AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೆಷ್ಟು ದಿನ ಮುಂದುವರಿಯಲಿದೆ Delhi Chalo?-ರೈತ ನಾಯಕರ ನಿಲುವೇನು..?

ದೆಹಲಿ ಚಲೋ ಚಳುವಳಿ 31ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರ ಮತ್ತು ರೈತ ಒಕ್ಕೂಟಗಳ ನಿಲುವು ಗಮನಿಸಿದರೆ ಚಳುವಳಿ ಸುದೀರ್ಘ ಕಾಲ ಮುಂದುವರೆಯುವ ನಿರೀಕ್ಷೆ ಕಂಡುಬಂದಿದೆ

ಇನ್ನೆಷ್ಟು ದಿನ ಮುಂದುವರಿಯಲಿದೆ Delhi Chalo?-ರೈತ ನಾಯಕರ ನಿಲುವೇನು..?
ದೆಹಲಿಯ ಬುರಾರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮಹಿಳೆಯರು
Follow us
guruganesh bhat
| Updated By: Lakshmi Hegde

Updated on:Dec 26, 2020 | 4:53 PM

ದೆಹಲಿ: ಪ್ರಧಾನಿ ಮತ್ತು ಗೃಹ ಸಚಿವರ ಇತ್ತೀಚಿನ ಭಾಷಣಗಳನ್ನು ಕೇಳಿದ ನಂತರ ಕೇಂದ್ರ ಸರ್ಕಾರಕ್ಕೆ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಮನಸಿಲ್ಲ ಎಂದು ಅರಿವಾಗಿದೆ . ಆದರೂ, ನಮ್ಮ ಬೇಡಿಕೆಗಳು ಈಡೇರುವವರೆಗೂ ಚಳುವಳಿಯನ್ನು ಮುಂದುವರಿಸುತ್ತೇವೆ ಎಂದು ಅಖಿಲ ಭಾರತ ಕಿಸಾನ್ ಸಂಘರ್ಷ  ಸಮನ್ವಯ  ಸಮಿತಿ ಸದಸ್ಯ ಜಗಮೋಹನ್ ಸಿಂಗ್ ದೃಢಪಡಿಸಿದ್ದಾರೆ.

ಸರ್ಕಾರ ಮೊದಲು ಯಾವುದೇ ಚರ್ಚೆ ನಡೆಸದೇ ಕಾಯ್ದೆ ಜಾರಿಗೊಳಿಸಿತು. ನಂತರ ರೈತರ ಹಿತಕ್ಕಾಗಿ ಕಾಯ್ದೆಗಳನ್ನು ರೂಪಿಸಿದ್ದೇವೆ ಎಂದು ಘೋಷಿಸಿತು. ತಿದ್ದುಪಡಿಗಳನ್ನು ಜಾರಿಗೆ ತರುವ ಪ್ರಸ್ತಾಪ ನಮ್ಮೆದುರಿಗಿಟ್ಟಿತು. ಅಲ್ಲದೇ, ಕಾಯ್ದೆಗಳನ್ನು ಹಿಂಪಡೆಯುವುದಿಲ್ಲ ಎಂದಿತು. ಈ ಪ್ರಕ್ರಿಯೆಯೇ ಸಂಶಯಾಸ್ಪದವಾಗಿದೆ ಎಂದಿರುವ ಅವರು, ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ದೆಹಲಿಯ ಗಡಿಗಳನ್ನು ತೊರೆಯುವುದಿಲ್ಲ. ಪ್ರಜಾಪ್ರಭುತ್ವ ವಿರೋಧಿ ಧೋರಣೆಯ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.

ರೈತ ಚಳುವಳಿಯನ್ನು ಸೇರಿರುವ ಕೇರಳದ ಮಾಜಿ ಶಾಸಕ ಪಿ.ಕೃಷ್ಣ ಪ್ರಸಾದ್, ನಾವು ಯಾವುದೇ ಹಣಕ್ಕಾ​ಗಿ ಹೋರಾಟ ನಡೆಸುತ್ತಿಲ್ಲ. ರೈತರ ಶ್ರಮಕ್ಕೆ ಮೋಸವಾಗದಂತೆ ಸಮರ್ಪಕ ನೀತಿ ರೂಪಿಸಲು ಬೇಡಿಕೆಯಿಟ್ಟಿದ್ದೇವೆ. ನಮ್ಮ ಆಗ್ರಹದಲ್ಲಿ ಪ್ರಾಮಾಣಿಕತೆಯಿರುವ ಕಾರಣ ಸುದೀರ್ಘ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋ ದಿ ಮತ್ತು ಕೃಷಿ ಸಚಿವ ನರಂದ್ರ ಸಿಂಗ್ ತೋಮರ್  ಹೇಳಿಕೆಗಳಲ್ಲಿ ಸಾಮ್ಯತೆಯೇ ತೋರುತ್ತಿಲ್ಲ. ಡಿಸೆಂಬರ್ 5ರಂದು ಯಾವುದೇ ಪಕ್ಷದ ಹಿತಕ್ಕೆ ಬಲಿಯಾಗದೇ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವುದನ್ನು ಕೃಷಿ ಸಚಿವರು ಶ್ಲಾಘಿಸಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ, ನಮ್ಮ ಚಳುವಳಿಯನ್ನು ವಿಪಕ್ಷಗಳು ದಾರಿ ತಪ್ಪಿಸಿವೆ ಎಂದು ಆರೋಪಿಸಿದ್ದಾರೆ. ಈ ಎರಡೂ ಹೇಳಿಕೆಗಳಲ್ಲಿ ದ್ವಂದ್ವ ಎದ್ದು ಕಾಣುತ್ತಿದೆ ಎಂದು ರೈತ ನಾಯಕರು ಟೀಕಿಸಿದ್ದಾರೆ.

Delhi Chalo ರೈತ ಸಮುದಾಯದಲ್ಲಿ ಒಡಕು ಮೂಡಿಸಿದ ನೂತನ ಕೃಷಿ ಕಾಯ್ದೆಗಳು

Published On - 4:52 pm, Sat, 26 December 20

horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್