AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wayanad Landslides: ಭೂಕುಸಿತಗಳ ಸಂತ್ರಸ್ತರಿಗೆ ವಿಮೆಯ ಸೆಟಲ್​ಮೆಂಟ್​ಗಳನ್ನು ವೇಗಗೊಳಿಸಲು ಇನ್ಷುರನ್ಸ್ ಕಂಪನಿಗಳಿಗೆ ಸರ್ಕಾರ ಸೂಚನೆ

ಕೇರಳದ ವಯನಾಡಿನಲ್ಲಿ ಉಂಟಾದ ಭೂಕುಸಿತಕ್ಕೆ ಸಂಬಂಧಿಸಿದಂತೆ ಭೂಕುಸಿತದ ಸಂತ್ರಸ್ತರನ್ನು ಬೆಂಬಲಿಸಲು ಕ್ಲೈಮ್ ಸೆಟಲ್‌ಮೆಂಟ್‌ಗಳನ್ನು ತ್ವರಿತಗೊಳಿಸಲು ಎಲ್​ಐಸಿ, ಇತರ ವಿಮಾ ಪಿಎಸ್‌ಯುಗಳಿಗೆ ಸರ್ಕಾರ ಸೂಚಿಸಿದೆ. ವಯನಾಡ್, ಪಾಲಕ್ಕಾಡ್, ಕೋಝಿಕ್ಕೋಡ್, ಮಲಪ್ಪುರಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಸಹಾಯಕ್ಕಾಗಿ ಸಂಪರ್ಕ ವಿವರಗಳನ್ನು ಒದಗಿಸಲು ವಿಮಾ ಸಂಸ್ಥೆಗಳು ತಮ್ಮ ಪಾಲಿಸಿದಾರರನ್ನು ವಿವಿಧ ಚಾನೆಲ್‌ಗಳ ಮೂಲಕ (ಸ್ಥಳೀಯ ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು, ಕಂಪನಿಯ ವೆಬ್‌ಸೈಟ್‌ಗಳು, ಎಸ್‌ಎಂಎಸ್, ಇತ್ಯಾದಿ) ತಲುಪಲು ಪ್ರಯತ್ನಗಳನ್ನು ಪ್ರಾರಂಭಿಸಿವೆ.

Wayanad Landslides: ಭೂಕುಸಿತಗಳ ಸಂತ್ರಸ್ತರಿಗೆ ವಿಮೆಯ ಸೆಟಲ್​ಮೆಂಟ್​ಗಳನ್ನು ವೇಗಗೊಳಿಸಲು ಇನ್ಷುರನ್ಸ್ ಕಂಪನಿಗಳಿಗೆ ಸರ್ಕಾರ ಸೂಚನೆ
ಭೂಕುಸಿತ
Follow us
ಸುಷ್ಮಾ ಚಕ್ರೆ
|

Updated on: Aug 03, 2024 | 9:54 PM

ನವದೆಹಲಿ: ಭೂಕುಸಿತ, ಪ್ರವಾಹ ಮುಂತಾದ ಪ್ರಾಕೃತಿಕ ವಿಪತ್ತಿನ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಎಲ್‌ಐಸಿ, ಎನ್‌ಐಸಿಎಲ್, ನ್ಯೂ ಇಂಡಿಯಾ ಅಶ್ಯೂರೆನ್ಸ್, ಓರಿಯೆಂಟಲ್ ಇನ್ಶುರೆನ್ಸ್ ಮತ್ತು ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಮುಂತಾದ ವಿಮಾ ಕಂಪನಿಗಳಿಗೆ ಹಣಕಾಸು ಸಚಿವಾಲಯವು ಸೂಚನೆ ನೀಡಿದೆ. ಇದರಿಂದ ಸಂತ್ರಸ್ತರಿಗೆ ವಿಮಾ ಕ್ಲೈಮ್‌ಗಳನ್ನು ತ್ವರಿತವಾಗಿ ಪ್ರಕ್ರಿಯೆಗೊಳಿಸಲು ಸಾಧ್ಯವಾಗಲಿದೆ.

ಅತಿ ಹೆಚ್ಚು ಮಳೆಯು ಕೇರಳದ ವಯನಾಡಿನ ಗುಡ್ಡಗಾಡು ಪ್ರದೇಶಗಳಲ್ಲಿ ಮಾರಣಾಂತಿಕ ಭೂಕುಸಿತವನ್ನು ಉಂಟುಮಾಡಿದೆ. ಈ ನಡುವೆ ಕೇಂದ್ರ ಸರ್ಕಾರ ಇಂದು ಎಲ್ಲಾ ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ಕ್ಲೈಮ್ ಮೊತ್ತವನ್ನು ಸಂತ್ರಸ್ತರಿಗೆ ತ್ವರಿತವಾಗಿ ವಿತರಿಸಲು ಕಡ್ಡಾಯಗೊಳಿಸಿದೆ. ವಿಮಾ PSUಗಳೆಂದರೆ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC), ನ್ಯಾಷನಲ್ ಇನ್ಶುರೆನ್ಸ್, ನ್ಯೂ ಇಂಡಿಯಾ ಅಶ್ಯೂರೆನ್ಸ್, ಓರಿಯೆಂಟಲ್ ಇನ್ಶುರೆನ್ಸ್ ಮತ್ತು ಯುನೈಟೆಡ್ ಇಂಡಿಯಾ ಇನ್ಶುರೆನ್ಸ್.

ಇದನ್ನೂ ಓದಿ: Wayanad Landslide: ವಯನಾಡಿನಲ್ಲಿ ಕಾಂಗ್ರೆಸ್​ನಿಂದ 100ಕ್ಕೂ ಹೆಚ್ಚು ಮನೆಗಳ ನಿರ್ಮಾಣ; ರಾಹುಲ್ ಗಾಂಧಿ ಭರವಸೆ

“ಕೇರಳದಲ್ಲಿ ಸಂಭವಿಸಿದ ದುರದೃಷ್ಟಕರ ಭೂಕುಸಿತ ಘಟನೆ ಮತ್ತು ಭಾರೀ ಮಳೆಯ ದೃಷ್ಟಿಯಿಂದ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ), ರಾಷ್ಟ್ರೀಯ ವಿಮೆ, ನ್ಯೂ ಇಂಡಿಯಾ ಅಶ್ಯೂರೆನ್ಸ್, ಓರಿಯೆಂಟಲ್ ಇನ್ಶುರೆನ್ಸ್ ಮತ್ತು ಯುನೈಟೆಡ್ ಇಂಡಿಯಾ ಸೇರಿದಂತೆ ಸಾರ್ವಜನಿಕ ವಲಯದ ವಿಮಾ ಕಂಪನಿಗಳು ವಿಮಾ ಮೊತ್ತವನ್ನು ನೀಡುವುದನ್ನು ಸರ್ಕಾರವು ಕಡ್ಡಾಯಗೊಳಿಸಿದೆ.” ಎಂದು ಹಣಕಾಸು ಸಚಿವಾಲಯವು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ: ಕಾವೇರಿ ನದಿಗೆ ಜೀವಕಳೆ; ಮುಕ್ಕೊಂಬು ಅಣೆಕಟ್ಟಿನ ಡ್ರೋನ್ ವಿಡಿಯೋ ವೈರಲ್

ವಯನಾಡ್, ಪಾಲಕ್ಕಾಡ್, ಕೋಝಿಕ್ಕೋಡ್, ಮಲಪ್ಪುರಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಸಹಾಯಕ್ಕಾಗಿ ಸಂಪರ್ಕ ವಿವರಗಳನ್ನು ಒದಗಿಸಲು ವಿಮಾ ಕಂಪನಿಗಳು ತಮ್ಮ ಪಾಲಿಸಿದಾರರನ್ನು ವಿವಿಧ ಚಾನೆಲ್‌ಗಳ ಮೂಲಕ (ಸ್ಥಳೀಯ ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು, ಕಂಪನಿ ವೆಬ್‌ಸೈಟ್‌ಗಳು, ಎಸ್‌ಎಂಎಸ್, ಇತ್ಯಾದಿ) ತಲುಪಲು ಪ್ರಯತ್ನಗಳನ್ನು ಪ್ರಾರಂಭಿಸಿವೆ.

“ಪಿಎಂ ಜೀವನ್ ಜ್ಯೋತಿ ಬಿಮಾ ಯೋಜನೆ ಅಡಿಯಲ್ಲಿ ಪಾಲಿಸಿದಾರರಿಗೆ ಸಂಬಂಧಿಸಿದಂತೆ ಕ್ಲೈಮ್ ಮೊತ್ತವನ್ನು ತ್ವರಿತವಾಗಿ ವಿತರಿಸಲು ಎಲ್ಐಸಿಗೆ ಸೂಚಿಸಲಾಗಿದೆ. ಇದಕ್ಕಾಗಿ ಅಗತ್ಯವಾದ ದಾಖಲಾತಿಗಳ ನಿಯಮಗಳನ್ನು ಸಡಿಲಿಸಲಾಗಿದೆ” ಎಂದು ಹಣಕಾಸು ಸಚಿವಾಲಯವು ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?