾನ ಅರ್ಚಕರು (ತಂತಿ) ಬ್ರಾಹ್ಮಣರ ಪಾದಪೂಜೆ ಮಾಡಿರುವುದು, ಭಕ್ತರು ಅಲ್ಲ ಎಂದು ಕೊಚ್ಚಿನ್ ದೇವಸ್ವಂ ಮಂಡಳಿ ಹೇಳಿದೆ. ಈ ಸಂಬಂಧ ಅಫಿಡವಿತ್​ ಸಲ್ಲಿಸಲು 2 ವಾರಗಳ ಕಾಲಾವಕಾಶ ಕೇಳಿದೆ.

ಈ ಮಧ್ಯೆ, ಪ್ರಕರಣದಲ್ಲಿ ರಾಜ್ಯ ಸರ್ಕಾರವೂ ಮಧ್ಯ ಪ್ರವೇಶಿಸಿದೆ. ದೇವಸ್ವಂ ಸಚಿವ ಆರ್​ ರಾಧಾಕೃಷ್ಣನ್ ಸಹ ಕೊಚ್ಚಿನ್ ದೇವಸ್ವಂ ಮಂಡಳಿಯಿಂದ (CDB) ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. CDB ಅಧ್ಯಕ್ಷ ವಿ ನಂದಕುಮಾರ್ ಅವರನ್ನು ಸಂಪರ್ಕಿಸಿದ ​ಸಚಿವ ರಾಧಾಕೃಷ್ಣನ್, ಪುರಾತನ ಸಂಪ್ರದಾಯಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಕೇರಳದಂತಹ ಪ್ರಗತಿಪರ ರಾಜ್ಯಕ್ಕೆ ಇದು ಅವಮಾನಕರ. ಇತರೆ ದೇವಾಲಯಗಳಲ್ಲಿಯೂ ಇಂತಹ ಪುರಾತನ ಆಚರಣೆಗಳನ್ನು ನಿಷೇಧಿಸಲಾಗುವುದು ಎಂದು ಅವರು ಹೇಳಿದ್ದಾರೆ. (ವರದಿ ಮೂಲ: www.barandbench.com)

ಇದನ್ನೂ ಓದಿ: ಬಿಕನಿಯನ್ನಾದರೂ ಧರಿಸಲಿ, ಹಿಜಾಬನ್ನಾದರೂ ಹಾಕಲಿ ಅದು ಹೆಣ್ಣುಮಕ್ಕಳ ಹಕ್ಕು, ಕಿರುಕುಳ ನಿಲ್ಲಿಸಿ: ಪ್ರಿಯಾಂಕಾ ಗಾಂಧಿ ಟ್ವೀಟ್

ಇದನ್ನೂ ಓದಿ: Healthy food: ಸಂಸತ್ತಿಗೆ ಸೈಕಲ್ಲಿನಲ್ಲಿ ಬರುವ ಆರೋಗ್ಯ ಸಚಿವ ತಮ್ಮ ಕ್ಯಾಂಟೀನ್​​ನಲ್ಲಿ ಇನ್ನು ಆರೋಗ್ಯಕರ ಆಹಾರವಷ್ಟೇ ಲಭ್ಯ ಎಂದರು!

Published On - 11:30 am, Wed, 9 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ