ಉತ್ತರಾಖಂಡದಲ್ಲಿ ಮತ್ತೆ ಹಿಮ ಸುನಾಮಿ ಭೀತಿ: ರಕ್ಷಣಾ ಕಾರ್ಯ ಅರ್ಧಕ್ಕೆ ಸ್ಥಗಿತ

ಇಲ್ಲಿ ಕಾಣೆಯಾದ ನೂರಾರು ಜನರಿಗೆ ಹುಡುಕಾಟ ಮುಂದುವರಿದಿದೆ. ಆದರೆ, ನಿಧಾನವಾಗಿ ನದಿ ನೀರು ಹೆಚ್ಚುತ್ತಿದ್ದು, ಅನಿವಾರ್ಯವಾಗಿ ರಕ್ಷಣಾ ಕಾರ್ಯವನ್ನು ನಿಲ್ಲಿಸಲಾಗಿದೆ.

ಉತ್ತರಾಖಂಡದಲ್ಲಿ ಮತ್ತೆ ಹಿಮ ಸುನಾಮಿ ಭೀತಿ: ರಕ್ಷಣಾ ಕಾರ್ಯ ಅರ್ಧಕ್ಕೆ ಸ್ಥಗಿತ
ಸುರಂಗದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿರುವುದು

Updated on: Feb 11, 2021 | 3:51 PM

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾನುವಾರ ಸಂಭವಿಸಿದ್ದ ಭೀಕರ ಘಟನೆ ಮತ್ತೆ ಪುನರಾವರ್ತನೆ ಆಗುವ ಭೀತಿ ಎದುರಾಗಿದೆ. ಭಾರೀ ಪ್ರವಾಹದ ನಂತರ ತಣ್ಣಗಾಗಿದ್ದ ಅನೇಕ ನದಿಗಳಲ್ಲಿ ನೀರಿನ ಮಟ್ಟ ನಿಧಾನವಾಗಿ ಹೆಚ್ಚುತ್ತಿದ್ದು, ರಕ್ಷಣಾ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ನದಿ ತಟದ ಗ್ರಾಮಗಳಲ್ಲಿ ಮತ್ತೆ ಮುಳುಗುವ ಭೀತಿ ಹೆಚ್ಚಾಗಿದೆ.

ಉತ್ತರಾಖಂಡದ ತಪೋವನದಲ್ಲಿ ಭಾನುವಾರ ಹಿಮಸ್ಫೋಟ ಸಂಭವಿಸಿತ್ತು. ಒಂದೇ ಸಮನೆ ಹಿಮ ಕರಗಿದ್ದರಿಂದ ಭಾರೀ ನೀರು ನದಿಗಳಿಗೆ ನುಗ್ಗಿತ್ತು. ಋಷಿಗಂಗಾ ಜಲ ವಿದ್ಯುತ್​ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಹಾಗೂ ನದಿ ಪಕ್ಕದಲ್ಲಿ ಕೆಲಸ ಮಾಡುತ್ತಿದ್ದವರು ಕೊಚ್ಚಿ ಹೋಗಿದ್ದರು. ಇಲ್ಲಿ ಕಾಣೆಯಾದ ನೂರಾರು ಜನರಿಗೆ ಹುಡುಕಾಟ ಮುಂದುವರಿದಿದೆ. ಆದರೆ, ನಿಧಾನವಾಗಿ ನದಿ ನೀರು ಹೆಚ್ಚುತ್ತಿದ್ದು, ಅನಿವಾರ್ಯವಾಗಿ ರಕ್ಷಣಾ ಕಾರ್ಯವನ್ನು ನಿಲ್ಲಿಸಲಾಗಿದೆ.

ವಿದ್ಯುತ್​ ಉತ್ಪಾದನ ಘಟಕದ ಸುರಂಗದ ಬಳಿ 30ಕ್ಕೂ ಹೆಚ್ಚು ಜನರು ಸಿಲುಕಿರುವ ಸಾಧ್ಯತೆ ಇದೆ. ಇವರನ್ನು ರಕ್ಷಣೆ ಮಾಡಲು ಭಾನುವಾರದಿಂದಲೂ ಹರಸಾಹಸ ಪಡಲಾಗುತ್ತಿದೆ. ಈಗಾಗಲೇ ಅನೇಕರ ಶವ ಸಿಕ್ಕಿದ್ದು, ಉಳಿದವರನ್ನು ಹೊರ ತೆಗೆಯುವ ಕೆಲಸ ಮುಂದುವರಿದಿದೆ. ಈ ಸಂದರ್ಭದಲ್ಲೇ ನದಿ ನೀರು ಹೆಚ್ಚುತ್ತಿದ್ದು ಭಾರೀ ಆತಂಕ ಸೃಷ್ಟಿಸಿದೆ.

ಸುರಂಗದ ಸುತ್ತಲೂ ರಾಶಿ ರಾಶಿ ಮಣ್ಣು ಬಂದು ಬಿದ್ದಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆ ಉಂಟಾಗುತ್ತಿದೆ. ಮಣ್ಣನ್ನು ಹೊರ ತೆಗೆದಂತೆ ಶವಗಳು ಸಿಗುತ್ತಿವೆ. ಈ ಮಣ್ಣಿನ ಅಡಿಯಲ್ಲಿ ಸಿಲುಕಿದವರು ಬದಿಕಿರುವ ಸಾಧ್ಯತೆ ಕಡಿಮೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: ಉತ್ತರಾಖಂಡ್ ಹಿಮ ಸ್ಫೋಟ: ಹೆಚ್ಚುತ್ತಲೇ ಇದೆ ಮೃತರ ಸಂಖ್ಯೆ, ಇನ್ನೂ 60 ಮೀಟರ್ ಸುರಂಗ ಶೋಧ ನಡೆಸಬೇಕಿದೆ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us