AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು: ಜ್ಯೋತಿರ್ ಮಠದ ಶಂಕರಾಚಾರ್ಯ ಸ್ವಾಮೀಜಿ

ನಾಳೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಿದ್ದಾರೆ. ಈ ನಡುವೆ ಮಾತನಾಡಿದ ಉತ್ತರಾಖಂಡದಲ್ಲಿರುವ ಜ್ಯೋತಿರ್ ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮೋದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನಾವು ಮೋದಿ ವಿರೋಧಿಗಳಲ್ಲ. ಮೋದಿಯ ಅಭಿಮಾನಿಗಳು ಎಂದು ಹೇಳಿದ್ದಾರೆ.

ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು: ಜ್ಯೋತಿರ್ ಮಠದ ಶಂಕರಾಚಾರ್ಯ ಸ್ವಾಮೀಜಿ
ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು ಎಂದ ಜ್ಯೋತಿರ್ ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿImage Credit source: Vikram Sarma/outlookindia
TV9 Web
| Edited By: |

Updated on:Jan 21, 2024 | 11:00 PM

Share

ಡೆಹ್ರಾಡೂನ್, ಜ.21: ನಾಳೆ ಅಯೋಧ್ಯೆ ರಾಮ ಮಂದಿರ (Ayodhya Ram Mandir) ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಿದ್ದಾರೆ. ಈ ನಡುವೆ ಮಾತನಾಡಿದ ಉತ್ತರಾಖಂಡದಲ್ಲಿರುವ ಜ್ಯೋತಿರ್ ಮಠದ (Jyotir Math) ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮೋದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನಾವು ಮೋದಿ ವಿರೋಧಿಗಳಲ್ಲ. ಮೋದಿಯ ಅಭಿಮಾನಿಗಳು ಎಂದು ಹೇಳಿದ್ದಾರೆ.

ಆದಿ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಮೂಲ ಪೀಠಗಳಲ್ಲಿ ಉತ್ತರಾಖಂಡ್‌ ರಾಜ್ಯದ ಚಮೋಲಿ ಜಿಲ್ಲೆಯಲ್ಲಿರುವ ಜ್ಯೋತಿರ್ ಮಠ ಕೂಡ ಒಂದು. ಈ ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಶ್ರೀಗಳು ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: Ayodhya Ram Mandir: ಅಯೋಧ್ಯೆಯಲ್ಲಿ ಜ.22ರ ಮೋದಿ ಏನೇನು ಮಾಡ್ತಾರೆ? ಇಲ್ಲಿದೆ ವಿವರ

ಮೋದಿ ಪ್ರಧಾನಿಯಾದ ಮೇಲೆ ಹಿಂದೂಗಳ ಸ್ವಾಭಿಮಾನ ಹೆಚ್ಚಾಗಿದೆ. ನಾವು ಇದನ್ನು ಹಲವಾರು ಬಾರಿ ಸಾರ್ವಜನಿಕವಾಗಿ ಹೇಳಿದ್ದೇವೆ. ನಾವು ಮೋದಿ ವಿರೋಧಿಯಲ್ಲ, ನಾವು ಮೋದಿ ಅಭಿಮಾನಿಗಳು. ಪ್ರಧಾನಿ ನರೇಂದ್ರ ಮೋದಿಯನ್ನು ನಾವು ಸಾಕಷ್ಟು ಇಷ್ಟಪಡುತ್ತೇವೆ ಎಂದು ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಹೇಳಿದರು.

370ನೇ ವಿಧಿಯನ್ನು ರದ್ದುಗೊಳಿಸಿದಾಗ ನಾವು ಅದನ್ನು ಸ್ವಾಗತಿಸಲಿಲ್ಲವೇ ಎಂದು ಪ್ರಶ್ನಿಸಿದ ಅವಿಮುಕ್ತೇಶ್ವರಾನಂದ ಸರಸ್ವತಿ, ಸ್ವತಂತ್ರ ಭಾರತದಲ್ಲಿ ಯಾವ ಪ್ರಧಾನಿಯೂ ಹಿಂದೂಗಳ ಪರವಾಗಿ ನಿಂತಿರಲಿಲ್ಲ. ಮೋದಿಯಷ್ಟು ಯಾವ ಪ್ರಧಾನಿ ಹಿಂದೂಗಳ ಪರ ಧೈರ್ಯವಾಗಿ ನಿಂತಿರಲಿಲ್ಲ. ಹಿಂದೂ ಭಾವನೆಗಳನ್ನು ಬೆಂಬಲಿಸುವ ಮೋದಿಯನ್ನು ವಿರೋಧಿಸುವುದಿಲ್ಲ. ನಾವು ಮೋದಿ ವಿರೋಧಿ ಎಂದು ಸಾಬೀತುಪಡಿಸಿ ಎಂದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Sun, 21 January 24

Follow Us
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ