AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದಿಂದ ವಾಪಸ್ ಆಗುತ್ತಿದ್ದಂತೆ ವಾಷಿಂಗ್ಟನ್​ ಸುಂದರ್​ ಹೆಗಲಿಗೆ ಪ್ರಮುಖ ಜವಾಬ್ದಾರಿ..

ವಾಷಿಂಗ್ಟನ್ ಸುಂದರ್​ ಈ ಬಾರಿ ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದ ಚೊಚ್ಚಲ ಟೆಸ್ಟ್​ ಪಂದ್ಯಾವಳಿಯಲ್ಲಿ ಅರ್ಧಶತಕದೊಂದಿಗೆ ಭರ್ಜರಿ ಮಿಂಚಿ ತವರಿಗೆ ಆಗಮಿಸಿದ್ದಾರೆ. ಐತಿಹಾಸಿಕ ಗೆಲುವು ಹೊತ್ತು ಭಾರತಕ್ಕೆ ಮರಳಿದ ವಾಷಿಂಗ್ಟನ್ ಸುಂದರ್​ಗೆ ಇಲ್ಲಿಯೂ ಒಂದು ಸರ್ಪ್ರೈಸ್ ಕಾದಿತ್ತು.

ಆಸ್ಟ್ರೇಲಿಯಾದಿಂದ ವಾಪಸ್ ಆಗುತ್ತಿದ್ದಂತೆ ವಾಷಿಂಗ್ಟನ್​ ಸುಂದರ್​ ಹೆಗಲಿಗೆ ಪ್ರಮುಖ ಜವಾಬ್ದಾರಿ..
ವಾಷಿಂಗ್ಟನ್​ ಸುಂದರ್​
Lakshmi Hegde
| Edited By: |

Updated on: Jan 25, 2021 | 9:26 PM

Share

ಚೆನ್ನೈ: ಭಾರತ ಕ್ರಿಕೆಟ್​ ತಂಡದ ಆಲ್​ರೌಂಡರ್​ಆಟಗಾರ ವಾಷಿಂಗ್ಟನ್ ಸುಂದರ್​ ಅವರನ್ನು ಚೆನ್ನೈನ ಜಿಲ್ಲಾ ಚುನಾವಣಾ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ. ಈ ವಿಚಾರಕ್ಕೆ ವಾಷಿಂಗ್ಟನ್​ ಸುಂದರ್ ಸಿಕ್ಕಾಪಟೆ ಖುಷಿಯಾಗಿದ್ದಾರೆ. ಹೆಚ್ಚಿನ ಮತದಾರರನ್ನು ಸೆಳೆಯುವ, ಅದರಲ್ಲೂ ಯುವಕರನ್ನು ಹೆಚ್ಚಾಗಿ ಆಕರ್ಷಿಸುವ ಗುರಿಯನ್ನಿಟ್ಟುಕೊಂಡು ಕ್ರಿಕೆಟರ್ ವಾಷಿಂಗ್ಟನ್​ ಸುಂದರ್​ರನ್ನು ಚುನಾವಣಾ ಐಕಾನ್​ ಆಗಿ ನೇಮಕ ಮಾಡಿದ್ದಾಗಿ ಜಿಲ್ಲಾ ಚುನಾವಣಾ ಕಚೇರಿಯೂ ಆಗಿರುವ ಚೆನ್ನೈ ಕಾರ್ಪೋರೇಷನ್ ತಿಳಿಸಿದೆ.

ವಾಷಿಂಗ್ಟನ್ ಸುಂದರ್​ ಈ ಬಾರಿ ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದ ಚೊಚ್ಚಲ ಟೆಸ್ಟ್​ ಪಂದ್ಯಾವಳಿಯಲ್ಲಿ ಅರ್ಧಶತಕದೊಂದಿಗೆ ಭರ್ಜರಿ ಮಿಂಚಿ ತವರಿಗೆ ಆಗಮಿಸಿದ್ದಾರೆ. ಐತಿಹಾಸಿಕ ಗೆಲುವು ಹೊತ್ತು ಭಾರತಕ್ಕೆ ಮರಳಿದ ವಾಷಿಂಗ್ಟನ್ ಸುಂದರ್​ಗೆ ಇಲ್ಲಿಯೂ ಒಂದು ಸರ್ಪ್ರೈಸ್ ಕಾದಿತ್ತು. ಬರುತ್ತಿದ್ದಂತೆ ಚೆನ್ನೈನ ಜಿಲ್ಲಾ ಚುನಾವಣಾ ರಾಯಭಾರಿಯಾಗಿ ನೇಮಕವಾಗಿದ್ದಾರೆ.

ವಾಷಿಂಗ್ಟನ್​ ಸುಂದರ್​ ಅವರು ಆಸ್ಟ್ರೇಲಿಯಾದಿಂದ ಬರುತ್ತಿದ್ದಂತೆ ನಾವು ನಮ್ಮ ಯೋಚನೆಯನ್ನು ಅವರಿಗೆ ತಿಳಿಸಿದೆವು. ಅವರು ಕೂಡಲೇ ಒಪ್ಪಿಕೊಂಡರು. ಮುಂಬರುವ ವಿಧಾನಸಭಾ ಚುನಾವಣೆಯತ್ತ ಯುವಕರನ್ನು ಹೆಚ್ಚೆಚ್ಚು ಸೆಳೆಯುವ ಉದ್ದೇಶದಿಂದ, ಅದಕ್ಕೆ ಹೊಂದಿಕೆಯಾಗುವಂಥವರನ್ನು ಹುಡುಕುತ್ತಿದ್ದೆವು. ವಾಷಿಂಗ್ಟನ್​ ಸುಂದರ್​ ತಕ್ಕವರು ಎನ್ನಿಸಿತು ಚೆನ್ನೈ ಕಾರ್ಪೋರೇಷನ್ ಜಿಲ್ಲಾಧಿಕಾರಿ ಮೇಘನಾಥ್​ ರೆಡ್ಡಿ ತಿಳಿಸಿದ್ದಾರೆ.

ವಾಷಿಂಗ್ಟನ್ ಸುಂದರ್​ ಅವರನ್ನು ಒಳಗೊಂಡು ಸೋಷಿಯಲ್​ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಲು ನಿರ್ಧಿರಿಸಿರುವ ಜಿಲ್ಲಾಡಳಿತ, IthuNammaInnings ಎಂಬ ಹ್ಯಾಷ್​ಟ್ಯಾಗ್​ ಬಳಸಲು ತೀರ್ಮಾನಿಸಿದೆ.

ಇನ್ಮುಂದೆ ಕ್ರಿಕೆಟ್​ನಲ್ಲಿ ಬೌನ್ಸರ್​ ಬ್ಯಾನ್​?: ಮಹತ್ವದ ವರದಿ ನೀಡಿದ ತಜ್ಞರ ತಂಡ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!