ಕಾವೇರಿ ನದಿಗೆ ಜೀವಕಳೆ; ಮುಕ್ಕೊಂಬು ಅಣೆಕಟ್ಟಿನ ಡ್ರೋನ್ ವಿಡಿಯೋ ವೈರಲ್

Mukkombu Dam Video: ಮೆಟ್ಟೂರಿನಿಂದ ಕಾವೇರಿ ನದಿಗೆ ಬಿಟ್ಟ ನೀರು ಮುಕ್ಕೊಂಬು ಅಣೆಕಟ್ಟನ್ನು ತಲುಪಿದೆ. ಕರ್ನಾಟಕ ಮತ್ತು ಕೇರಳದ ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದಾಗಿ ಮೆಟ್ಟೂರು ಅಣೆಕಟ್ಟಿನ ನೀರಿನ ಮಟ್ಟವು ಭಾರೀ ಏರಿಕೆಯಾಗಿದ್ದು, ಅದರ ಪೂರ್ಣ ಸಾಮರ್ಥ್ಯವನ್ನು ತಲುಪಿದೆ. ಇದರಿಂದಾಗಿ ಅಣೆಕಟ್ಟೆಯ ಹೆಚ್ಚುವರಿ ನೀರನ್ನು 16 ಸ್ಲೂಸ್‌ಗಳ ಮೂಲಕ ಸಂಪೂರ್ಣವಾಗಿ ಹೊರಬಿಡಲಾಗುತ್ತದೆ.

ಕಾವೇರಿ ನದಿಗೆ ಜೀವಕಳೆ; ಮುಕ್ಕೊಂಬು ಅಣೆಕಟ್ಟಿನ ಡ್ರೋನ್ ವಿಡಿಯೋ ವೈರಲ್
ಮುಕ್ಕೊಂಬು ಜಲಾಶಯ
Follow us
|

Updated on: Aug 02, 2024 | 10:10 PM

ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕರ್ನಾಟಕ ರಾಜ್ಯದ ಕೃಷ್ಣರಾಜ ಸಾಗರ ಮತ್ತು ಕಬಿನಿ ಅಣೆಕಟ್ಟುಗಳು ತುಂಬಿ ಹರಿಯುತ್ತಿವೆ. ಈ ಪರಿಸ್ಥಿತಿಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮೆಟ್ಟೂರು ಅಣೆಕಟ್ಟೆಯಿಂದ 1 ಲಕ್ಷದ 20 ಸಾವಿರ ಘನ ಅಡಿ ನೀರು ಬಿಡಲಾಗುತ್ತಿದೆ. ಅದೇ ರೀತಿ ತಿರುಚ್ಚಿ ಜಿಲ್ಲೆಯ ಮುಕ್ಕೊಂಬು ಜಲಾಶಯಕ್ಕೆ 1 ಲಕ್ಷ 20 ಸಾವಿರ ಘನ ಅಡಿ ನೀರು ಬರುತ್ತಿದೆ. ಮುಕ್ಕೊಂಬು ಡ್ಯಾಂ ಗೇಟುಗಳನ್ನು ತೆರೆಯಲಾಗಿದ್ದು, ಈ ಅಣೆಕಟ್ಟಿನ ಡ್ರೋನ್ ದೃಶ್ಯಾವಳಿ ವೈರಲ್ ಆಗಿದೆ.

ಜುಲೈ 28ರಂದು ಕಾವೇರಿ ಡೆಲ್ಟಾ ನೀರಾವರಿಗಾಗಿ ಮೆಟ್ಟೂರು ಅಣೆಕಟ್ಟಿನಿಂದ 12,000 ಕ್ಯೂಬಿಕ್ ಅಡಿ ನೀರು ಬಿಡಲಾಗಿತ್ತು. ಕಾವೇರಿ ನದಿಗೆ 43 ಸಾವಿರ ಘನ ಅಡಿ ನೀರು ಹಾಗೂ ಕೊಲ್ಲಿಡಂ ನದಿಗೆ 1 ಲಕ್ಷ 25 ಸಾವಿರ ಘನ ಅಡಿ ನೀರು ಹರಿದು ಬರುತ್ತಿದೆ.

ಇದನ್ನೂ ಓದಿ: Viral Video: ನದಿಯಂತಾದ ಜೈಪುರ ವಿಮಾನ ನಿಲ್ದಾಣ; ಲಗೇಜ್ ಟ್ರಾಲಿ ಮೇಲೆ ನಿಂತ ಪೈಲಟ್ ವಿಡಿಯೋ ವೈರಲ್

ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಈ ಹಂತದಲ್ಲಿ ಮುಕ್ಕೊಂಬು ಅಣೆಕಟ್ಟಿನ ಮೂಲಕ ಹರಿಯುವ ಕಾವೇರಿ ನೀರು ಎರಡೂ ದಂಡೆಗಳನ್ನು ಸ್ಪರ್ಶಿಸುವ ಡ್ರೋನ್ ದೃಶ್ಯವು ಅದ್ಭುತವಾಗಿದೆ.

ಮೆಟ್ಟೂರಿನಿಂದ ಮುಕ್ಕೊಂಬು ಅಣೆಕಟ್ಟಿನ ನೀರಿನ ಮಟ್ಟ 1,68,000 ಕ್ಯೂಸೆಕ್ ಇದ್ದು, ಅದರಲ್ಲಿ 43,874 ಕ್ಯೂಸೆಕ್ ಕಾವೇರಿಗೆ ಮತ್ತು 1,25,000 ಕ್ಯುಸೆಕ್ ಅನ್ನು ಕೊಲ್ಲಿಡಂಗೆ ಬಿಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ