AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದಿಂದ ವಾಪಸ್ ಆಗುತ್ತಿದ್ದಂತೆ ವಾಷಿಂಗ್ಟನ್​ ಸುಂದರ್​ ಹೆಗಲಿಗೆ ಪ್ರಮುಖ ಜವಾಬ್ದಾರಿ..

ವಾಷಿಂಗ್ಟನ್ ಸುಂದರ್​ ಈ ಬಾರಿ ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದ ಚೊಚ್ಚಲ ಟೆಸ್ಟ್​ ಪಂದ್ಯಾವಳಿಯಲ್ಲಿ ಅರ್ಧಶತಕದೊಂದಿಗೆ ಭರ್ಜರಿ ಮಿಂಚಿ ತವರಿಗೆ ಆಗಮಿಸಿದ್ದಾರೆ. ಐತಿಹಾಸಿಕ ಗೆಲುವು ಹೊತ್ತು ಭಾರತಕ್ಕೆ ಮರಳಿದ ವಾಷಿಂಗ್ಟನ್ ಸುಂದರ್​ಗೆ ಇಲ್ಲಿಯೂ ಒಂದು ಸರ್ಪ್ರೈಸ್ ಕಾದಿತ್ತು.

ಆಸ್ಟ್ರೇಲಿಯಾದಿಂದ ವಾಪಸ್ ಆಗುತ್ತಿದ್ದಂತೆ ವಾಷಿಂಗ್ಟನ್​ ಸುಂದರ್​ ಹೆಗಲಿಗೆ ಪ್ರಮುಖ ಜವಾಬ್ದಾರಿ..
ವಾಷಿಂಗ್ಟನ್​ ಸುಂದರ್​
Lakshmi Hegde
| Edited By: |

Updated on: Jan 25, 2021 | 9:26 PM

Share

ಚೆನ್ನೈ: ಭಾರತ ಕ್ರಿಕೆಟ್​ ತಂಡದ ಆಲ್​ರೌಂಡರ್​ಆಟಗಾರ ವಾಷಿಂಗ್ಟನ್ ಸುಂದರ್​ ಅವರನ್ನು ಚೆನ್ನೈನ ಜಿಲ್ಲಾ ಚುನಾವಣಾ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ. ಈ ವಿಚಾರಕ್ಕೆ ವಾಷಿಂಗ್ಟನ್​ ಸುಂದರ್ ಸಿಕ್ಕಾಪಟೆ ಖುಷಿಯಾಗಿದ್ದಾರೆ. ಹೆಚ್ಚಿನ ಮತದಾರರನ್ನು ಸೆಳೆಯುವ, ಅದರಲ್ಲೂ ಯುವಕರನ್ನು ಹೆಚ್ಚಾಗಿ ಆಕರ್ಷಿಸುವ ಗುರಿಯನ್ನಿಟ್ಟುಕೊಂಡು ಕ್ರಿಕೆಟರ್ ವಾಷಿಂಗ್ಟನ್​ ಸುಂದರ್​ರನ್ನು ಚುನಾವಣಾ ಐಕಾನ್​ ಆಗಿ ನೇಮಕ ಮಾಡಿದ್ದಾಗಿ ಜಿಲ್ಲಾ ಚುನಾವಣಾ ಕಚೇರಿಯೂ ಆಗಿರುವ ಚೆನ್ನೈ ಕಾರ್ಪೋರೇಷನ್ ತಿಳಿಸಿದೆ.

ವಾಷಿಂಗ್ಟನ್ ಸುಂದರ್​ ಈ ಬಾರಿ ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದ ಚೊಚ್ಚಲ ಟೆಸ್ಟ್​ ಪಂದ್ಯಾವಳಿಯಲ್ಲಿ ಅರ್ಧಶತಕದೊಂದಿಗೆ ಭರ್ಜರಿ ಮಿಂಚಿ ತವರಿಗೆ ಆಗಮಿಸಿದ್ದಾರೆ. ಐತಿಹಾಸಿಕ ಗೆಲುವು ಹೊತ್ತು ಭಾರತಕ್ಕೆ ಮರಳಿದ ವಾಷಿಂಗ್ಟನ್ ಸುಂದರ್​ಗೆ ಇಲ್ಲಿಯೂ ಒಂದು ಸರ್ಪ್ರೈಸ್ ಕಾದಿತ್ತು. ಬರುತ್ತಿದ್ದಂತೆ ಚೆನ್ನೈನ ಜಿಲ್ಲಾ ಚುನಾವಣಾ ರಾಯಭಾರಿಯಾಗಿ ನೇಮಕವಾಗಿದ್ದಾರೆ.

ವಾಷಿಂಗ್ಟನ್​ ಸುಂದರ್​ ಅವರು ಆಸ್ಟ್ರೇಲಿಯಾದಿಂದ ಬರುತ್ತಿದ್ದಂತೆ ನಾವು ನಮ್ಮ ಯೋಚನೆಯನ್ನು ಅವರಿಗೆ ತಿಳಿಸಿದೆವು. ಅವರು ಕೂಡಲೇ ಒಪ್ಪಿಕೊಂಡರು. ಮುಂಬರುವ ವಿಧಾನಸಭಾ ಚುನಾವಣೆಯತ್ತ ಯುವಕರನ್ನು ಹೆಚ್ಚೆಚ್ಚು ಸೆಳೆಯುವ ಉದ್ದೇಶದಿಂದ, ಅದಕ್ಕೆ ಹೊಂದಿಕೆಯಾಗುವಂಥವರನ್ನು ಹುಡುಕುತ್ತಿದ್ದೆವು. ವಾಷಿಂಗ್ಟನ್​ ಸುಂದರ್​ ತಕ್ಕವರು ಎನ್ನಿಸಿತು ಚೆನ್ನೈ ಕಾರ್ಪೋರೇಷನ್ ಜಿಲ್ಲಾಧಿಕಾರಿ ಮೇಘನಾಥ್​ ರೆಡ್ಡಿ ತಿಳಿಸಿದ್ದಾರೆ.

ವಾಷಿಂಗ್ಟನ್ ಸುಂದರ್​ ಅವರನ್ನು ಒಳಗೊಂಡು ಸೋಷಿಯಲ್​ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಲು ನಿರ್ಧಿರಿಸಿರುವ ಜಿಲ್ಲಾಡಳಿತ, IthuNammaInnings ಎಂಬ ಹ್ಯಾಷ್​ಟ್ಯಾಗ್​ ಬಳಸಲು ತೀರ್ಮಾನಿಸಿದೆ.

ಇನ್ಮುಂದೆ ಕ್ರಿಕೆಟ್​ನಲ್ಲಿ ಬೌನ್ಸರ್​ ಬ್ಯಾನ್​?: ಮಹತ್ವದ ವರದಿ ನೀಡಿದ ತಜ್ಞರ ತಂಡ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು