AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಎಡಿಎಂಕೆ ಎರಡು ಎಲೆ ಚಿಹ್ನೆ ಬಳಕೆ ಸ್ಥಗಿತ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿದ ಮನವಿ ವಜಾ ಮಾಡಿದ ಸುಪ್ರೀಂ

AIADMK ಪಿಎ ಜಾಸೆಫ್ ಎಂಬ ಅರ್ಜಿದಾರರು ರಾಜ್ಯದಲ್ಲಿ ಸಾರ್ವಜನಿಕ ಸುವ್ಯವಸ್ಥೆ ಮತ್ತು ಶಾಂತಿಯನ್ನು ಕಾಪಾಡಲು ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಒ ಪನ್ನೀರ ಸೆಲ್ವಂ ನಡುವಿನ ವಿವಾದ ಪರಿಹಾರವಾಗುವ ತನಕ...

ಎಐಎಡಿಎಂಕೆ ಎರಡು ಎಲೆ ಚಿಹ್ನೆ ಬಳಕೆ ಸ್ಥಗಿತ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿದ ಮನವಿ ವಜಾ ಮಾಡಿದ ಸುಪ್ರೀಂ
ಸುಪ್ರೀಂಕೋರ್ಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 18, 2022 | 1:33 PM

Share

ದೆಹಲಿ: ಎಐಎಡಿಎಂಕೆಯ (AIADMK) “ಎರಡು ಎಲೆ” ಚಿಹ್ನೆ ಫ್ರೀಜ್ ಮಾಡಲು ಭಾರತದ ಚುನಾವಣಾ ಆಯೋಗಕ್ಕೆ (Election Commission) ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ (Supreme Court) ಗುರುವಾರ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ, ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್ ನ್ಯಾಯಪೀಠ ಬುಧವಾರ ಈ ಅರ್ಜಿ ವಿಚಾರಣೆ ನಡೆಸಿದೆ. ಈ ಅರ್ಜಿಯು ಸಮಯ ವ್ಯರ್ಥ ಮಾಡುತ್ತದೆ ಎಂದು ಹೇಳಿ ಸಿಜೆಐ ಅರ್ಜಿ ವಜಾ ಮಾಡಿದ್ದಾರೆ. ಪಿಎ ಜಾಸೆಫ್ ಎಂಬ ಅರ್ಜಿದಾರರು ರಾಜ್ಯದಲ್ಲಿ ಸಾರ್ವಜನಿಕ ಸುವ್ಯವಸ್ಥೆ ಮತ್ತು ಶಾಂತಿಯನ್ನು ಕಾಪಾಡಲು ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಒ ಪನ್ನೀರ ಸೆಲ್ವಂ ನಡುವಿನ ವಿವಾದ ಪರಿಹಾರವಾಗುವ ತನಕ ಎಐಎಡಿಎಂಕೆಯ ಪ್ರತಿಸ್ಪರ್ಧಿ ಗುಂಪುಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ಮತ್ತು “ಎರಡು ಎಲೆ” ಚಿಹ್ನೆಯನ್ನು ಸ್ಥಗಿತಗೊಳಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಈ ಹಿಂದೆ ಮದ್ರಾಸ್ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ಮದ್ರಾಸ್ ಹೈಕೋರ್ಟ್​ನಲ್ಲಿ ಈ ಅರ್ಜಿ ವಿಚಾರಣೆ ಮಾಡಿದ್ದ ಮುಖ್ಯ ನ್ಯಾಯಾಧೀಶ ಎಂಎನ್ ಭಂಡಾರಿ ಮತ್ತು ನ್ಯಾಯಾಧೀಶರಾದ ಎನ್ ಮಾಲಾ ಅವರ ನ್ಯಾಯಪೀಠವು, ಪ್ರಚಾರಕ್ಕಾಗಿ ಈ ಮನವಿ ಸಲ್ಲಿಸಲಾಗಿದೆ ಎಂದು ಹೇಳಿ ಅರ್ಜಿ ವಜಾ ಮಾಡಿದ್ದರು. ಅದೇ ವೇಳೆ ಅರ್ಜಿದಾರರಿಗೆ ರೂ 25,000 ದಂಡವನ್ನೂ ವಿಧಿಸಿದ್ದರು. ನಮ್ಮ ಪಿಐಎಲ್ ವಡಾ ಮಾಡಿದ್ದಲ್ಲದ್ದೆ ನಮ್ಮ ಮೇಲೆ ರೂ 25,000 ದಂಡವನ್ನೂ ವಿಧಿಸಲಾಗಿದೆ ಎಂದು ಅರ್ಜಿದಾರ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಮನವಿಯಲ್ಲಿ ಹೇಳಿದ್ದಾರೆ. ಅದೇ ವೇಳೆ ನನ್ನ ಆತಂಕಗಳು ಆಧಾರ ರಹಿತವಾಗಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ನಾವು ನಿಮಗೆ ಎಷ್ಟು ದಂಡ ವಿಧಿಸಬೇಕು? ಅವರು ನಿಮಗೆ 25,000 ದಂಡ ವಿಧಿಸಿದರು. ನಾವು ನಿಮ್ಮ ಮೇಲೆ 25,000 ದಂಡವನ್ನು ವಿಧಿಸುತ್ತೇವೆ. ನೀವು ಬ್ಯುಸಿ ಮನುಷ್ಯ. ನಿಮಗೇನೂ ಕೆಲಸವಿಲ್ಲ. ಅರ್ಜಿ ವಜಾಗೊಳಿಸಲಾಗಿದೆ ಎಂದಿದ್ದಾರೆ.

Published On - 1:15 pm, Thu, 18 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್