AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದಿಂದ ವಾಪಸ್ ಆಗುತ್ತಿದ್ದಂತೆ ವಾಷಿಂಗ್ಟನ್​ ಸುಂದರ್​ ಹೆಗಲಿಗೆ ಪ್ರಮುಖ ಜವಾಬ್ದಾರಿ..

ವಾಷಿಂಗ್ಟನ್ ಸುಂದರ್​ ಈ ಬಾರಿ ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದ ಚೊಚ್ಚಲ ಟೆಸ್ಟ್​ ಪಂದ್ಯಾವಳಿಯಲ್ಲಿ ಅರ್ಧಶತಕದೊಂದಿಗೆ ಭರ್ಜರಿ ಮಿಂಚಿ ತವರಿಗೆ ಆಗಮಿಸಿದ್ದಾರೆ. ಐತಿಹಾಸಿಕ ಗೆಲುವು ಹೊತ್ತು ಭಾರತಕ್ಕೆ ಮರಳಿದ ವಾಷಿಂಗ್ಟನ್ ಸುಂದರ್​ಗೆ ಇಲ್ಲಿಯೂ ಒಂದು ಸರ್ಪ್ರೈಸ್ ಕಾದಿತ್ತು.

ಆಸ್ಟ್ರೇಲಿಯಾದಿಂದ ವಾಪಸ್ ಆಗುತ್ತಿದ್ದಂತೆ ವಾಷಿಂಗ್ಟನ್​ ಸುಂದರ್​ ಹೆಗಲಿಗೆ ಪ್ರಮುಖ ಜವಾಬ್ದಾರಿ..
ವಾಷಿಂಗ್ಟನ್​ ಸುಂದರ್​
Lakshmi Hegde
| Edited By: |

Updated on: Jan 25, 2021 | 9:26 PM

Share

ಚೆನ್ನೈ: ಭಾರತ ಕ್ರಿಕೆಟ್​ ತಂಡದ ಆಲ್​ರೌಂಡರ್​ಆಟಗಾರ ವಾಷಿಂಗ್ಟನ್ ಸುಂದರ್​ ಅವರನ್ನು ಚೆನ್ನೈನ ಜಿಲ್ಲಾ ಚುನಾವಣಾ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ. ಈ ವಿಚಾರಕ್ಕೆ ವಾಷಿಂಗ್ಟನ್​ ಸುಂದರ್ ಸಿಕ್ಕಾಪಟೆ ಖುಷಿಯಾಗಿದ್ದಾರೆ. ಹೆಚ್ಚಿನ ಮತದಾರರನ್ನು ಸೆಳೆಯುವ, ಅದರಲ್ಲೂ ಯುವಕರನ್ನು ಹೆಚ್ಚಾಗಿ ಆಕರ್ಷಿಸುವ ಗುರಿಯನ್ನಿಟ್ಟುಕೊಂಡು ಕ್ರಿಕೆಟರ್ ವಾಷಿಂಗ್ಟನ್​ ಸುಂದರ್​ರನ್ನು ಚುನಾವಣಾ ಐಕಾನ್​ ಆಗಿ ನೇಮಕ ಮಾಡಿದ್ದಾಗಿ ಜಿಲ್ಲಾ ಚುನಾವಣಾ ಕಚೇರಿಯೂ ಆಗಿರುವ ಚೆನ್ನೈ ಕಾರ್ಪೋರೇಷನ್ ತಿಳಿಸಿದೆ.

ವಾಷಿಂಗ್ಟನ್ ಸುಂದರ್​ ಈ ಬಾರಿ ಆಸ್ಟ್ರೇಲಿಯಾದ ಗಬ್ಬಾದಲ್ಲಿ ನಡೆದ ಚೊಚ್ಚಲ ಟೆಸ್ಟ್​ ಪಂದ್ಯಾವಳಿಯಲ್ಲಿ ಅರ್ಧಶತಕದೊಂದಿಗೆ ಭರ್ಜರಿ ಮಿಂಚಿ ತವರಿಗೆ ಆಗಮಿಸಿದ್ದಾರೆ. ಐತಿಹಾಸಿಕ ಗೆಲುವು ಹೊತ್ತು ಭಾರತಕ್ಕೆ ಮರಳಿದ ವಾಷಿಂಗ್ಟನ್ ಸುಂದರ್​ಗೆ ಇಲ್ಲಿಯೂ ಒಂದು ಸರ್ಪ್ರೈಸ್ ಕಾದಿತ್ತು. ಬರುತ್ತಿದ್ದಂತೆ ಚೆನ್ನೈನ ಜಿಲ್ಲಾ ಚುನಾವಣಾ ರಾಯಭಾರಿಯಾಗಿ ನೇಮಕವಾಗಿದ್ದಾರೆ.

ವಾಷಿಂಗ್ಟನ್​ ಸುಂದರ್​ ಅವರು ಆಸ್ಟ್ರೇಲಿಯಾದಿಂದ ಬರುತ್ತಿದ್ದಂತೆ ನಾವು ನಮ್ಮ ಯೋಚನೆಯನ್ನು ಅವರಿಗೆ ತಿಳಿಸಿದೆವು. ಅವರು ಕೂಡಲೇ ಒಪ್ಪಿಕೊಂಡರು. ಮುಂಬರುವ ವಿಧಾನಸಭಾ ಚುನಾವಣೆಯತ್ತ ಯುವಕರನ್ನು ಹೆಚ್ಚೆಚ್ಚು ಸೆಳೆಯುವ ಉದ್ದೇಶದಿಂದ, ಅದಕ್ಕೆ ಹೊಂದಿಕೆಯಾಗುವಂಥವರನ್ನು ಹುಡುಕುತ್ತಿದ್ದೆವು. ವಾಷಿಂಗ್ಟನ್​ ಸುಂದರ್​ ತಕ್ಕವರು ಎನ್ನಿಸಿತು ಚೆನ್ನೈ ಕಾರ್ಪೋರೇಷನ್ ಜಿಲ್ಲಾಧಿಕಾರಿ ಮೇಘನಾಥ್​ ರೆಡ್ಡಿ ತಿಳಿಸಿದ್ದಾರೆ.

ವಾಷಿಂಗ್ಟನ್ ಸುಂದರ್​ ಅವರನ್ನು ಒಳಗೊಂಡು ಸೋಷಿಯಲ್​ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಲು ನಿರ್ಧಿರಿಸಿರುವ ಜಿಲ್ಲಾಡಳಿತ, IthuNammaInnings ಎಂಬ ಹ್ಯಾಷ್​ಟ್ಯಾಗ್​ ಬಳಸಲು ತೀರ್ಮಾನಿಸಿದೆ.

ಇನ್ಮುಂದೆ ಕ್ರಿಕೆಟ್​ನಲ್ಲಿ ಬೌನ್ಸರ್​ ಬ್ಯಾನ್​?: ಮಹತ್ವದ ವರದಿ ನೀಡಿದ ತಜ್ಞರ ತಂಡ

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!