AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿಗೆ ಜೀವಕಳೆ; ಮುಕ್ಕೊಂಬು ಅಣೆಕಟ್ಟಿನ ಡ್ರೋನ್ ವಿಡಿಯೋ ವೈರಲ್

Mukkombu Dam Video: ಮೆಟ್ಟೂರಿನಿಂದ ಕಾವೇರಿ ನದಿಗೆ ಬಿಟ್ಟ ನೀರು ಮುಕ್ಕೊಂಬು ಅಣೆಕಟ್ಟನ್ನು ತಲುಪಿದೆ. ಕರ್ನಾಟಕ ಮತ್ತು ಕೇರಳದ ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದಾಗಿ ಮೆಟ್ಟೂರು ಅಣೆಕಟ್ಟಿನ ನೀರಿನ ಮಟ್ಟವು ಭಾರೀ ಏರಿಕೆಯಾಗಿದ್ದು, ಅದರ ಪೂರ್ಣ ಸಾಮರ್ಥ್ಯವನ್ನು ತಲುಪಿದೆ. ಇದರಿಂದಾಗಿ ಅಣೆಕಟ್ಟೆಯ ಹೆಚ್ಚುವರಿ ನೀರನ್ನು 16 ಸ್ಲೂಸ್‌ಗಳ ಮೂಲಕ ಸಂಪೂರ್ಣವಾಗಿ ಹೊರಬಿಡಲಾಗುತ್ತದೆ.

ಕಾವೇರಿ ನದಿಗೆ ಜೀವಕಳೆ; ಮುಕ್ಕೊಂಬು ಅಣೆಕಟ್ಟಿನ ಡ್ರೋನ್ ವಿಡಿಯೋ ವೈರಲ್
ಮುಕ್ಕೊಂಬು ಜಲಾಶಯ
ಸುಷ್ಮಾ ಚಕ್ರೆ
|

Updated on: Aug 02, 2024 | 10:10 PM

Share

ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕರ್ನಾಟಕ ರಾಜ್ಯದ ಕೃಷ್ಣರಾಜ ಸಾಗರ ಮತ್ತು ಕಬಿನಿ ಅಣೆಕಟ್ಟುಗಳು ತುಂಬಿ ಹರಿಯುತ್ತಿವೆ. ಈ ಪರಿಸ್ಥಿತಿಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೆಟ್ಟೂರು ಅಣೆಕಟ್ಟೆಯಿಂದ 1 ಲಕ್ಷದ 20 ಸಾವಿರ ಘನ ಅಡಿ ನೀರು ಬಿಡಲಾಗುತ್ತಿದೆ. ಅದೇ ರೀತಿ ತಿರುಚ್ಚಿ ಜಿಲ್ಲೆಯ ಮುಕ್ಕೊಂಬು ಜಲಾಶಯಕ್ಕೆ 1 ಲಕ್ಷ 20 ಸಾವಿರ ಘನ ಅಡಿ ನೀರು ಬರುತ್ತಿದೆ. ಮುಕ್ಕೊಂಬು ಡ್ಯಾಂ ಗೇಟುಗಳನ್ನು ತೆರೆಯಲಾಗಿದ್ದು, ಈ ಅಣೆಕಟ್ಟಿನ ಡ್ರೋನ್ ದೃಶ್ಯಾವಳಿ ವೈರಲ್ ಆಗಿದೆ.

ಜುಲೈ 28ರಂದು ಕಾವೇರಿ ಡೆಲ್ಟಾ ನೀರಾವರಿಗಾಗಿ ಮೆಟ್ಟೂರು ಅಣೆಕಟ್ಟಿನಿಂದ 12,000 ಕ್ಯೂಬಿಕ್ ಅಡಿ ನೀರು ಬಿಡಲಾಗಿತ್ತು. ಕಾವೇರಿ ನದಿಗೆ 43 ಸಾವಿರ ಘನ ಅಡಿ ನೀರು ಹಾಗೂ ಕೊಲ್ಲಿಡಂ ನದಿಗೆ 1 ಲಕ್ಷ 25 ಸಾವಿರ ಘನ ಅಡಿ ನೀರು ಹರಿದು ಬರುತ್ತಿದೆ.

ಇದನ್ನೂ ಓದಿ: Viral Video: ನದಿಯಂತಾದ ಜೈಪುರ ವಿಮಾನ ನಿಲ್ದಾಣ; ಲಗೇಜ್ ಟ್ರಾಲಿ ಮೇಲೆ ನಿಂತ ಪೈಲಟ್ ವಿಡಿಯೋ ವೈರಲ್

ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಹಂತದಲ್ಲಿ ಮುಕ್ಕೊಂಬು ಅಣೆಕಟ್ಟಿನ ಮೂಲಕ ಹರಿಯುವ ಕಾವೇರಿ ನೀರು ಎರಡೂ ದಂಡೆಗಳನ್ನು ಸ್ಪರ್ಶಿಸುವ ಡ್ರೋನ್ ದೃಶ್ಯವು ಅದ್ಭುತವಾಗಿದೆ.

ಮೆಟ್ಟೂರಿನಿಂದ ಮುಕ್ಕೊಂಬು ಅಣೆಕಟ್ಟಿನ ನೀರಿನ ಮಟ್ಟ 1,68,000 ಕ್ಯೂಸೆಕ್ ಇದ್ದು, ಅದರಲ್ಲಿ 43,874 ಕ್ಯೂಸೆಕ್ ಕಾವೇರಿಗೆ ಮತ್ತು 1,25,000 ಕ್ಯುಸೆಕ್ ಅನ್ನು ಕೊಲ್ಲಿಡಂಗೆ ಬಿಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ