AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಮುಕ್ತ ಮನಸ್ಸಿನಿಂದ ಬಂದರೆ ನಾವು ಮಾತುಕತೆಗೆ ಸಿದ್ಧ: ಪ್ರತಿಭಟನಾ ರೈತರ ಸಂದೇಶ

ರೈತ ಸಂಘಟನೆಗಳು ಸರ್ಕಾರದ ಜೊತೆ ಮಾತನಾಡಲು ಸಿದ್ಧವಿವೆ. ಆದರೆ, ಸರ್ಕಾರ ಮಾತುಕತೆಗೆ ಮುಕ್ತ ಮನಸ್ಸಿನಿಂದ ಬರಬೇಕು. ಈ ಮೊದಲು ಇಟ್ಟು ಬೇಡಿಕೆಗಳನ್ನೇ ನಮ್ಮ ಮುಂದೆ ಇಡಬಾರದು ಎನ್ನುವ ಷರತ್ತನ್ನು ರೈತರು ಇಟ್ಟಿದ್ದಾರೆ.

ಸರ್ಕಾರ ಮುಕ್ತ ಮನಸ್ಸಿನಿಂದ ಬಂದರೆ ನಾವು ಮಾತುಕತೆಗೆ ಸಿದ್ಧ: ಪ್ರತಿಭಟನಾ ರೈತರ ಸಂದೇಶ
ಪ್ರತಿಭಟನಾ ರೈತರು
ರಾಜೇಶ್ ದುಗ್ಗುಮನೆ
| Edited By: |

Updated on:Dec 23, 2020 | 8:47 PM

Share

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಒಂದು ತಿಂಗಳು ಪೂರೈಸುತ್ತಾ ಬಂದಿದೆ. ಸರ್ಕಾರ ಈಗಾಗಲೇ ಕೆಲ ಸುತ್ತಿನ ಮಾತುಕತೆ ನಡೆಸಿದರೂ ಅದು ಫಲ ಕೊಡಲಿಲ್ಲ. ಈ ಬೆನ್ನಲ್ಲೇ ಪ್ರತಿಭಟನಾ ರೈತರು, ಸರ್ಕಾರ ಮುಕ್ತ ಮನಸ್ಸಿನಿಂದ ಬಂದರೆ ನಾವು ಮಾತುಕತೆಗೆ ಸಿದ್ಧ ಎನ್ನುವ ಸಂದೇಶ ರವಾನೆ ಮಾಡಿದ್ದಾರೆ.

ರೈತ ಸಂಘಟನೆಗಳು ಸರ್ಕಾರದ ಜೊತೆ ಮಾತನಾಡಲು ಸಿದ್ಧವಿವೆ. ಆದರೆ, ಸರ್ಕಾರ ಮಾತುಕತೆಗೆ ಮುಕ್ತ ಮನಸ್ಸಿನಿಂದ ಬರಬೇಕು. ಈ ಮೊದಲು ಇಟ್ಟು ಬೇಡಿಕೆಗಳನ್ನೇ ನಮ್ಮ ಮುಂದೆ ಇಡಬಾರದು. ನಾವು ಒಪ್ಪ ಬಹುದಾದ ಬೇಡಿಕೆ ನಮ್ಮ ಮುಂದಿಟ್ಟರೆ ನಾವು ಪ್ರತಿಭಟನೆ ಕೈ ಬಿಡುತ್ತೇವೆ ಎಂದು ಪ್ರತಿಭಟನೆಯಲ್ಲಿ ತೊಡಗಿರುವ ಸ್ವರಾಜ್​ ಇಂಡಿಯಾ ನಾಯಕ ಯೋಗೇಂದ್ರ ಯಾದವ್​ ಹೇಳಿದ್ದಾರೆ.

ಮತ್ತೊಂದು ಪ್ರತಿಭಟನಾ ನಿರತ ಗುಂಪಿನ ರೈತ ಶಿವಕುಮಾರ್​ ಕಕ್ಕ ಮಾತನಾಡಿ, ಪ್ರತಿಭಟನಾ ರೈತರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಎಂದಿಗೂ ಒಪ್ಪುವುದಿಲ್ಲ. ಅದನ್ನು ಕೈ ಬಿಡುವ ನಿರ್ಧಾರಕ್ಕೆ ಸರ್ಕಾರ ಬರಬೇಕು. ರೈತರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕಿದೆ ಎಂದು ಹೇಳಿದರು.

ಕಳೆದ ಮೂರುವಾರಗಳಿಂದ ದೆಹಲಿ ಹೊರಭಾಗದಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಅನುಮೋದಿಸಿರುವ ಕೃಷಿ ಕಾಯ್ದೆಯ ವಿರುದ್ಧ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ಮೊದಲಿನಿಂದಲೂ ಕೇಳಿಕೊಳ್ಳುತ್ತಾ ಬರುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

‘ಮೋದಿ ಮಧ್ಯಸ್ಥಿಕೆ ವಹಿಸಿದರೆ ರೈತರ ಪ್ರತಿಭಟನೆಗೆ ನಿಮಿಷದೊಳಗೆ ಅಂತ್ಯ ಹಾಡಬಹುದು’

Published On - 8:42 pm, Wed, 23 December 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು