AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi speech live: ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ನೇರ ಪ್ರಸಾರ

Independence Day PM Modi speech live: ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ, ಸಡಗರ ಗರಿಗೆದರಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಇಡೀ ದೇಶವೇ ಸಡಗರದ ಅಲೆಯಲ್ಲಿ ಮಿಂದೇಳುತ್ತಿದೆ. ದೆಹಲಿಯ ಕೆಂಪುಕೋಟೆ ಮೇಲೆ 11ನೇ ಬಾರಿ ಧ್ವಜಾರೋಹಣ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ.

PM Modi speech live: ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ನೇರ ಪ್ರಸಾರ
ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ನೇರ ಪ್ರಸಾರ
ಗಣಪತಿ ಶರ್ಮಾ
|

Updated on:Aug 15, 2024 | 7:36 AM

Share

ನವದೆಹಲಿ, ಆಗಸ್ಟ್ 15: ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯ ಆಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ 11ನೇ ಬಾರಿ ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾಷಣದ ನೇರ ಪ್ರಸಾರ ಇಲ್ಲಿ ವೀಕ್ಷಿಸಬಹುದಾಗಿದೆ. ಐತಿಹಾಸಿಕ ಕೆಂಪುಕೋಟೆಯಲ್ಲಿ 11ನೇ ಬಾರಿ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದಾರೆ. ಜವಾಹರ್​ಲಾಲ್ ನೆಹರು, ಇಂದಿರಾಗಾಂಧಿ ಬಳಿಕ ಕೆಂಪುಕೋಟೆಯಲ್ಲಿ ಸತತ 11ನೇ ಬಾರಿ ಸ್ವಾತಂತ್ರ್ಯ ದಿನದ ಭಾಷಣಮಾಡುತ್ತಿರುವ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ವಿಕಸಿತ್ ಭಾರತ್-2047ರ ಥೀಮ್​ ಅಡಿಯಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನ ಕೂಡ ನಡೆಸಲಾಗುತ್ತಿದೆ.

ಐತಿಹಾಸಿಕ ಕೆಂಪುಕೋಟೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ 6,000 ಕ್ಕೂ ಹೆಚ್ಚು ವಿಶೇಷ ಅತಿಥಿಗಳು ಭಾಗವಹಿಸುತ್ತಿದ್ದಾರೆ. ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದವರಿಗೆ ಆದ್ಯತೆಯನ್ನ ನೀಡಲಾಗಿದೆ. ರೈತರು, ಯುವಕರು, ಮಹಿಳೆಯರು ಹಾಗೂ ಬಡವರನ್ನು ಭಾರತದ 4 ಸ್ತಂಭಗಳು ಎಂದು ಗುರುತಿಸಿಸಲಾಗಿದೆ. ಗಣ್ಯಾತಿ ಗಣ್ಯರೂ ಕೂಡ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಮೋದಿ ಭಾಷಣೆ ವೀಕ್ಷಣೆಗೆ ಎಲ್​ಇಡಿ ಪರದೆ ಅವಳಡಿಸಲಾಗಿದೆ.

ಇದನ್ನೂ ಓದಿ: Independence Day 2024: ಕೆಂಪು ಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯ ದಿನಾಚರಣೆಗೆ 6,000 ಅತಿಥಿಗಳಿಗೆ ಆಹ್ವಾನ; ಹೇಗಿರಲಿದೆ ಸಂಭ್ರಮಾಚರಣೆ?

78ನೇ ಸ್ವಾತಂತ್ರ್ಯ ದಿನಾಚರಣೆ ಮೇಲೆ ಉಗ್ರರ ಕರಿನೆರಳು ಬಿದ್ದಿರುವುದರಿಂದ ದೆಹಲಿ ಅಥವಾ ಪಂಜಾಬ್​ನಲ್ಲಿ ದಾಳಿ ನಡೆಯೋ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ಈಗಾಗಲೇ ನೀಡಿತ್ತು. ಹೀಗಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಹದ್ದಿನ ಕಣ್ಣಿಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 am, Thu, 15 August 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!