AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ವೈರಲ್: ಇತ್ತೀಚೆಗೆ ಊಟಿಗೆ ಭೇಟಿ ನೀಡಿದ್ದ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಏನು ಮಾಡಿದರು ನೋಡಿ!

Rahul Gandhi: ಇತ್ತೀಚೆಗೆ ಊಟಿಗೆ ಭೇಟಿ ನೀಡಿದ್ದ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಅವರು ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಮಹಿಳೆಯರಿಂದರೊಂದಿಗೆ ಚಾಕಲೇಟ್ ಮಾಡುವುದ ಕಲಿತೆ. ಫ್ಯಾಕ್ಟರಿಯಲ್ಲಿ ಚಾಕಲೇಟ್ ತಯಾರಿಸುವ ಪ್ರಕ್ರಿಯೆಯನ್ನು ಆದ್ಯಂತವಾಗಿ ಕಲಿತೆ. ಮೇಲಾಗಿ, ಆ ಮಹಿಳೆಯರಿಗೆ ಸರಿಸಮಾನವಾಗಿ ನಿಂತು, ಚಾಕಲೇಟ್ ತಯಾರಿಸಿದೆ ಎಂದು ಟ್ವೀಟ್ ಮಾಡಿ ಹೇಳಿದ್ದಾರೆ.

ವಿಡಿಯೋ ವೈರಲ್: ಇತ್ತೀಚೆಗೆ ಊಟಿಗೆ ಭೇಟಿ ನೀಡಿದ್ದ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಏನು ಮಾಡಿದರು ನೋಡಿ!
ಊಟಿಗೆ ಭೇಟಿ ನೀಡಿದ್ದ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 28, 2023 | 9:11 AM

Share

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ, ವಯನಾಡ್​ ಸಂಸದ ರಾಹುಲ್ ಗಾಂಧಿ ಕೆಲ ಸಮಯದಿಂದ ಜನರೊಂದಿಗೆ ನಿರಂತರವಾಗಿ ಸಂಪರ್ಕ ಸಾಧಿಸುತ್ತಿದ್ದಾರೆ. ಅವರು ಹೆಚ್ಚಾಗಿ ಜನ ಸಂಪರ್ಕ ಪ್ರವಾಸಗಳಲ್ಲಿ ನಿರತರಾಗಿದ್ದಾರೆ ಎಂದು ಹೇಳಬಹುದು. ಸ್ಥಳೀಯ ಜನರೊಂದಿಗೆ ಆತ್ಮೀಯವಾಗಿ ಸಡಗರದಿಂದ ಅವರು ಬೆರೆಯುತ್ತಾರೆ. ಇತ್ತೀಚೆಗೆ ಅವರು ಊಟಿಗೆ ತೆರಳಿದ್ದರು. ವಯನಾಡಿಗೆ ಹೋಗುವಾಗ ದಾರಿಯಲ್ಲಿ ಊಟಿಯಲ್ಲಿರುವ (Nilgiris, Ooty) ಚಾಕೊಲೇಟ್ ಫ್ಯಾಕ್ಟರಿಗೆ (Chocolate) ಭೇಟಿ ಮಾಡಿದ್ದಾರೆ. ಅಲ್ಲಿರುವ ಚಾಕೊಲೇಟ್ ಕಾರ್ಖಾನೆಗೆ ಭೇಟಿ ನೀಡಿದ ರಾಹುಲ್ ಗಾಂಧಿ ಅಲ್ಲಿನ ಕಾರ್ಮಿಕರೊಂದಿಗೆ ಬೆರೆತು, ಚಾಕಲೇಟ್ ತಯಾರಿಸುವುದನ್ನು ಕಲಿತುಕೊಂಡರು. ಹೌದು, ಸದಾ ರಾಜಕೀಯದಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಊಟಿಯಲ್ಲಿ ಸದ್ದು ಮಾಡಿದ್ದಾರೆ.

ಚಾಕಲೇಟ್ ಫ್ಯಾಕ್ಟರಿ ಯಶಸ್ವಿಯಾಗಿ ನಡೆಯುತ್ತಿದ್ದು, ಅಲ್ಲಿರುವ ಕಾರ್ಮಿಕರೆಲ್ಲರೂ ಮಹಿಳೆಯರೇ ಎಂಬುದು ರಾಹುಲ್ ಗಾಂಧಿ ತಿಳಿದುಕೊಂಡರು. ಅದಲ್ಲದೆ, ಅವರು ಅಲ್ಲಿನ ಮಹಿಳಾ ಕಾರ್ಮಿಕರನ್ನು ಹೊಗಳಿದರು. ಆ ಕಾರ್ಖಾನೆಯಲ್ಲಿ ಸುಮಾರು 70 ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಚಾಕಲೇಟ್ ಫ್ಯಾಕ್ಟರಿಯಲ್ಲಿ ತಯಾರಾಗುತ್ತಿರುವ ಚಾಕಲೇಟ್ ರುಚಿ ನೋಡಿದ ರಾಹುಲ್ ಗಾಂಧಿ ವ್ಹಾವ್ ಎಂದು ಉದ್ಘಾರ ತೆಗೆದಿದ್ದಾರೆ. ಈ ವಿಡಿಯೋವನ್ನು ಸ್ವತಃ ರಾಹುಲ್ ಗಾಂಧಿ ಅವರು ಚಾಕೊಲೇಟ್ ಫ್ಯಾಕ್ಟರಿಯಲ್ಲಿದ್ದಾಗ ಶೇರ್ ಮಾಡಿದ್ದಾರೆ.

ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಮಹಿಳೆಯರಿಂದರೊಂದಿಗೆ ಚಾಕಲೇಟ್ ಮಾಡುವುದ ಕಲಿತೆ. ಫ್ಯಾಕ್ಟರಿಯಲ್ಲಿ ಚಾಕಲೇಟ್ ತಯಾರಿಸುವ ಪ್ರಕ್ರಿಯೆಯನ್ನು ಆದ್ಯಂತವಾಗಿ ಕಲಿತೆ. ಮೇಲಾಗಿ, ಆ ಮಹಿಳೆಯರಿಗೆ ಸರಿಸಮಾನವಾಗಿ ನಿಂತು, ಚಾಕಲೇಟ್ ತಯಾರಿಸಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ಹೇಳಿದ್ದಾರೆ.

ಆಗ ಈ ಕಾರ್ಖಾನೆ ತಯಾರಿಸುವ ಹೋಂ ಮೇಡ್​​ ಚಾಕಲೇಟ್ ಎಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ ಎಂದು ಕಾರ್ಖಾನೆ ಮಾಲೀಕರನ್ನು ರಾಹುಲ್ ಕೇಳಿ ತಿಳಿದುಕೊಂಡರು. ಶೇ. 18 ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿದೆ ಎಂದು ತಿಳಿದ ರಾಹುಲ್, ಈ ಸಮಸ್ಯೆ ಕೇವಲ ನಿಮ್ಮದಲ್ಲ, ಇಡೀ ದೇಶಕ್ಕೆ ಇದೆ ಎಂದು ಹೇಳಿದರು. ಬಳಿಕ ರಾಹುಲ್ ಕಾರ್ಮಿಕರೊಬ್ಬರ ಮಗುವಿಗೆ ಆಟೋಗ್ರಾಫ್ ನೀಡಿ, ಫೋಟೋ ತೆಗೆಸಿಕೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:10 am, Mon, 28 August 23

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ