AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು: ಜ್ಯೋತಿರ್ ಮಠದ ಶಂಕರಾಚಾರ್ಯ ಸ್ವಾಮೀಜಿ

ನಾಳೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಿದ್ದಾರೆ. ಈ ನಡುವೆ ಮಾತನಾಡಿದ ಉತ್ತರಾಖಂಡದಲ್ಲಿರುವ ಜ್ಯೋತಿರ್ ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮೋದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನಾವು ಮೋದಿ ವಿರೋಧಿಗಳಲ್ಲ. ಮೋದಿಯ ಅಭಿಮಾನಿಗಳು ಎಂದು ಹೇಳಿದ್ದಾರೆ.

ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು: ಜ್ಯೋತಿರ್ ಮಠದ ಶಂಕರಾಚಾರ್ಯ ಸ್ವಾಮೀಜಿ
ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು ಎಂದ ಜ್ಯೋತಿರ್ ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿImage Credit source: Vikram Sarma/outlookindia
Follow us
TV9 Web
| Updated By: Rakesh Nayak Manchi

Updated on:Jan 21, 2024 | 11:00 PM

ಡೆಹ್ರಾಡೂನ್, ಜ.21: ನಾಳೆ ಅಯೋಧ್ಯೆ ರಾಮ ಮಂದಿರ (Ayodhya Ram Mandir) ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಿದ್ದಾರೆ. ಈ ನಡುವೆ ಮಾತನಾಡಿದ ಉತ್ತರಾಖಂಡದಲ್ಲಿರುವ ಜ್ಯೋತಿರ್ ಮಠದ (Jyotir Math) ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮೋದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನಾವು ಮೋದಿ ವಿರೋಧಿಗಳಲ್ಲ. ಮೋದಿಯ ಅಭಿಮಾನಿಗಳು ಎಂದು ಹೇಳಿದ್ದಾರೆ.

ಆದಿ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಮೂಲ ಪೀಠಗಳಲ್ಲಿ ಉತ್ತರಾಖಂಡ್‌ ರಾಜ್ಯದ ಚಮೋಲಿ ಜಿಲ್ಲೆಯಲ್ಲಿರುವ ಜ್ಯೋತಿರ್ ಮಠ ಕೂಡ ಒಂದು. ಈ ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಶ್ರೀಗಳು ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: Ayodhya Ram Mandir: ಅಯೋಧ್ಯೆಯಲ್ಲಿ ಜ.22ರ ಮೋದಿ ಏನೇನು ಮಾಡ್ತಾರೆ? ಇಲ್ಲಿದೆ ವಿವರ

ಮೋದಿ ಪ್ರಧಾನಿಯಾದ ಮೇಲೆ ಹಿಂದೂಗಳ ಸ್ವಾಭಿಮಾನ ಹೆಚ್ಚಾಗಿದೆ. ನಾವು ಇದನ್ನು ಹಲವಾರು ಬಾರಿ ಸಾರ್ವಜನಿಕವಾಗಿ ಹೇಳಿದ್ದೇವೆ. ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು. ಪ್ರಧಾನಿ ನರೇಂದ್ರ ಮೋದಿಯನ್ನು ನಾವು ಸಾಕಷ್ಟು ಇಷ್ಟಪಡುತ್ತೇವೆ ಎಂದು ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಹೇಳಿದರು.

370ನೇ ವಿಧಿಯನ್ನು ರದ್ದುಗೊಳಿಸಿದಾಗ ನಾವು ಅದನ್ನು ಸ್ವಾಗತಿಸಲಿಲ್ಲವೇ ಎಂದು ಪ್ರಶ್ನಿಸಿದ ಅವಿಮುಕ್ತೇಶ್ವರಾನಂದ ಸರಸ್ವತಿ, ಸ್ವತಂತ್ರ ಭಾರತದಲ್ಲಿ ಯಾವ ಪ್ರಧಾನಿಯೂ ಹಿಂದೂಗಳ ಪರವಾಗಿ ನಿಂತಿರಲಿಲ್ಲ. ಮೋದಿಯಷ್ಟು ಯಾವ ಪ್ರಧಾನಿ ಹಿಂದೂಗಳ ಪರ ಧೈರ್ಯವಾಗಿ ನಿಂತಿರಲಿಲ್ಲ. ಹಿಂದೂ ಭಾವನೆಗಳನ್ನು ಬೆಂಬಲಿಸುವ ಮೋದಿಯನ್ನು ವಿರೋಧಿಸುವುದಿಲ್ಲ. ನಾವು ಮೋದಿ ವಿರೋಧಿ ಎಂದು ಸಾಬೀತುಪಡಿಸಿ ಎಂದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Sun, 21 January 24

ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್