Ayodhya Ram Mandir: ಶ್ರೀ ರಾಮನಿಗೆ ಜಲಾಭಿಷೇಕ: ಅಯೋಧ್ಯೆಗೆ ಆಗಮಿಸಿದ 155 ರಾಷ್ಟ್ರಗಳ ನದಿಗಳ ನೀರು

ಉಜ್ಬೇಕಿಸ್ತಾನ್, ಪಾಕಿಸ್ತಾನ, ಚೀನಾ ಸೇರಿದಂತೆ ವಿವಿಧ ದೇಶಗಳ 155 ನದಿಗಳ ನೀರು ಗುರುವಾರ (ಏಪ್ರಿಲ್ 20) ಬೆಳಗ್ಗೆ ಅಯೋಧ್ಯೆಗೆ ತಲುಪಿದೆ.

Ayodhya Ram Mandir: ಶ್ರೀ ರಾಮನಿಗೆ ಜಲಾಭಿಷೇಕ: ಅಯೋಧ್ಯೆಗೆ ಆಗಮಿಸಿದ 155 ರಾಷ್ಟ್ರಗಳ ನದಿಗಳ ನೀರು
ಸಾಂದರ್ಭಿಕ ಚಿತ್ರ
Follow us
| Updated By: ನಯನಾ ಎಸ್​ಪಿ

Updated on:Apr 22, 2023 | 10:37 AM

ಅಯೋಧ್ಯೆ: ಉಜ್ಬೇಕಿಸ್ತಾನ್, ಪಾಕಿಸ್ತಾನ, ಚೀನಾ ಸೇರಿದಂತೆ ವಿವಿಧ ದೇಶಗಳ 155 ನದಿಗಳ ನೀರು (River water) ಗುರುವಾರ (April 20) ಬೆಳಗ್ಗೆ ಅಯೋಧ್ಯೆಗೆ ತಲುಪಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath) ಅವರು ಏಪ್ರಿಲ್ 23 ರಂದು ಈ ನದಿಗಳ ನೀರಿನಿಂದ ಅಯೋಧ್ಯೆಯ (Ayodhya) ಶ್ರೀ ರಾಮನಿಗೆ ‘ಜಲಾಭಿಷೇಕ’ ಮಾಡಲಿದ್ದಾರೆ. ದೆಹಲಿಯ ಬಿಜೆಪಿ ನಾಯಕ ಮತ್ತು ಮಾಜಿ ಶಾಸಕ, ನೀರು ಸಂಗ್ರಹದ ಹಿಂದಿರುವ ವ್ಯಕ್ತಿ ವಿಜಯ್ ಜಾಲಿ, ಅಂಟಾರ್ಕ್ಟಿಕಾದಿಂದ ಕೂಡ ನೀರನ್ನು ತರಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

ತಾಂಜಾನಿಯಾ, ನೈಜೀರಿಯಾ, ಅಮೆರಿಕ, ಫ್ರಾನ್ಸ್, ಜರ್ಮನಿ, ಬ್ರಿಟನ್, ನೇಪಾಳ, ಭೂತಾನ್, ಮಾಲ್ಡೀವ್ಸ್ ಮತ್ತು ಬಾಂಗ್ಲಾದೇಶದಂತಹ ದೇಶಗಾಲ ನದಿಯ ನೀರಿನಿಂದ ನಾಳೆ (April 23) ಅಯೋಧ್ಯೆಯಲ್ಲಿ ರಾಮನಿಗೆ ಜಲಾಭಿಷೇಕ ನಡೆಯಲಿದೆ. ಬಹುತೇಕ ದುರ್ಗಮವಾಗಿರುವ ಅಂಟಾರ್ಟಿಕಾದಿಂದ ನೀರು ತರಲಾಗಿದೆ ಎಂದು ಜಾಲಿ ಹೇಳಿದರು. ಅಯೋಧ್ಯೆಯ ಮಣಿರಾಮ್ ದಾಸ್‌ ಚಾವ್ನಿ ಆಡಿಟೋರಿಯಂನಲ್ಲಿ ಏಪ್ರಿಲ್ 23 ರಂದು ಆಯೋಜಿಸಲಾಗಿರುವ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಿಎಂ ಯೋಗಿ ತಂಡದಿಂದ ಜಲ ಕಲಶವನ್ನು ಪಡೆದ ನಂತರ ‘ಜಲ ಕಲಶ’ಕ್ಕೆ ಪೂಜೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: ಕಾಶಿ ವಿಶ್ವನಾಥ ಮಾದರಿಯಲ್ಲಿ ಕಾಮಾಖ್ಯ ದೇವಾಲಯ ಕಾರಿಡಾರ್‌ ಪ್ರಧಾನಿ ಮೋದಿ ಶ್ಲಾಘನೆ

ಪ್ರಪಂಚದಾದ್ಯಂತದ ದೇಶಗಳಿಂದ ತರಲಾದ ನೀರಿನಲ್ಲಿ ಆ ದೇಶಗಳ ಧ್ವಜಗಳು, ಅವುಗಳ ಹೆಸರುಗಳು ಮತ್ತು ನದಿಗಳ ಹೆಸರುಗಳನ್ನು ಹೊಂದಿರುವ ಸ್ಟಿಕ್ಕರ್‌ಗಳನ್ನು ಲಗತ್ತಿಸಲಾಗಿದೆ. ಹಲವು ದೇಶಗಳ ರಾಯಭಾರಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಾಕಿಸ್ತಾನದ ನೀರನ್ನು ಮೊದಲು ಪಾಕಿಸ್ತಾನದ ಹಿಂದೂಗಳು ದುಬೈಗೆ ಕಳುಹಿಸಿದರು ಮತ್ತು ನಂತರ ಅದನ್ನು ದುಬೈನಿಂದ ದೆಹಲಿಗೆ ತರಲಾಯಿತು, ಅಲ್ಲಿಂದ ಜಾಲಿ ಅವರು ಅದನ್ನು ಅಯೋಧ್ಯೆಗೆ ತರಿಸಿದ್ದಾರೆ. ಪಾಕಿಸ್ತಾನವಲ್ಲದೆ, ಸುರಿನಾಮ್, ಉಕ್ರೇನ್, ರಷ್ಯಾ, ಕಜಕಿಸ್ತಾನ್, ಕೆನಡಾ ಮತ್ತು ಟಿಬೆಟ್ ಸೇರಿದಂತೆ ಹಲವು ದೇಶಗಳ ನದಿಗಳಿಂದಲೂ ನೀರು ಬಂದಿದೆ.

Published On - 10:26 am, Sat, 22 April 23

ತಾಜಾ ಸುದ್ದಿ
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ