AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ

ಕೊರೊನಾ ಮೂರನೇ ಅಲೆ ಬಗ್ಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಏಜೆನೆಟಿಸ್ಟ್, ಪ್ರೊಫೆಸರ್ ಜ್ಞಾನೇಶ್ವರ್ ಚೌಬೆ ಕೂಡ ಬಹುತೇಕ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 14, 2021 | 9:52 AM

Share

ಚಂಡೀಗಢ್​: ದೇಶವೀಗ ಕೊರೊನಾ ಮೂರನೇ ಅಲೆ (Corona 3rd Wave)ಯ ಪ್ರಾರಂಭದಲ್ಲಿದೆ. ಹಾಗಂತ ಈ ಅಲೆ ಮಕ್ಕಳ ಮೇಲೆ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದು ಚಂಡಿಗಢ್​​ನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ(PGIMER) ನಿರ್ದೇಶಕ ಡಾ. ಜಗತ್​ ರಾಮ್​ ಹೇಳಿದ್ದಾರೆ. ಅನೇಕ ಮಕ್ಕಳಲ್ಲಿ ಈಗಾಗಲೇ ಪ್ರತಿಕಾಯಗಳು ಉತ್ಪತ್ತಿಯಾಗಿವೆ. ಹಾಗಾಗಿ ಮೂರನೇ ಅಲೆ ಮಕ್ಕಳಿಗೆ ಮಾರಣಾಂತಿಕವಾಗಿ ಪರಿಣಮಿಸುವುದಿಲ್ಲ ಎಂದಿದ್ದಾರೆ. 

ಪಿಜಿಐಎಂಇಆರ್​​ನಿಂದ ಸರ್ವೇ ನಡೆಸಲಾಗಿತ್ತು. ಚಂಡಿಗಢ್​​ನಲ್ಲಿ ಸುಮಾರು 2700 ಮಕ್ಕಳನ್ನು ಸರ್ವೇಯಲ್ಲಿ ಒಳಗೊಳ್ಳಲಾಗಿತ್ತು. ಈ ವೇಳೆ ಶೇ.71ರಷ್ಟು ಮಕ್ಕಳಲ್ಲಿ ಆ್ಯಂಟಿಬಾಡಿ ಅಭಿವೃದ್ಧಿಯಾಗಿದ್ದು ಕಂಡುಬಂದಿದೆ. ಹಾಗಾಗಿ ಮಕ್ಕಳು ಮೂರನೇ ಅಲೆಯಿಂದ ತೀವ್ರವಾಗಿ ಬಾಧಿತರಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಜಗತ್​ ರಾಮ್​ ತಿಳಿಸಿದ್ದಾರೆ.  ಬರೀ ಚಂಡಿಗಢ್​​ನಲ್ಲಿ ಮಾತ್ರವಲ್ಲ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲೂ ಸರ್ವೇ ಮಾಡಲಾಗಿತ್ತು. ಅಲ್ಲೂ ಸಹ ಶೇ.50-75ರಷ್ಟು ಮಕ್ಕಳಲ್ಲಿ ಪ್ರತಿಕಾಯ ಉತ್ಪತ್ತಿಯಾಗಿದ್ದು ಕಂಡುಬಂದಿದೆ ಎಂದೂ ತಿಳಿಸಿದ್ದಾರೆ.

ಸದ್ಯಕ್ಕಂತೂ ಮಕ್ಕಳಿಗೆ ಒಂದೂ ಕೊರೊನಾ ಲಸಿಕೆ ಇಲ್ಲ. ಹಾಗಿದ್ದಾಗ್ಯೂ ಕೊವಿಡ್​ 19 ವಿರೋಧಿ ಪ್ರತಿಕಾಯ ಉತ್ಪತ್ತಿಯಾಗಿದೆ. ಈ ಹಿಂದೆ ಕೊರೊನಾ ವೈರಸ್​ ಮೂರನೇ ಅಲೆ ಬಂದರೆ ಅದು ಮಕ್ಕಳಿಗೇ ಹೆಚ್ಚು ಬಾಧಿಸುತ್ತದೆ ಎಂದು ಹೇಳಲಾಗಿತ್ತು. ಆದರೆ ಈ ಬೆಳವಣಿಗೆ ನೋಡಿದರೆ ನನಗಂತೂ ಹಾಗೆ ಅನ್ನಿಸುವುದಿಲ್ಲ ಎಂದಿದ್ದಾರೆ.  ಇನ್ನು ಕೊರೊನಾ ಮೂರನೇ ಅಲೆ ಅಷ್ಟು ಬೇಗ ಉತ್ತುಂಗಕ್ಕೆ ಏರುವುದಿಲ್ಲ. ಹಾಗಂತ ನಾವು ನಿರ್ಲಕ್ಷ್ಯ ಮಾಡುವಂತಿಲ್ಲ. ಮಾಸ್ಕ್​ಗಳನ್ನು ಕಡ್ಡಾಯವಾಗಿ ಧರಿಸಬೇಕು. ಎಲ್ಲ ಶಿಷ್ಟಾಚಾರಗಳನ್ನೂ ಸರಿಯಾಗಿ ಪಾಲಿಸಬೇಕು ಎಂದು ನಿರ್ದೇಶಕ ಡಾ. ರಾಮ್​ ತಿಳಿಸಿದ್ದಾರೆ.

3ನೇ ಅಲೆ ಮಾರಣಾಂತಿಕವಲ್ಲ ಇನ್ನು ಕೊರೊನಾ ಮೂರನೇ ಅಲೆ ಬಗ್ಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಏಜೆನೆಟಿಸ್ಟ್, ಪ್ರೊಫೆಸರ್ ಜ್ಞಾನೇಶ್ವರ್ ಚೌಬೆ ಕೂಡ ಬಹುತೇಕ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊರೊನಾ ವೈರಸ್​ ಮೂರನೇ ಅಲೆ ಮಾರಣಾಂತಿಕವಲ್ಲ ಎಂದಿದ್ದಾರೆ. ಕೊರೊನಾ ಲಸಿಕೆ ಪಡೆದವರು ಮತ್ತು ಈಗಾಗಲೇ ಒಮ್ಮೆ ಕೊವಿಡ್​ 19ಸೋಂಕಿಗೆ ಒಳಗಾಗಿ ಗುಣಮುಖರಾದವರು ಮೂರನೇ ಅಲೆಯಿಂದ ಅಷ್ಟೊಂದು ಬಾಧಿತರಾಗುವುದಿಲ್ಲ ಎಂದು ಹೇಳಿದ್ದಾರೆ.

ಪ್ರತಿಕಾಯಗಳು ಮೂರು ತಿಂಗಳ ನಂತರ ಕಡಿಮೆ ಆಗುತ್ತವೆ. ಹೀಗಾಗಿ ಇನ್ನು ಮೂರು ತಿಂಗಳ ನಂತರ ಕೊವಿಡ್​ 19 ಮೂರನೇ ಅಲೆ ಏಳಬಹುದು. ಆದರೂ ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿರುವುದರಿಂದ ಕೊವಿಡ್​ 19 3ನೇ ಅಲೆ ಮಾರಣಾಂತಿಕವಾಗಿರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ತೆರವುಗೊಳಿಸಬೇಕಾದ ಅನಧಿಕೃತ ದೇಗುಲಗಳ ಪಟ್ಟಿಗೆ ಸೇರಿರುವ ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರಗಳು ಇವು

ಕಾನೂನು ಪಾಲಕರಿಂದಲೇ ಕಾನೂನು ಉಲ್ಲಂಘನೆ! ಅನುಮತಿ ಪಡೆಯದೆ ಸರ್ಕಾರಿ ನಿವಾಸದಲ್ಲಿದ್ದ ಮರಗಳ ಕಡಿದ ಮಂಡ್ಯ ಎಸ್​ಪಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ