Delhi Accident: ದೆಹಲಿಯ ರಾಜ್​ಪುರ್​​ನಲ್ಲಿ ಕಚೋರಿ ಅಂಗಡಿಗೆ ನುಗ್ಗಿದ ಕಾರು; ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಕಾರೊಂದು ಕಚೋರಿ ಅಂಗಡಿಯೊಂದಕ್ಕೆ ವೇಗವಾಗಿ ನುಗ್ಗಿ ಜನರನ್ನು ಚೆಲ್ಲಾಪಿಲ್ಲಿಯಾಗಿಸಿದ ಭೀಕರ ಅಪಘಾತ ದೆಹಲಿಯ ರಾಜ್​ಪುರ್​​ನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಸಾವು ಸಂಭವಿಸಿಲ್ಲವಾದರೂ, ಅಪಘಾತದ ಭೀಕರ ದೃಶ್ಯ ಎದೆ ಝಲ್ಲೆನ್ನಿಸುವಂತಿದೆ. ಅಪಘಾತದ ಸಿಸಿಟಿವಿ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Delhi Accident: ದೆಹಲಿಯ ರಾಜ್​ಪುರ್​​ನಲ್ಲಿ ಕಚೋರಿ ಅಂಗಡಿಗೆ ನುಗ್ಗಿದ ಕಾರು; ಭಯಾನಕ ವಿಡಿಯೋ ಇಲ್ಲಿದೆ ನೋಡಿ
ದೆಹಲಿಯ ರಾಜ್​ಪುರ್​​ನಲ್ಲಿ ಕಚೋರಿ ಅಂಗಡಿಗೆ ನುಗ್ಗಿದ ಕಾರು

Updated on: Apr 02, 2024 | 11:18 AM

ನವದೆಹಲಿ, ಏಪ್ರಿಲ್ 2: ದೆಹಲಿಯ (Delhi) ರಾಜ್​ಪುರ್​​ನಲ್ಲಿ ವೇಗವಾಗಿ ಬಂದ ಕಾರೊಂದು ಕಚೋರಿ ಅಂಗಡಿಯೊಂದಕ್ಕೆ ನುಗ್ಗಿ (Car Accident) ಹಲವಾರು ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಇದೀಗ ಘಟನೆಗೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ (CCTV Video) ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಅಪಘಾತದ ಭೀಕರತೆಯನ್ನು ತೋರಿಸಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಸಾವು ಸಂಭವಿಸಿಲ್ಲ ಎನ್ನಲಾಗಿದೆ. ಕೆಲವು ಮಂದಿ ಗ್ರಾಹಕರು ಅಂಗಡಿಯಲ್ಲಿ ಕಚೋರಿ ತಿನ್ನುತ್ತಿದ್ದಾಗ ಇದ್ದಕ್ಕಿದ್ದಂತೆ ಅತಿವೇಗದಿಂದ ಬಂದ ಕಾರು ಅಂಗಡಿಗೆ ನುಗ್ಗಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ. ಕಾರು ಬಲವಾಗಿ ಡಿಕ್ಕಿ ಹೊಡೆದ ಕಾರಣ ಕೆಲವರು ಅಂಗಡಿಯ ಇಕ್ಕೆಲಗಳಲ್ಲಿ ಎಸೆಯಲ್ಪಟ್ಟರು.

‘‘ರಾಜಪುರದ ಪ್ರಸಿದ್ಧ ‘ಫತೇ’ ಕಚೋರಿ ಅಂಗಡಿಗೆ ಕಾರೊಂದು ನುಗ್ಗಿ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತವನ್ನು ನೋಡಿದರೆ ನೀವೂ ಆಶ್ಚರ್ಯ ಪಡುತ್ತೀರಿ. ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ’ ಎಂದು ದೆಹಲಿಯ ಸ್ಥಳೀಯ ಮಾಧ್ಯಮ ‘ತೇಜ್ ತರಾರ್’ ವರದಿ ಮಾಡಿದ್ದು, ಸಿಸಿಟಿವಿ ವಿಡಿಯೋ ತುಣುಕನ್ನೂ ಪೋಸ್ಟ್ ಮಾಡಿದೆ.

ಕಾರು ಅಪಘಾತದ ಸಿಸಿಟಿವಿ ದೃಶ್ಯ


ಅಪಘಾತದ ನಂತರ, ಜನರು ನೋವಿನಿಂದ ನರಳುತ್ತಿರುವ ದೃಶ್ಯ ಸಿಸಿಟಿವಿ ವೀಡಿಯೊದಲ್ಲಿ ಕಂಡುಬಂದಿದೆ. ಕಾರು ಡಿಕ್ಕಿಯಾದ ಕೆಲವು ಸೆಕೆಂಡುಗಳ ನಂತರ, ಹತ್ತಿರದ ಜನರು ಗಾಯಗೊಂಡವರಿಗೆ ಸಹಾಯ ಮಾಡಲು ಮುಂದಾಗುತ್ತಿರುವುದು ಕೂಡ ಕಾಣಿಸಿದೆ.

ವರದಿಗಳ ಪ್ರಕಾರ, ದೆಹಲಿಯ ರಾಜ್‌ಪುರ ರಸ್ತೆಯ ಸಿವಿಲ್ ಲೈನ್‌ನಲ್ಲಿರುವ ಫತೇ ಕಿ ಕಚೋರಿ ಅಂಗಡಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಂಗಡಿಯಲ್ಲಿ ಹತ್ತಾರು ಜನ ಕಚೋರಿ ತಿನ್ನುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಎರಡು ನಿಮಿಷಗಳ ಅವಧಿಯ ವೀಡಿಯೊವು ಕಪ್ಪು ಟಿ-ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬರು ಕಾರು ಮತ್ತು ಗೋಡೆಯ ನಡುವೆ ಸಿಲುಕಿ ನಜ್ಜುಗುಜ್ಜಾಗುವುದರಿಂದ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿರುವುದು ಕಾಣಿಸಿದೆ.

ಇದನ್ನೂ ಓದಿ: ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಐವರ ಸಾವು

ಡಿಕ್ಕಿಯ ನಂತರ ಚಾಲಕ ಕಾರಿನಿಂದ ಇಳಿಯಲಿಲ್ಲ. ತುಸು ಹೊತ್ತಿನಲ್ಲಿ ಆತ ಕಾರನ್ನು ರಿವರ್ಸ್ ತೆಗೆದುಕೊಂಡಿರುವುದು, ವ್ಯಕ್ತಿಯೊಬ್ಬರು ತಮ್ಮ ಜತೆಗಿದ್ದ ಮಹಿಳೆಯನ್ನು ಹುಡುಕುತ್ತಿರುವುದು ಕಾಣಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us