AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ

ಕೊರೊನಾ ಮೂರನೇ ಅಲೆ ಬಗ್ಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಏಜೆನೆಟಿಸ್ಟ್, ಪ್ರೊಫೆಸರ್ ಜ್ಞಾನೇಶ್ವರ್ ಚೌಬೆ ಕೂಡ ಬಹುತೇಕ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 14, 2021 | 9:52 AM

Share

ಚಂಡೀಗಢ್​: ದೇಶವೀಗ ಕೊರೊನಾ ಮೂರನೇ ಅಲೆ (Corona 3rd Wave)ಯ ಪ್ರಾರಂಭದಲ್ಲಿದೆ. ಹಾಗಂತ ಈ ಅಲೆ ಮಕ್ಕಳ ಮೇಲೆ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದು ಚಂಡಿಗಢ್​​ನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ(PGIMER) ನಿರ್ದೇಶಕ ಡಾ. ಜಗತ್​ ರಾಮ್​ ಹೇಳಿದ್ದಾರೆ. ಅನೇಕ ಮಕ್ಕಳಲ್ಲಿ ಈಗಾಗಲೇ ಪ್ರತಿಕಾಯಗಳು ಉತ್ಪತ್ತಿಯಾಗಿವೆ. ಹಾಗಾಗಿ ಮೂರನೇ ಅಲೆ ಮಕ್ಕಳಿಗೆ ಮಾರಣಾಂತಿಕವಾಗಿ ಪರಿಣಮಿಸುವುದಿಲ್ಲ ಎಂದಿದ್ದಾರೆ. 

ಪಿಜಿಐಎಂಇಆರ್​​ನಿಂದ ಸರ್ವೇ ನಡೆಸಲಾಗಿತ್ತು. ಚಂಡಿಗಢ್​​ನಲ್ಲಿ ಸುಮಾರು 2700 ಮಕ್ಕಳನ್ನು ಸರ್ವೇಯಲ್ಲಿ ಒಳಗೊಳ್ಳಲಾಗಿತ್ತು. ಈ ವೇಳೆ ಶೇ.71ರಷ್ಟು ಮಕ್ಕಳಲ್ಲಿ ಆ್ಯಂಟಿಬಾಡಿ ಅಭಿವೃದ್ಧಿಯಾಗಿದ್ದು ಕಂಡುಬಂದಿದೆ. ಹಾಗಾಗಿ ಮಕ್ಕಳು ಮೂರನೇ ಅಲೆಯಿಂದ ತೀವ್ರವಾಗಿ ಬಾಧಿತರಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಜಗತ್​ ರಾಮ್​ ತಿಳಿಸಿದ್ದಾರೆ.  ಬರೀ ಚಂಡಿಗಢ್​​ನಲ್ಲಿ ಮಾತ್ರವಲ್ಲ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲೂ ಸರ್ವೇ ಮಾಡಲಾಗಿತ್ತು. ಅಲ್ಲೂ ಸಹ ಶೇ.50-75ರಷ್ಟು ಮಕ್ಕಳಲ್ಲಿ ಪ್ರತಿಕಾಯ ಉತ್ಪತ್ತಿಯಾಗಿದ್ದು ಕಂಡುಬಂದಿದೆ ಎಂದೂ ತಿಳಿಸಿದ್ದಾರೆ.

ಸದ್ಯಕ್ಕಂತೂ ಮಕ್ಕಳಿಗೆ ಒಂದೂ ಕೊರೊನಾ ಲಸಿಕೆ ಇಲ್ಲ. ಹಾಗಿದ್ದಾಗ್ಯೂ ಕೊವಿಡ್​ 19 ವಿರೋಧಿ ಪ್ರತಿಕಾಯ ಉತ್ಪತ್ತಿಯಾಗಿದೆ. ಈ ಹಿಂದೆ ಕೊರೊನಾ ವೈರಸ್​ ಮೂರನೇ ಅಲೆ ಬಂದರೆ ಅದು ಮಕ್ಕಳಿಗೇ ಹೆಚ್ಚು ಬಾಧಿಸುತ್ತದೆ ಎಂದು ಹೇಳಲಾಗಿತ್ತು. ಆದರೆ ಈ ಬೆಳವಣಿಗೆ ನೋಡಿದರೆ ನನಗಂತೂ ಹಾಗೆ ಅನ್ನಿಸುವುದಿಲ್ಲ ಎಂದಿದ್ದಾರೆ.  ಇನ್ನು ಕೊರೊನಾ ಮೂರನೇ ಅಲೆ ಅಷ್ಟು ಬೇಗ ಉತ್ತುಂಗಕ್ಕೆ ಏರುವುದಿಲ್ಲ. ಹಾಗಂತ ನಾವು ನಿರ್ಲಕ್ಷ್ಯ ಮಾಡುವಂತಿಲ್ಲ. ಮಾಸ್ಕ್​ಗಳನ್ನು ಕಡ್ಡಾಯವಾಗಿ ಧರಿಸಬೇಕು. ಎಲ್ಲ ಶಿಷ್ಟಾಚಾರಗಳನ್ನೂ ಸರಿಯಾಗಿ ಪಾಲಿಸಬೇಕು ಎಂದು ನಿರ್ದೇಶಕ ಡಾ. ರಾಮ್​ ತಿಳಿಸಿದ್ದಾರೆ.

3ನೇ ಅಲೆ ಮಾರಣಾಂತಿಕವಲ್ಲ ಇನ್ನು ಕೊರೊನಾ ಮೂರನೇ ಅಲೆ ಬಗ್ಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಏಜೆನೆಟಿಸ್ಟ್, ಪ್ರೊಫೆಸರ್ ಜ್ಞಾನೇಶ್ವರ್ ಚೌಬೆ ಕೂಡ ಬಹುತೇಕ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊರೊನಾ ವೈರಸ್​ ಮೂರನೇ ಅಲೆ ಮಾರಣಾಂತಿಕವಲ್ಲ ಎಂದಿದ್ದಾರೆ. ಕೊರೊನಾ ಲಸಿಕೆ ಪಡೆದವರು ಮತ್ತು ಈಗಾಗಲೇ ಒಮ್ಮೆ ಕೊವಿಡ್​ 19ಸೋಂಕಿಗೆ ಒಳಗಾಗಿ ಗುಣಮುಖರಾದವರು ಮೂರನೇ ಅಲೆಯಿಂದ ಅಷ್ಟೊಂದು ಬಾಧಿತರಾಗುವುದಿಲ್ಲ ಎಂದು ಹೇಳಿದ್ದಾರೆ.

ಪ್ರತಿಕಾಯಗಳು ಮೂರು ತಿಂಗಳ ನಂತರ ಕಡಿಮೆ ಆಗುತ್ತವೆ. ಹೀಗಾಗಿ ಇನ್ನು ಮೂರು ತಿಂಗಳ ನಂತರ ಕೊವಿಡ್​ 19 ಮೂರನೇ ಅಲೆ ಏಳಬಹುದು. ಆದರೂ ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿರುವುದರಿಂದ ಕೊವಿಡ್​ 19 3ನೇ ಅಲೆ ಮಾರಣಾಂತಿಕವಾಗಿರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ತೆರವುಗೊಳಿಸಬೇಕಾದ ಅನಧಿಕೃತ ದೇಗುಲಗಳ ಪಟ್ಟಿಗೆ ಸೇರಿರುವ ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರಗಳು ಇವು

ಕಾನೂನು ಪಾಲಕರಿಂದಲೇ ಕಾನೂನು ಉಲ್ಲಂಘನೆ! ಅನುಮತಿ ಪಡೆಯದೆ ಸರ್ಕಾರಿ ನಿವಾಸದಲ್ಲಿದ್ದ ಮರಗಳ ಕಡಿದ ಮಂಡ್ಯ ಎಸ್​ಪಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ