AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡು ಪ್ರವಾಹ; ಬೇರೆಯವರ ಮಗುವನ್ನು ಉಳಿಸಲು ಹೋಗಿ ತನ್ನ ಮಗಳನ್ನೇ ಕಳೆದುಕೊಂಡ ತಾಯಿ

ಕೇರಳದ ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಭೂಕುಸಿತ ಸಂಭವಿಸಿ ಈಗಾಗಲೇ 120ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ. ಈ ನಡುವೆ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡವರ ಗೋಳು ಮುಗಿಲುಮುಟ್ಟುವಂತಿದೆ. ಮೆಪ್ಪಾಡಿಯ ಚೂರಲ್ಮಲಾದಲ್ಲಿ ಬೇರೆ ಮಗುವಿನ ಜೀವ ಉಳಿಸಿದ ತಾಯಿ ತನ್ನ ಮಗಳ ಪ್ರಾಣ ಕಾಪಾಡಲು ಸಾಧ್ಯವಾಗದೆ ಕಣ್ಣೀರು ಹಾಕುತ್ತಿದ್ದಾರೆ.

ವಯನಾಡು ಪ್ರವಾಹ; ಬೇರೆಯವರ ಮಗುವನ್ನು ಉಳಿಸಲು ಹೋಗಿ ತನ್ನ ಮಗಳನ್ನೇ ಕಳೆದುಕೊಂಡ ತಾಯಿ
ಚೂರಲ್ಮಲಾ ಭೂಕುಸಿತ
Follow us
ಸುಷ್ಮಾ ಚಕ್ರೆ
|

Updated on: Jul 31, 2024 | 3:48 PM

ಮೆಪ್ಪಾಡಿ: ಕೇರಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಧಾರಾಕಾರ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯಾರದ್ದೋ ಮಗುವನ್ನು ರಕ್ಷಿಸುವ ಪ್ರಯತ್ನದಲ್ಲಿ ಪ್ರಜಿತಾ ಎಂಬ ಮಹಿಳೆ ತನ್ನ ಸ್ವಂತ ಮಗಳನ್ನು ಕಳೆದುಕೊಂಡಿದ್ದಾರೆ. ಪ್ರವಾಹದ ನೀರಿನಲ್ಲಿ ಸಿಲುಕಿದ ಮಗುವನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಪ್ರಜಿತಾ ಅವರ 10 ವರ್ಷದ ಮಗಳು ಅಹನ್ಯಾಗೆ ಕರೆಂಟ್ ಹೊಡೆದು ಸಾವನ್ನಪ್ಪಿದ್ದಾಳೆ. ಅಹನ್ಯಾಳನ್ನು ಎಳೆಯಲು ಹೋದ ಪ್ರಜಿತಾ ಕುಟುಂಬಸ್ಥರಿಗೂ ಗಾಯಗಳಾಗಿವೆ.

ಪ್ರಜಿತಾ, ಆಕೆಯ ತಾಯಿ ಶೋಭಾ ಹಾಗೂ ಆಕೆಯ ಮಾವ ಗಂಭೀರವಾಗಿ ಗಾಯಗೊಂಡು ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಜಿತಾ ಅವರ ಮುಖ ಮತ್ತು ತೊಡೆಯ ಮೂಳೆಗೆ ತೀವ್ರ ಗಾಯಗಳಾಗಿವೆ. ಶೋಭಾ ಅವರ ಪಕ್ಕೆಲುಬಿಗೆ ಕೂಡ ಗಾಯವಾಗಿದೆ.

ಪ್ರಜಿತಾ ಅವರ ಮನೆ ಮತ್ತು ಪಕ್ಕದ ಹೋಂಸ್ಟೇ ಚೂರಲ್ಮಲಾ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಹಿಂದೆ ಇತ್ತು. ಸುರಕ್ಷಿತ ವಲಯ ಎಂದು ಪರಿಗಣಿಸಲ್ಪಟ್ಟಿದ್ದ ಚೂರಲ್ಮಲಾದ ಸ್ಥಳದಲ್ಲಿಯೇ ಈ ದುರಂತ ಸಂಭವಿಸಿದೆ. ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದಾಗಿ ಚೂರಲ್ಮಲಾ ಮತ್ತು ಮುಂಡಕಾಯಮ್‌ನ ಎತ್ತರದ ಪ್ರದೇಶದ ಎಲ್ಲ ಜನರು ಈ ಶಾಲೆಯಲ್ಲಿ ವಾಸವಾಗಿದ್ದರು. ಇದು ಈ ಪ್ರದೇಶದ ಅತ್ಯಂತ ಸುರಕ್ಷಿತ ಸ್ಥಳವೂ ಆಗಿತ್ತು. ಇಲ್ಲಿ ಇಂತಹ ಅನಾಹುತ ಸಂಭವಿಸುತ್ತದೆ ಎಂದು ಯಾರೂ ಭಾವಿಸಿರಲಿಲ್ಲ.

ಇದನ್ನೂ ಓದಿ: ಕರ್ನಾಟಕದಲ್ಲೂ ಪ್ರವಾಹ, ಭೂಕುಸಿತ: ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಪ್ರಜಿತಾ ಮನೆಯಲ್ಲಿ ಮಲಗಿದ್ದಾಗ ದೊಡ್ಡ ಶಬ್ದ ಕೇಳಿದೆ. ಇದ್ದಕ್ಕಿದ್ದಂತೆ, ಬಾಗಿಲು ಮತ್ತು ಕಿಟಕಿಯಿಂದ ನೀರು ಒಳನುಗ್ಗಿತು. ಬಾಗಿಲು ತೆರೆದು ತಪ್ಪಿಸಿಕೊಳ್ಳಲು ಯತ್ನಿಸುವಷ್ಟರಲ್ಲಿ ಪ್ರವಾಹದ ನೀರು ಆಕೆಯನ್ನು ತಲುಪಿತ್ತು. ಆಗ ಆಕೆ ಮುರಿದ ಮರದ ಬಾಗಿಲನ್ನು ಹಿಡಿದುಕೊಂಡಿದ್ದಳು. ನೀರಿನಲ್ಲಿ ತೇಲುತ್ತಿದ್ದ ಮತ್ತೊಂದು ಮಗುವನ್ನು ರಕ್ಷಿಸುವ ವೇಳೆ ಪ್ರಜಿತಾ ಜೊತೆಗಿದ್ದ ಅವರ ಪುತ್ರಿ ಅಹನ್ಯಾ ಕಾಲು ಜಾರಿ ಬಿದ್ದಿದ್ದಾರೆ. ಆಗ ಆಕೆಗೆ ಕರೆಂಟ್ ಹೊಡೆದಿದೆ. ಪ್ರಜಿತಾ ಅವರ ಪತಿ ಮಧ್ಯಪ್ರಾಚ್ಯದಲ್ಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!