AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ

ಕೊರೊನಾ ಮೂರನೇ ಅಲೆ ಬಗ್ಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಏಜೆನೆಟಿಸ್ಟ್, ಪ್ರೊಫೆಸರ್ ಜ್ಞಾನೇಶ್ವರ್ ಚೌಬೆ ಕೂಡ ಬಹುತೇಕ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Sep 14, 2021 | 9:52 AM

Share

ಚಂಡೀಗಢ್​: ದೇಶವೀಗ ಕೊರೊನಾ ಮೂರನೇ ಅಲೆ (Corona 3rd Wave)ಯ ಪ್ರಾರಂಭದಲ್ಲಿದೆ. ಹಾಗಂತ ಈ ಅಲೆ ಮಕ್ಕಳ ಮೇಲೆ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದು ಚಂಡಿಗಢ್​​ನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ(PGIMER) ನಿರ್ದೇಶಕ ಡಾ. ಜಗತ್​ ರಾಮ್​ ಹೇಳಿದ್ದಾರೆ. ಅನೇಕ ಮಕ್ಕಳಲ್ಲಿ ಈಗಾಗಲೇ ಪ್ರತಿಕಾಯಗಳು ಉತ್ಪತ್ತಿಯಾಗಿವೆ. ಹಾಗಾಗಿ ಮೂರನೇ ಅಲೆ ಮಕ್ಕಳಿಗೆ ಮಾರಣಾಂತಿಕವಾಗಿ ಪರಿಣಮಿಸುವುದಿಲ್ಲ ಎಂದಿದ್ದಾರೆ. 

ಪಿಜಿಐಎಂಇಆರ್​​ನಿಂದ ಸರ್ವೇ ನಡೆಸಲಾಗಿತ್ತು. ಚಂಡಿಗಢ್​​ನಲ್ಲಿ ಸುಮಾರು 2700 ಮಕ್ಕಳನ್ನು ಸರ್ವೇಯಲ್ಲಿ ಒಳಗೊಳ್ಳಲಾಗಿತ್ತು. ಈ ವೇಳೆ ಶೇ.71ರಷ್ಟು ಮಕ್ಕಳಲ್ಲಿ ಆ್ಯಂಟಿಬಾಡಿ ಅಭಿವೃದ್ಧಿಯಾಗಿದ್ದು ಕಂಡುಬಂದಿದೆ. ಹಾಗಾಗಿ ಮಕ್ಕಳು ಮೂರನೇ ಅಲೆಯಿಂದ ತೀವ್ರವಾಗಿ ಬಾಧಿತರಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಜಗತ್​ ರಾಮ್​ ತಿಳಿಸಿದ್ದಾರೆ.  ಬರೀ ಚಂಡಿಗಢ್​​ನಲ್ಲಿ ಮಾತ್ರವಲ್ಲ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲೂ ಸರ್ವೇ ಮಾಡಲಾಗಿತ್ತು. ಅಲ್ಲೂ ಸಹ ಶೇ.50-75ರಷ್ಟು ಮಕ್ಕಳಲ್ಲಿ ಪ್ರತಿಕಾಯ ಉತ್ಪತ್ತಿಯಾಗಿದ್ದು ಕಂಡುಬಂದಿದೆ ಎಂದೂ ತಿಳಿಸಿದ್ದಾರೆ.

ಸದ್ಯಕ್ಕಂತೂ ಮಕ್ಕಳಿಗೆ ಒಂದೂ ಕೊರೊನಾ ಲಸಿಕೆ ಇಲ್ಲ. ಹಾಗಿದ್ದಾಗ್ಯೂ ಕೊವಿಡ್​ 19 ವಿರೋಧಿ ಪ್ರತಿಕಾಯ ಉತ್ಪತ್ತಿಯಾಗಿದೆ. ಈ ಹಿಂದೆ ಕೊರೊನಾ ವೈರಸ್​ ಮೂರನೇ ಅಲೆ ಬಂದರೆ ಅದು ಮಕ್ಕಳಿಗೇ ಹೆಚ್ಚು ಬಾಧಿಸುತ್ತದೆ ಎಂದು ಹೇಳಲಾಗಿತ್ತು. ಆದರೆ ಈ ಬೆಳವಣಿಗೆ ನೋಡಿದರೆ ನನಗಂತೂ ಹಾಗೆ ಅನ್ನಿಸುವುದಿಲ್ಲ ಎಂದಿದ್ದಾರೆ.  ಇನ್ನು ಕೊರೊನಾ ಮೂರನೇ ಅಲೆ ಅಷ್ಟು ಬೇಗ ಉತ್ತುಂಗಕ್ಕೆ ಏರುವುದಿಲ್ಲ. ಹಾಗಂತ ನಾವು ನಿರ್ಲಕ್ಷ್ಯ ಮಾಡುವಂತಿಲ್ಲ. ಮಾಸ್ಕ್​ಗಳನ್ನು ಕಡ್ಡಾಯವಾಗಿ ಧರಿಸಬೇಕು. ಎಲ್ಲ ಶಿಷ್ಟಾಚಾರಗಳನ್ನೂ ಸರಿಯಾಗಿ ಪಾಲಿಸಬೇಕು ಎಂದು ನಿರ್ದೇಶಕ ಡಾ. ರಾಮ್​ ತಿಳಿಸಿದ್ದಾರೆ.

3ನೇ ಅಲೆ ಮಾರಣಾಂತಿಕವಲ್ಲ ಇನ್ನು ಕೊರೊನಾ ಮೂರನೇ ಅಲೆ ಬಗ್ಗೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಏಜೆನೆಟಿಸ್ಟ್, ಪ್ರೊಫೆಸರ್ ಜ್ಞಾನೇಶ್ವರ್ ಚೌಬೆ ಕೂಡ ಬಹುತೇಕ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊರೊನಾ ವೈರಸ್​ ಮೂರನೇ ಅಲೆ ಮಾರಣಾಂತಿಕವಲ್ಲ ಎಂದಿದ್ದಾರೆ. ಕೊರೊನಾ ಲಸಿಕೆ ಪಡೆದವರು ಮತ್ತು ಈಗಾಗಲೇ ಒಮ್ಮೆ ಕೊವಿಡ್​ 19ಸೋಂಕಿಗೆ ಒಳಗಾಗಿ ಗುಣಮುಖರಾದವರು ಮೂರನೇ ಅಲೆಯಿಂದ ಅಷ್ಟೊಂದು ಬಾಧಿತರಾಗುವುದಿಲ್ಲ ಎಂದು ಹೇಳಿದ್ದಾರೆ.

ಪ್ರತಿಕಾಯಗಳು ಮೂರು ತಿಂಗಳ ನಂತರ ಕಡಿಮೆ ಆಗುತ್ತವೆ. ಹೀಗಾಗಿ ಇನ್ನು ಮೂರು ತಿಂಗಳ ನಂತರ ಕೊವಿಡ್​ 19 ಮೂರನೇ ಅಲೆ ಏಳಬಹುದು. ಆದರೂ ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿರುವುದರಿಂದ ಕೊವಿಡ್​ 19 3ನೇ ಅಲೆ ಮಾರಣಾಂತಿಕವಾಗಿರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ತೆರವುಗೊಳಿಸಬೇಕಾದ ಅನಧಿಕೃತ ದೇಗುಲಗಳ ಪಟ್ಟಿಗೆ ಸೇರಿರುವ ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರಗಳು ಇವು

ಕಾನೂನು ಪಾಲಕರಿಂದಲೇ ಕಾನೂನು ಉಲ್ಲಂಘನೆ! ಅನುಮತಿ ಪಡೆಯದೆ ಸರ್ಕಾರಿ ನಿವಾಸದಲ್ಲಿದ್ದ ಮರಗಳ ಕಡಿದ ಮಂಡ್ಯ ಎಸ್​ಪಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ