AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್​ಮಹಲ್ ಮುಂದೆ ಕೇಸರಿ ಧ್ವಜ ಹಾರಿಸಿದ ಹಿಂದೂ ಜಾಗರಣ್ ಮಂಚ್ ಸದಸ್ಯರ ಬಂಧನ

ತಾಜ್​ಮಹಲ್ ಮುಂದೆ ಹಿಂದೂ ಜಾಗರಣ್ ಮಂಚ್ ಸದಸ್ಯರು ಕೇಸರಿ ಧ್ವಜ ಹಾರಿಸಿದ ವಿಡಿಯೊ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ನಾಲ್ವರನ್ನು ಸಿಐಎಸ್ಎಫ್ ಸಿಬ್ಬಂದಿ ಬಂಧಿಸಿದ್ದಾರೆ.

ತಾಜ್​ಮಹಲ್ ಮುಂದೆ ಕೇಸರಿ ಧ್ವಜ ಹಾರಿಸಿದ ಹಿಂದೂ ಜಾಗರಣ್ ಮಂಚ್ ಸದಸ್ಯರ ಬಂಧನ
ತಾಜ್​ಮಹಲ್ ಆವರಣದಲ್ಲಿ ಕೇಸರಿ ಧ್ವಜ ಬೀಸುತ್ತಿರುವುದು (ವಿಡಿಯೊ ದೃಶ್ಯ)
ರಶ್ಮಿ ಕಲ್ಲಕಟ್ಟ
| Edited By: |

Updated on: Jan 05, 2021 | 5:54 PM

Share

ಆಗ್ರಾ : ತಾಜ್​ಮಹಲ್ ಮುಂದೆ ಹಿಂದೂ ಜಾಗರಣ್ ಮಂಚ್ ಸದಸ್ಯರು ಕೇಸರಿ ಧ್ವಜ ಹಾರಿಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ನಾಲ್ವರನ್ನು ಸಿಐಎಸ್ಎಫ್ ಸಿಬ್ಬಂದಿ ಬಂಧಿಸಿದ್ದಾರೆ.

ಧ್ವಜ ಹಾರಿಸಿದವರನ್ನು ಗೌರವ್ ಠಾಕೂರ್, ಸೋನು ಬಘೇಲ್, ವಿಶೇಷ್ ಕುಮಾರ್ ಮತ್ತು ರಿಷಿ ಲವಾನಿಯಾ ಎಂದು ಗುರುತಿಸಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ ಜ.4ರಂದು ಇವರನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಗೌರವ್ ಠಾಕೂರ್ ಹಿಂದೂ ಜಾಗರಣ್ ಮಂಚ್ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿದ್ದಾರೆ.

ತಾಜ್​ಮಹಲ್ ಆವರಣದಲ್ಲಿ ಮೂವರು ವ್ಯಕ್ತಿಗಳು ಕೇಸರಿ ಧ್ವಜ ಬೀಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ನಾಲ್ಕನೇ ವ್ಯಕ್ತಿ ಇದರ ವಿಡಿಯೊ ಚಿತ್ರೀಕರಣ ಮಾಡಿದ್ದನು.

ನಮ್ಮ ಭದ್ರತಾ ಸಿಬ್ಬಂದಿಗಳು ಪ್ರಯಾಣಿಕರ ತಪಾಸಣೆಗಾಗಿ ಮೆಟಲ್ ಡಿಟೆಕ್ಟರ್ ಬಳಸುತ್ತಾರೆ. ಅದರಲ್ಲಿ ಬಟ್ಟೆ ಪತ್ತೆಯಾಗುವುದಿಲ್ಲ. ಸೆಲ್ಫಿ ಸ್ಟಿಕ್​ಗಳನ್ನು ಒಳಗೆ ತೆಗೆದುಕೊಂಡು ಹೋಗಬಹುದು. ಆ ವ್ಯಕ್ತಿಗಳು ಸೆಲ್ಫಿ ಸ್ಟಿಕ್​ಗೆ ಧ್ವಜ ಸಿಕ್ಕಿಸಿ ಅದನ್ನು ಬೀಸಿದ್ದಾರೆ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ತಾಜ್ ಮಹಲ್​ನ ಸಿಐಎಸ್ಎಫ್ ಕಮಾಂಡೆಂಟ್ ರಾಹುಲ್ ಯಾದವ್ ಹೇಳಿದ್ದಾರೆ.

ಈ ವ್ಯಕ್ತಿಗಳ ವಿರುದ್ಧ ತೇಜ್ ಗಂಜ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಎ (ಧರ್ಮದ ವಿಚಾರದಲ್ಲಿ ಎರಡು ಗುಂಪುಗಳ ನಡುವಿನ ದ್ವೇಷಕ್ಕೆ ಪ್ರಚೋದನೆ) ಮತ್ತು ಅಪರಾಧ ಕಾನೂನು ತಿದ್ದುಪಡಿ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ದೂರು ದಾಖಲಾಗಿದೆ.

ಆಗ್ರಾ ಮೆಟ್ರೊ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್