AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಗ ಸನ್ಯಾಸಿಯಾಗಿ ಬಂದು ತಾಯಿ ಎದುರು ಭಿಕ್ಷೆ ಬೇಡಿದ

ಎರಡು ದಶಕಗಳ ಹಿಂದೆ ನಾಪತ್ತೆಯಾಗಿದ್ದ ಮಗ ವಾಪಸ್ಸಾಗಿದ್ದಾನೆ, ಆದರೆ ಆತನ ವೇಷ ನೋಡಿ ಪೋಷಕರ ಕಣ್ಣಂಚಲ್ಲಿ ಹನಿಗಳು ಮೂಡಿವೆ, ಆತ ಸನ್ಯಾಸಿಯಾಗಿದ್ದು ಊರಿಂದ ಊರಿಗೆ ತೆರಳಿ ಭಿಕ್ಷೆ ಬೇಡುತ್ತಿದ್ದಾರೆ. ತಾಯಿ ಒಂದೆಡೆ ಅಳುತ್ತಿದ್ದಾರೆ ಮಗ ಭಜನೆ ಹಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

22 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಗ ಸನ್ಯಾಸಿಯಾಗಿ ಬಂದು ತಾಯಿ ಎದುರು ಭಿಕ್ಷೆ ಬೇಡಿದ
ಸನ್ಯಾಸಿ
ನಯನಾ ರಾಜೀವ್
|

Updated on:Feb 08, 2024 | 8:34 AM

Share

22 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಗ ಈಗ ತಾಯಿ ಎದುರು ಸನ್ಯಾಸಿ(Monk)ಯಾಗಿ ಬಂದು ನಿಂತಿರುವ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ. ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಭೇಟಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸನ್ಯಾಸಿಯಂತೆ ವೇಷ ಧರಿಸಿ, ಸಾರಂಗಿ ಎಂಬ ಸಾಂಪ್ರದಾಯಿಕ ಸಂಗೀತ ವಾದ್ಯವನ್ನು ನುಡಿಸುತ್ತಾ, ಹಾಡುತ್ತಾ ತನ್ನ ತಾಯಿಯನ್ನು ಬೇಡಿಕೊಳ್ಳುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋವೊಂದರಲ್ಲಿ ತಾಯಿಯೊಬ್ಬಳು ತನ್ನ ಬಹುದಿನಗಳಿಂದ ಬೇರ್ಪಟ್ಟ ಮಗ ಮರಳಿ ಬಂದು ಭಿಕ್ಷೆ ಬೇಡುತ್ತಾ ಹಾಡುತ್ತಿರುವುದನ್ನು ಕಂಡು ಮನನೊಂದು ಅಳುತ್ತಿರುವ ದೃಶ್ಯವಿದೆ. ರತಿಪಾಲ್ ಸಿಂಗ್ ಅವರ ಮಗ ಪಿಂಗು 2002 ರಲ್ಲಿ ತನ್ನ 11 ನೇ ವಯಸ್ಸಿನಲ್ಲಿ ಯಾವುದೋ ವಿಚಾರಕ್ಕೆ ತಂದೆಯೊಂದಿಗೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದ.

ಕೋಪದಿಂದಾಗಿ ಎರಡು ದಶಕಗಳಿಗೂ ಹೆಚ್ಚು ಕಾಲ ಕುಟುಂಬದಿಂದ ದೂರವಾಗಿ ಊರಿಂದ ಊರಿಗೆ ಅಲೆದಾಡುತ್ತಾ ಕಾಲ ಕಳೆಯುತ್ತಿದ್ದ. ಇದೀಗ ಆತ ಸನ್ಯಾಸಿಯಾಗಿ ಊರಿಗೆ ಮರಳಿದ್ದನ್ನು ಕಂಡು ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ದೇಹದ ಮೇಲಿನ ಗಾಯದಿಂದ ಅವರು ತನ್ನ ಮಗ ಎಂದು ಗುರುತಿಸಿದರು.

ಸನ್ಯಾಸಿ ಹಾಡು

ಪಿಂಗು ತನ್ನ ಭಿಕ್ಷೆ ಪಡೆದು ಊರುನಿಂದ ಹೊರಟಿದ್ದಾನೆ, ಮತ್ತೆ ಕುಟುಂಬದಿಂದ ದೂರವಾಗಿದ್ದಾನೆ.  ಆತ ಈಗ ಸನ್ಯಾಸಿ ಒಂದೊಮ್ಮೆ ಸನ್ಯಾಸತ್ವ ತೊರೆದು ಮತ್ತೆ ಮೊದಲಿನಂತಾಗಬೇಕು ಎಂದರೆ  11 ಲಕ್ಷ ರೂ. ಪಾವತಿಸಬೇಕು, ಆದರೆ ತನ್ನ ಬಳಿ 100 ರೂಪಾಯಿಯೂ ಇಲ್ಲ ಎಂದು ತಂದೆ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:34 am, Thu, 8 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು