Wayanad bypoll: ರಾಹುಲ್ ಗಾಂಧಿ ಅನರ್ಹಗೊಂಡ ನಂತರ ತೆರವಾಗಿರುವ ವಯನಾಡ್​​ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಯಾವಾಗ?; ಚುನಾವಣಾ ಆಯೋಗ ಹೇಳಿದ್ದೇನು?

ಕರ್ನಾಟಕ ವಿಧಾನಸಭೆಗೆ ಚುನಾವಣೆಯನ್ನು ಘೋಷಿಸುವ ಸಂದರ್ಭದಲ್ಲಿ ಮಾತನಾಡಿದ ಕುಮಾರ್ ಚುನಾವಣಾ ಆಯೋಗ ರಾಜಕೀಯದಲ್ಲಿಲ್ಲ ಎಂದು ಹೇಳಿದರು. ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 151 ರ ಅಡಿಯಲ್ಲಿ, ಆಯೋಗವು ವಯನಾಡ್ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಆರು ತಿಂಗಳ ಕಾಲಾವಕಾಶವಿದೆ

Wayanad bypoll: ರಾಹುಲ್ ಗಾಂಧಿ ಅನರ್ಹಗೊಂಡ ನಂತರ ತೆರವಾಗಿರುವ ವಯನಾಡ್​​ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಯಾವಾಗ?; ಚುನಾವಣಾ ಆಯೋಗ ಹೇಳಿದ್ದೇನು?
ರಾಹುಲ್ ಗಾಂಧಿ
Image Credit source: Twitter
ರಶ್ಮಿ ಕಲ್ಲಕಟ್ಟ

Updated on: Mar 29, 2023 | 2:20 PM

ರಾಹುಲ್ ಗಾಂಧಿ (Rahul Gandhi) ಲೋಕಸಭೆಯಿಂದ (Loksaha) ಅನರ್ಹಗೊಂಡು ಸಂಸದ ಸ್ಥಾನ ಕಳೆದುಕೊಂಡ ನಂತರ ವಯನಾಡ್ (Wayanad) ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಯಾವಾಗ ಎಂದು ಕೇಳಿದ ಪ್ರಶ್ನೆಗೆ ಚುನಾವಣೆ ಘೋಷಿಸಲು ಭಾರತೀಯ ಚುನಾವಣಾ ಆಯೋಗಕ್ಕೆ (ECI) ಯಾವುದೇ ಆತುರವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಬುಧವಾರ ಹೇಳಿದ್ದಾರೆ. 2019 ರ ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ ನಂತರ ರಾಹುಲ್ ಅವರನ್ನು ಲೋಕಸಭೆಯಿಂದ ಅನರ್ಹ ಮಾಡಲಾಗಿತ್ತು. ಆದಾಗ್ಯೂ ಈ ತೀರ್ಪು ವಿರುದ್ದ ಮೇಲ್ಮನವಿ ಸಲ್ಲಿಸಲು ರಾಹುಲ್​ಗೆ 30 ದಿನಗಳ ಸಮಯವಿದೆ.

ಮೋದಿ ಉಪನಾಮಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸಾಬೀತಾದ ನಂತರ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆಗೆ ವಿಧಿಸಲಾಗಿದೆ. ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದ್ದು ತೀರ್ಪಿನ ವಿರುದ್ಧ ಮೇಲ್ಮನವಿಯನ್ನು ಅನುಮತಿಸಲು ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಿದೆ.

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿದಾಗ ಚುನಾವಣಾ ಆಯೋಗವು ಕಾಂಗ್ರೆಸ್ ನಾಯಕ ಲೋಕಸಭೆಯ ಸದಸ್ಯರಾಗಿದ್ದ ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಬಹುದು ಎಂಬ ವದಂತಿ ಹಬ್ಬಿತ್ತು. ಆದಾಗ್ಯೂ, ಮೇಲ್ಮನವಿ ಸಲ್ಲಿಸಿ ಶಿಕ್ಷೆಯನ್ನು ಪ್ರಶ್ನಿಸಲು ರಾಹುಲ್ ಗಾಂಧಿಗೆ 30 ದಿನಗಳ ಗಡುವು ನೀಡಿರುವುದರಿಂದ ಚುನಾವಣಾ ಆಯೋಗವು ಕಾಯಲಿದೆ ಎಂದು ಕುಮಾರ್ ಹೇಳಿದ್ದಾರೆ.


ಕರ್ನಾಟಕ ವಿಧಾನಸಭೆಗೆ ಚುನಾವಣೆಯನ್ನು ಘೋಷಿಸುವ ಸಂದರ್ಭದಲ್ಲಿ ಮಾತನಾಡಿದ ಕುಮಾರ್ ಚುನಾವಣಾ ಆಯೋಗ ರಾಜಕೀಯದಲ್ಲಿಲ್ಲ ಎಂದು ಹೇಳಿದರು. ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 151 ರ ಅಡಿಯಲ್ಲಿ, ಆಯೋಗವು ವಯನಾಡ್ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಆರು ತಿಂಗಳ ಕಾಲಾವಕಾಶವಿದೆ. ಏತನ್ಮಧ್ಯೆ, ರಾಹುಲ್ ಗಾಂಧಿ ಅವರಿಗೆ ನ್ಯಾಯಾಂಗ ಪರಿಹಾರವನ್ನು ಕೇಳಲು ವಿಚಾರಣಾ ನ್ಯಾಯಾಲಯವು ಮೂವತ್ತು ದಿನಗಳ ಕಾಲಾವಕಾಶವನ್ನು ನೀಡಿದೆ. ಆದ್ದರಿಂದ ನಾವು ಕಾಯುತ್ತೇವೆ. ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Wed, 29 March 23

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us