AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಜ್​ಮಹಲ್ ಮುಂದೆ ಕೇಸರಿ ಧ್ವಜ ಹಾರಿಸಿದ ಹಿಂದೂ ಜಾಗರಣ್ ಮಂಚ್ ಸದಸ್ಯರ ಬಂಧನ

ತಾಜ್​ಮಹಲ್ ಮುಂದೆ ಹಿಂದೂ ಜಾಗರಣ್ ಮಂಚ್ ಸದಸ್ಯರು ಕೇಸರಿ ಧ್ವಜ ಹಾರಿಸಿದ ವಿಡಿಯೊ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ನಾಲ್ವರನ್ನು ಸಿಐಎಸ್ಎಫ್ ಸಿಬ್ಬಂದಿ ಬಂಧಿಸಿದ್ದಾರೆ.

ತಾಜ್​ಮಹಲ್ ಮುಂದೆ ಕೇಸರಿ ಧ್ವಜ ಹಾರಿಸಿದ ಹಿಂದೂ ಜಾಗರಣ್ ಮಂಚ್ ಸದಸ್ಯರ ಬಂಧನ
ತಾಜ್​ಮಹಲ್ ಆವರಣದಲ್ಲಿ ಕೇಸರಿ ಧ್ವಜ ಬೀಸುತ್ತಿರುವುದು (ವಿಡಿಯೊ ದೃಶ್ಯ)
ರಶ್ಮಿ ಕಲ್ಲಕಟ್ಟ
| Edited By: |

Updated on: Jan 05, 2021 | 5:54 PM

Share

ಆಗ್ರಾ : ತಾಜ್​ಮಹಲ್ ಮುಂದೆ ಹಿಂದೂ ಜಾಗರಣ್ ಮಂಚ್ ಸದಸ್ಯರು ಕೇಸರಿ ಧ್ವಜ ಹಾರಿಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ನಾಲ್ವರನ್ನು ಸಿಐಎಸ್ಎಫ್ ಸಿಬ್ಬಂದಿ ಬಂಧಿಸಿದ್ದಾರೆ.

ಧ್ವಜ ಹಾರಿಸಿದವರನ್ನು ಗೌರವ್ ಠಾಕೂರ್, ಸೋನು ಬಘೇಲ್, ವಿಶೇಷ್ ಕುಮಾರ್ ಮತ್ತು ರಿಷಿ ಲವಾನಿಯಾ ಎಂದು ಗುರುತಿಸಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ ಜ.4ರಂದು ಇವರನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಗೌರವ್ ಠಾಕೂರ್ ಹಿಂದೂ ಜಾಗರಣ್ ಮಂಚ್ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿದ್ದಾರೆ.

ತಾಜ್​ಮಹಲ್ ಆವರಣದಲ್ಲಿ ಮೂವರು ವ್ಯಕ್ತಿಗಳು ಕೇಸರಿ ಧ್ವಜ ಬೀಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ನಾಲ್ಕನೇ ವ್ಯಕ್ತಿ ಇದರ ವಿಡಿಯೊ ಚಿತ್ರೀಕರಣ ಮಾಡಿದ್ದನು.

ನಮ್ಮ ಭದ್ರತಾ ಸಿಬ್ಬಂದಿಗಳು ಪ್ರಯಾಣಿಕರ ತಪಾಸಣೆಗಾಗಿ ಮೆಟಲ್ ಡಿಟೆಕ್ಟರ್ ಬಳಸುತ್ತಾರೆ. ಅದರಲ್ಲಿ ಬಟ್ಟೆ ಪತ್ತೆಯಾಗುವುದಿಲ್ಲ. ಸೆಲ್ಫಿ ಸ್ಟಿಕ್​ಗಳನ್ನು ಒಳಗೆ ತೆಗೆದುಕೊಂಡು ಹೋಗಬಹುದು. ಆ ವ್ಯಕ್ತಿಗಳು ಸೆಲ್ಫಿ ಸ್ಟಿಕ್​ಗೆ ಧ್ವಜ ಸಿಕ್ಕಿಸಿ ಅದನ್ನು ಬೀಸಿದ್ದಾರೆ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ತಾಜ್ ಮಹಲ್​ನ ಸಿಐಎಸ್ಎಫ್ ಕಮಾಂಡೆಂಟ್ ರಾಹುಲ್ ಯಾದವ್ ಹೇಳಿದ್ದಾರೆ.

ಈ ವ್ಯಕ್ತಿಗಳ ವಿರುದ್ಧ ತೇಜ್ ಗಂಜ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಎ (ಧರ್ಮದ ವಿಚಾರದಲ್ಲಿ ಎರಡು ಗುಂಪುಗಳ ನಡುವಿನ ದ್ವೇಷಕ್ಕೆ ಪ್ರಚೋದನೆ) ಮತ್ತು ಅಪರಾಧ ಕಾನೂನು ತಿದ್ದುಪಡಿ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ದೂರು ದಾಖಲಾಗಿದೆ.

ಆಗ್ರಾ ಮೆಟ್ರೊ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Follow Us
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!