AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕುಸಿಯುತ್ತಿದೆ ಎನ್ನುವುದನ್ನು ನಾವು ಒಪ್ಪಿಕೊಳ್ಳಲೇಬೇಕು -ಕಪಿಲ್ ಸಿಬಲ್

ದೆಹಲಿ:ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್​ ಪಕ್ಷದ ಸದ್ಯದ ಪರಿಸ್ಥಿತಿಯ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಕಾಂಗ್ರೆಸ್ ಪರಿಣಾಮಕಾರಿ ಪರ್ಯಾಯ ಪಕ್ಷವೇ ಆಗಿಲ್ಲ’ ಕಾಂಗ್ರೆಸ್ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ಮಾತನಾಡಿರುವ ಕಪಿಲ್​ ಸಿಬಲ್​ ಮೊದಲನೇಯದಾಗಿ ಕಾಂಗ್ರೆಸ್ ಕುಸಿಯುತ್ತಿದೆ ಎನ್ನುವುದನ್ನ ನಾವು ಒಪ್ಪಿಕೊಳ್ಳಬೇಕು. ದೇಶದಲ್ಲಿ ಸಂವಹನ‌ ಕ್ರಾಂತಿಯಾದ ಮೇಲೆ ಚುನಾವಣೆಗಳು ಅಧ್ಯಕ್ಷೀಯ ಮಾದರಿಯಾಗಿ ಪರಿವರ್ತನೆಯಾಗಿವೆ. ಹೀಗಾಗಿ ಬಿಹಾರದಲ್ಲಿ ದೀರ್ಘಕಾಲದಿಂದ ಕಾಂಗ್ರೆಸ್ ಪರಿಣಾಮಕಾರಿ ಪರ್ಯಾಯ ಪಕ್ಷವೇ ಆಗಿಲ್ಲ. ‘ಕಾಂಗ್ರೆಸ್ ಆತ್ಮಾವಲೋಕನ […]

ಕಾಂಗ್ರೆಸ್ ಕುಸಿಯುತ್ತಿದೆ ಎನ್ನುವುದನ್ನು ನಾವು ಒಪ್ಪಿಕೊಳ್ಳಲೇಬೇಕು -ಕಪಿಲ್ ಸಿಬಲ್
ಕಪಿಲ್ ಸಿಬಲ್
ಪೃಥ್ವಿಶಂಕರ
|

Updated on:Nov 16, 2020 | 11:47 AM

Share

ದೆಹಲಿ:ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಕಾಂಗ್ರೆಸ್​ ಪಕ್ಷದ ಸದ್ಯದ ಪರಿಸ್ಥಿತಿಯ ಬಗ್ಗೆ ಹೇಳಿಕೆ ನೀಡಿದ್ದಾರೆ.

‘ಕಾಂಗ್ರೆಸ್ ಪರಿಣಾಮಕಾರಿ ಪರ್ಯಾಯ ಪಕ್ಷವೇ ಆಗಿಲ್ಲ’ ಕಾಂಗ್ರೆಸ್ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ಮಾತನಾಡಿರುವ ಕಪಿಲ್​ ಸಿಬಲ್​ ಮೊದಲನೇಯದಾಗಿ ಕಾಂಗ್ರೆಸ್ ಕುಸಿಯುತ್ತಿದೆ ಎನ್ನುವುದನ್ನ ನಾವು ಒಪ್ಪಿಕೊಳ್ಳಬೇಕು. ದೇಶದಲ್ಲಿ ಸಂವಹನ‌ ಕ್ರಾಂತಿಯಾದ ಮೇಲೆ ಚುನಾವಣೆಗಳು ಅಧ್ಯಕ್ಷೀಯ ಮಾದರಿಯಾಗಿ ಪರಿವರ್ತನೆಯಾಗಿವೆ. ಹೀಗಾಗಿ ಬಿಹಾರದಲ್ಲಿ ದೀರ್ಘಕಾಲದಿಂದ ಕಾಂಗ್ರೆಸ್ ಪರಿಣಾಮಕಾರಿ ಪರ್ಯಾಯ ಪಕ್ಷವೇ ಆಗಿಲ್ಲ.

‘ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಂಡಿಲ್ಲ’ ಉತ್ತರ ಪ್ರದೇಶದಲ್ಲಿ 25 ಕ್ಕೂ ಹೆಚ್ಚು ವರ್ಷಗಳಿಂದ ಕಾಂಗ್ರೆಸ್ ಪರ್ಯಾಯ ಪಕ್ಷವೇ ಆಗಿಲ್ಲ. ಅದರಿಂದ ಈ ಎರಡು ರಾಜ್ಯಗಳು ದೊಡ್ಡ ರಾಜ್ಯಗಳು. ನಾಮಕರಣಗೊಂಡ CWC ಸದಸ್ಯರಿಂದ ಪ್ರಶ್ನೆ ಮಾಡುವುದನ್ನ ನಾವು ನಿರೀಕ್ಷಿಸಲು ಸಾಧ್ಯವಿಲ್ಲ. cwc ಸದಸ್ಯರು ಚುನಾವಣೆಯಲ್ಲಿ ಕಾಂಗ್ರೆಸ್ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಲು ಸಾಧ್ಯವಿಲ್ಲ. ಕಳೆದ ಆರು ವರ್ಷಗಳಲ್ಲಿ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಂಡಿಲ್ಲ‌‌‌‌‌. ಹೀಗಾಗಿ ಈಗ ಆತ್ಮಾವಲೋಕನದ ಭರವಸೆ ಇಡಲು ಹೇಗೆ ಸಾಧ್ಯ?.

‘ಕಾಂಗ್ರೆಸ್ಸಿಗರಾಗಿ ನಮ್ಮ ನಿಷ್ಠೆಯನ್ನು ಅನುಮಾನಿಸಬಾರದು’ ನಾವೆಲ್ಲರೂ ಕಾಂಗ್ರೆಸ್ ಸಿದ್ದಾಂತಕ್ಕೆ ಬದ್ದರಾಗಿದ್ದೇವೆ. ಬೇರೆಯವರಂತೆ ನಾವು ಕೂಡ ನಿಷ್ಠೆ‌ ಇರುವ ಕಾಂಗ್ರೆಸ್ಸಿಗರು. ಕಾಂಗ್ರೆಸ್ಸಿಗರಾಗಿ ನಮ್ಮ ನಿಷ್ಠೆಯನ್ನು ಅನುಮಾನಿಸಬಾರದು. ನಾವು ಬೇರೆಯವರ ನಿಷ್ಠೆಯನ್ನು ಅನುಮಾನಿಸಲ್ಲ. ಕಾಂಗ್ರೆಸ್ ಪಕ್ಷದ ಇತ್ತೀಚಿನ ಸೋಲಿನ ಬಗ್ಗೆ ಹೈಕಮಾಂಡ್ ನಿಲುವುನ್ನ ನಾವು ಕೇಳಬೇಕಾಗಿದೆ. ಬಹುಶಃ ಹೈಕಮಾಂಡ್ ಎಲ್ಲವೂ ಚೆನ್ನಾಗಿಯೇ ಇದೆ ಎಂದುಕೊಂಡಿರಬಹುದು ಎಂದು ಕಪಿಲ್ ಸಿಬಲ್ ಹೇಳಿಕೆ ನೀಡಿದ್ದಾರೆ.

ಬಿಹಾರ ಮಾತ್ರವಲ್ಲದೇ , ದೇಶದ ಜನರು ಎಲ್ಲೇ ಉಪಚುನಾವಣೆ ನಡೆದರೂ ಕಾಂಗ್ರೆಸ್ ಅನ್ನು ಪರಿಣಾಮಕಾರಿ ಪರ್ಯಾಯ ಪಕ್ಷ ಎಂದು ಪರಿಗಣಿಸುತ್ತಿಲ್ಲ‌. ಸಹಜವಾಗಿಯೇ ಕಾಂಗ್ರೆಸ್​ ಪಕ್ಷವನ್ನು ಪರಿಣಾಮಕಾರಿ ಪರ್ಯಾಯ ಪಕ್ಷ ಎಂದು ಪರಿಗಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪ್ರತಿಕ್ರಿಯೆ ನೀಡಿದ್ದಾರೆ.

Published On - 11:36 am, Mon, 16 November 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?