AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಣಸಿ: ಪುಟ್ಟ ಬಾಲಕಿಯ ಕವಿತೆಗೆ ಮಾರುಹೋದ ಪ್ರಧಾನಿ ಮೋದಿ – ಇಲ್ಲಿದೆ ವಿಡಿಯೋ

Varanasi student with PM Modi: ಸಸ್ಯಗಳಲ್ಲಿ ನಡೆಯುವ ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯ ಬಗ್ಗೆ ವೈಷ್ಣವಿ ಪಟೇಲ್ ಎಂಬ ಬಾಲಕಿಯ ಕಾವ್ಯಾತ್ಮಕ ವಿವರಣೆಯನ್ನು ತನ್ಮಯರಾಗಿ ಆಲಿಸಿದ ಮೋದಿ, ಆ ಕ್ಷಣದ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ವಾರಾಣಸಿ: ಪುಟ್ಟ ಬಾಲಕಿಯ ಕವಿತೆಗೆ ಮಾರುಹೋದ ಪ್ರಧಾನಿ ಮೋದಿ - ಇಲ್ಲಿದೆ ವಿಡಿಯೋ
ಪ್ರಧಾನಿ ಮೋದಿ ಎದುರು ಕವಿತೆಯೊಂದನ್ನು ವಾಚಿಸಿ ಗಮನ ಸೆಳೆದ ವಿದ್ಯಾರ್ಥಿನಿ
ಗಣಪತಿ ಶರ್ಮಾ
|

Updated on: Dec 18, 2023 | 9:59 AM

Share

ನವದೆಹಲಿ, ಡಿಸೆಂಬರ್ 18: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉತ್ತರ ಪ್ರದೇಶದ ವಾರಣಾಸಿಗೆ (Varanasi) ಭೇಟಿ ನೀಡಿದ್ದ ಸಂದರ್ಭದಲ್ಲಿ ಶಾಲಾ ಬಾಲಕಿಯೊಬ್ಬಳು ವೈಜ್ಞಾನಿಕ ವಿಚಾರಗಳನ್ನು ಕವಿತೆಯ ಮೂಲಕ ಪ್ರದರ್ಶಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ಆ ವಿದ್ಯಾರ್ಥನಿಯು ಪ್ರಧಾನಿಯವರನ್ನು ‘ಮಾಸ್ ಲೀಡರ್’ ಎಂದು ಹೊಗಳುವ ಕವಿತೆಯೊಂದನ್ನು ವಾಚಿಸಿ ಗಮನ ಸೆಳೆದಳು.

ಸಸ್ಯಗಳಲ್ಲಿ ನಡೆಯುವ ದ್ಯುತಿಸಂಶ್ಲೇಷಣೆಯ ಪ್ರಕ್ರಿಯೆಯ ಬಗ್ಗೆ ವೈಷ್ಣವಿ ಪಟೇಲ್ ಎಂಬ ಬಾಲಕಿಯ ಕಾವ್ಯಾತ್ಮಕ ವಿವರಣೆಯನ್ನು ತನ್ಮಯರಾಗಿ ಆಲಿಸಿದ ಮೋದಿ, ಆ ಕ್ಷಣದ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ವಾರಾಣಸಿಯ ನನ್ನ ಸ್ನೇಹಿತೆ ವಿಜ್ಞಾನದ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದಾಳೆ ಮತ್ತು ಉತ್ತಮ ಕವಯಿತ್ರಿಯೂ ಹೌದು ಎಂದು ವಿಡಿಯೋ ಜತಗೆ ಮೋದಿ ಉಲ್ಲೇಖಿಸಿದ್ದಾರೆ.

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹಲವು ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ‘ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ’ ಕಾರ್ಯಕ್ರಮದಲ್ಲಿ ಭಾಗವಹಿಸಲು ವಾರಾಣಸಿಗೆ ತೆರಳಿದ್ದ ಮೋದಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಜತೆಗೆ, ವಿದ್ಯಾರ್ಥಿಗಳನ್ನೂ ಭೇಟಿ ಮಾಡಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭಾಷಣ ಅನುವಾದ ಮಾಡಿದ ಎಐ ಆಧಾರಿತ ‘ಭಾಷಿಣಿ’ ಬಗ್ಗೆ ಇಲ್ಲಿದೆ ಮಾಹಿತಿ

ಈ ವೇಳೆ ಅಲ್ಲಿನ ಸ್ಟಾಲ್‌ನಲ್ಲಿದ್ದ ಪುಟ್ಟ ಹುಡುಗಿಯೊಬ್ಬಳ ಕವನ ಪ್ರಧಾನಿ ಮೋದಿಯವರನ್ನು ಆಕರ್ಷಿಸಿತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಇನ್‌ಸ್ಟಾಗ್ರಾಮ್‌ನಲ್ಲಿ ಹುಡುಗಿಯ ವೀಡಿಯೊವನ್ನು ಹಂಚಿಕೊಂಡು ಆಕೆಯನ್ನು ಮಹಾನ್ ಕವಿ ಎಂದು ಬಣ್ಣಿಸಿರುವುದೇ ಇದಕ್ಕೆ ಸಾಕ್ಷಿ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ