AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ನೋಡಿ; ಜಿ20 ಶೃಂಗಸಭೆಗೆ ಸಿದ್ಧವಾಗಿದೆ ಅತ್ಯಾಧುನಿಕ ಮಾಧ್ಯಮ ಕೇಂದ್ರ

G20 Summit Media Centre; ಪ್ರಗತಿ ಮೈದಾನದ ಐಇಸಿಸಿ ಸಂಕೀರ್ಣದಲ್ಲಿ ನಿರ್ಮಿಸಲಾದ ‘ಭಾರತ ಮಂಟಪ’ದಲ್ಲಿರುವ ಅತ್ಯಾಧುನಿಕ ಮಾಧ್ಯಮ ಕೇಂದ್ರವು ವಿಶಾಲವಾದ ಸಭಾಂಗಣಗಳು, ಒಂಬತ್ತು ಕೆಲಸದ ಝೋನ್​ಗಳು, ಸ್ಟುಡಿಯೋಗಳು, ನಾಲ್ಕು ಮೀಡಿಯಾ ಬ್ರೀಫಿಂಗ್ ಹಾಲ್‌ಗಳು, ಆರು ಸಂದರ್ಶನ ಕೊಠಡಿಗಳು ಮತ್ತು ಸುಮಾರು 1,300 ವರ್ಕ್‌ಸ್ಟೇಷನ್‌ಗಳನ್ನು ಹೊಂದಿದೆ.

ವಿಡಿಯೋ ನೋಡಿ; ಜಿ20 ಶೃಂಗಸಭೆಗೆ ಸಿದ್ಧವಾಗಿದೆ ಅತ್ಯಾಧುನಿಕ ಮಾಧ್ಯಮ ಕೇಂದ್ರ
ಮಾಧ್ಯಮ ಕೇಂದ್ರ
ಗಣಪತಿ ಶರ್ಮಾ
|

Updated on: Sep 06, 2023 | 10:59 PM

Share

ನವದೆಹಲಿ, ಸೆಪ್ಟೆಂಬರ್ 6: ಜಿ20 ಶೃಂಗಸಭೆಗೆ (G20 Summit) ನವದೆಹಲಿಯಲ್ಲಿ ಭರದಿಂದ ಸಿದ್ಧತೆ ಸಾಗಿದೆ. ಪ್ರಗತಿ ಮೈದಾನದ ಐಇಸಿಸಿ ಸಂಕೀರ್ಣದಲ್ಲಿ ನಿರ್ಮಿಸಲಾದ ‘ಭಾರತ ಮಂಟಪ (Bharat Mandapam)’ದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ 25 ಕ್ಕೂ ಜಾಗತಿಕ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ. ಭರದಿಂದ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಐಟಿಪಿಒ ಕಾಂಪ್ಲೆಕ್ಸ್‌ನಲ್ಲಿರುವ ಭವ್ಯವಾದ ಅಂತರರಾಷ್ಟ್ರೀಯ ಮಾಧ್ಯಮ ಕೇಂದ್ರದ ವಿಡಿಯೋ ತುಣುಕನ್ನು ಹಂಚಿಕೊಂಡಿದೆ. ಇದು ವಿಶ್ವದಾದ್ಯಂತದ ಸಾವಿರಾರು ಪತ್ರಕರ್ತರು ಮತ್ತು ಮಾಧ್ಯಮ ವ್ಯಕ್ತಿಗಳಿಗೆ ಆತಿಥ್ಯ ವಹಿಸಲು ಸಿದ್ಧವಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಮಾಧ್ಯಮ ಕೇಂದ್ರದ ವಿಡಿಯೋ ಹಂಚಿಕೊಂಡಿದ್ದಾರೆ. ಜತೆಗೆ, ಮುಂಬರುವ ಜಿ20 ಶೃಂಗಸಭೆಗೆ ಮಾಧ್ಯಮ ಪ್ರತಿನಿಧಿಗಳನ್ನು ಸ್ವಾಗತಿಸಲು ಸಿದ್ಧವಾಗಿರುವ ಅಂತಾರಾಷ್ಟ್ರೀಯ ಮಾಧ್ಯಮ ಕೇಂದ್ರದ ಒಂದು ನೋಟ ಇಲ್ಲಿದೆ. ಜಾಗತಿಕ ಮಾಧ್ಯಮ ಪ್ರತಿನಿಧಿಗಳಿಗೆ ಸ್ವಾಗತ ಎಂದು ಅವರು ಉಲ್ಲೇಖಿಸಿದ್ದಾರೆ.

ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿರುವ ಅಂತರರಾಷ್ಟ್ರೀಯ ಮಾಧ್ಯಮ ಕೇಂದ್ರಕ್ಕೆ ಕಾರ್ಮಿಕರು ಅಂತಿಮ ಸ್ಪರ್ಶ ನೀಡುತ್ತಿರುವ ದೃಶ್ಯ ವೀಡಿಯೋದಲ್ಲಿದೆ.

ಅತ್ಯಾಧುನಿಕ ಕೇಂದ್ರವು ವಿಶಾಲವಾದ ಸಭಾಂಗಣಗಳು, ಒಂಬತ್ತು ಕೆಲಸದ ಝೋನ್​ಗಳು, ಸ್ಟುಡಿಯೋಗಳು, ನಾಲ್ಕು ಮೀಡಿಯಾ ಬ್ರೀಫಿಂಗ್ ಹಾಲ್‌ಗಳು, ಆರು ಸಂದರ್ಶನ ಕೊಠಡಿಗಳು, ಸುಮಾರು 1,300 ವರ್ಕ್‌ಸ್ಟೇಷನ್‌ಗಳು ಮತ್ತು ಜಿ20 ಶೃಂಗಸಭೆಯನ್ನು ಕವರ್ ಮಾಡುವ ಪತ್ರಕರ್ತರಿಗಾಗಿ ತೆರೆದ ಕಾರ್ಯಸ್ಥಳಗಳನ್ನು ಹೊಂದಿದೆ. ರಾಯಭಾರ ಕಚೇರಿಯ ಪ್ರೆಸ್ ಅಧಿಕಾರಿಗಳು ಮತ್ತು ವಿದೇಶಿ ಅಧಿಕಾರಿಗಳಿಗೆ ಗೊತ್ತುಪಡಿಸಿದ ವಲಯಗಳಿವೆ. ಹೈಸ್ಪೀಡ್ ಇಂಟರ್ನೆಟ್, ಅಂತರಾಷ್ಟ್ರೀಯ ಪ್ರಸಾರ ಕೇಂದ್ರ, ವಿಶ್ರಾಂತಿ ಕೊಠಡಿಗಳು, ಮನರಂಜನಾ ವಲಯಗಳು, ಮಾಧ್ಯಮ ಬೂತ್‌ಗಳು, ಲೈವ್ ವರದಿ ಮಾಡುವ ಸ್ಥಾನಗಳು, ಸಹಾಯ ಕೇಂದ್ರ, ವೈದ್ಯಕೀಯ ಕೊಠಡಿ ಇವು ಕೇಂದ್ರದಲ್ಲಿ ಲಭ್ಯವಿರುವ ಇತರ ಸೌಲಭ್ಯಗಳಾಗಿವೆ.

ಇದನ್ನೂ ಓದಿ: ಜಿ20 ಶೃಂಗಸಭೆಗೆ ಮುನ್ನ ಜಕಾರ್ತಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ; ಪ್ರವಾಸದ ವೇಳಾಪಟ್ಟಿ ಹೀಗಿದೆ

ಸುಮಾರು 2,700 ಕೋಟಿ ವೆಚ್ಚದಲ್ಲಿ ಭಾರತ ಮಂಟಪವನ್ನು ನಿರ್ಮಿಸಲಾಗಿದೆ. ಇದು ಸುಮಾರು 123 ಎಕರೆ ಕ್ಯಾಂಪಸ್ ಪ್ರದೇಶವನ್ನು ಹೊಂದಿದೆ ಮತ್ತು ಇದು ದೇಶದ ಅತಿದೊಡ್ಡ ಎಂಐಸಿಇ (ಸಭೆಗಳು, ಪ್ರೋತ್ಸಾಹಗಳು, ಸಮ್ಮೇಳನಗಳು ಮತ್ತು ಪ್ರದರ್ಶನಗಳು) ತಾಣವಾಗಿ ಕಾರ್ಯನಿರ್ವಹಿಸುತ್ತದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ, ಯುಕೆ ಪ್ರಧಾನಿ ರಿಷಿ ಸುನಕ್, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಇತರರು 18 ನೇ ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?